AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಬೈಯಪ್ಪನಹಳ್ಳಿ – ಕೆಆರ್‌ ಪುರ ನಡುವೆ ಪ್ರಾಯೋಗಿಕ ಸಂಚಾರ ಆರಂಭಿಸಿದ ಮೆಟ್ರೋ; ಆಗಸ್ಟ್ ಅಂತ್ಯದ ವೇಳೆ ಸಿದ್ಧ

1 ನೇ ರೈಲು ಸಂಚಾರ ಪರೀಕ್ಷೆಯು ಸಂಜೆ 6.04 ಕ್ಕೆ ಕೆಆರ್​ ಪುರದಿಂದ ಬೈಯಪ್ಪನಹಳ್ಳಿ ನಡುವೆ ನಿಧಾನಗತಿಯಲ್ಲಿ ನಡೆಯಿತು. ರೈಲು ಮರಳಿ ಕೆಆರ್ ಪುರ ನಿಲ್ದಾಣಕ್ಕೆ ಹಿಂತಿರುಗಿತು ಎಂದು ಬಿಎಂಆರ್​​ಸಿಎಲ್ ತಿಳಿಸಿದೆ.

Namma Metro: ಬೈಯಪ್ಪನಹಳ್ಳಿ - ಕೆಆರ್‌ ಪುರ ನಡುವೆ ಪ್ರಾಯೋಗಿಕ ಸಂಚಾರ ಆರಂಭಿಸಿದ ಮೆಟ್ರೋ; ಆಗಸ್ಟ್ ಅಂತ್ಯದ ವೇಳೆ ಸಿದ್ಧ
ಮೆಟ್ರೋImage Credit source: PTI
TV9 Web
| Edited By: |

Updated on: Jul 27, 2023 | 2:57 PM

Share

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ಬೈಯಪ್ಪನಹಳ್ಳಿ – ಕೆಆರ್‌ ಪುರ ಮೆಟ್ರೊ ನಿಲ್ದಾಣಗಳ ನಡುವೆ ಬುಧವಾರ ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ಪ್ರತಿನಿತ್ಯ ವೈಟ್‌ಫೀಲ್ಡ್‌ಗೆ ತೆರಳುವ ಮತ್ತು ಅಲ್ಲಿಂದ ಬರುವ ಜನರಿಗೆ ಭರವಸೆ ಮೂಡಿಸಿದೆ. ಪರ್ಪಲ್ ಲೈನ್‌ನ ಪ್ರಮುಖ ವಿಭಾಗದಲ್ಲಿ ಪ್ರಾಯೋಗಿಕ ಸಂಚಾರ ಬುಧವಾರ ಸಂಜೆ 6 ಗಂಟೆಗೆ ಪ್ರಾರಂಭವಾಯಿತು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

1 ನೇ ರೈಲು ಸಂಚಾರ ಪರೀಕ್ಷೆಯು ಸಂಜೆ 6.04 ಕ್ಕೆ ಕೆಆರ್​ ಪುರದಿಂದ ಬೈಯಪ್ಪನಹಳ್ಳಿ ನಡುವೆ ನಿಧಾನಗತಿಯಲ್ಲಿ ನಡೆಯಿತು. ರೈಲು ಮರಳಿ ಕೆಆರ್ ಪುರ ನಿಲ್ದಾಣಕ್ಕೆ ಹಿಂತಿರುಗಿತು ಎಂದು ಬಿಎಂಆರ್​​ಸಿಎಲ್ ಟ್ವೀಟ್ ಮಾಡಿದೆ.

2023 ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವು ವಾರಗಳ ಮೊದಲು, ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರು 13.71 ಕಿಮೀ ವೈಟ್‌ಫೀಲ್ಡ್ (ಕಾಡುಗೋಡಿ) – ಕೃಷ್ಣರಾಜಪುರ (ಕೆಆರ್ ಪುರ) ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದ್ದರು. ಬೈಯಪ್ಪನಹಳ್ಳಿ-ಕೆಆರ್ ಪುರ ನಡುವಣ ಸಂಪರ್ಕ ಇಲ್ಲದ ಕಾರಣ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಫೀಡರ್ ಬಸ್ ಸೇವೆಗಳನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: BMRCL: ನಮ್ಮ ಮೆಟ್ರೋದಲ್ಲಿ ಹೃದಯಘಾತದಿಂದ ವ್ಯಕ್ತಿ ಸಾವು; ಬಿಎಂಆರ್​ಸಿಎಲ್ ವಿರುದ್ಧ ಎಫ್​ಐಆರ್ ದಾಖಲು

ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಆಗಸ್ಟ್ ಅಂತ್ಯದ ವೇಳೆಗೆ ಬೈಯಪ್ಪನಹಳ್ಳಿ – ಕೆಆರ್ ಪುರ ಮಾರ್ಗದಲ್ಲಿ ಮೆಟ್ರೋ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಬಿಎಂಆರ್​ಸಿಎಲ್ ಉದ್ದೇಶಿಸಿದೆ. ಸಂಚಾರ ಆರಂಭಗೊಂಡರೆ ಪ್ರಯಾಣಿಕರ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳವಾಗಬಹುದು ಎಂದು ಬಿಎಂಆರ್​ಸಿಎಲ್ ನಿರೀಕ್ಷಿಸುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ