AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಪ್ರಯಾಣಿಕರಿಗೆ ವಿಶೇಷ ಸೂಚನೆ; ಇಂದು ರಾತ್ರಿ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಇಂದು ಎಂಜಿ ರಸ್ತೆ ಹಾಗೂ ಟ್ರಿನಿಟಿ ಮೆಟ್ರೋ ನಿಲ್ದಾಣದ ನಡುವೆ ನಿರ್ವಹಣೆ ಕಾಮಗಾರಿ ಹಿನ್ನಲೆ ರಾತ್ರಿ 9.30 ಗಂಟೆಯಿಂದ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಿತಗೊಳಿಸಲಾಗಿದೆ.

ಮೆಟ್ರೋ ಪ್ರಯಾಣಿಕರಿಗೆ ವಿಶೇಷ ಸೂಚನೆ; ಇಂದು ರಾತ್ರಿ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರು ಮೆಟ್ರೋ
TV9 Web
| Edited By: |

Updated on:Jun 25, 2022 | 5:19 PM

Share

ಬೆಂಗಳೂರು: ಇಂದು ಶನಿವಾರ (ಜೂನ್ 25)ರಂದು ನಮ್ಮ ಮೆಟ್ರೋ(Namma Metro) ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಇಂದು ಎಂಜಿ ರಸ್ತೆ ಹಾಗೂ ಟ್ರಿನಿಟಿ ಮೆಟ್ರೋ ನಿಲ್ದಾಣದ ನಡುವೆ ನಿರ್ವಹಣೆ ಕಾಮಗಾರಿ ಹಿನ್ನಲೆ ರಾತ್ರಿ 9.30 ಗಂಟೆಯಿಂದ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನೇರಳೆ ಮಾರ್ಗದಲ್ಲಿ ಕೊನೆ ಮೆಟ್ರೋ ರೈಲು ಕೆಂಗೇರಿಯಿಂದ ಬೈಯಪ್ಪನಹಳ್ಳಿ ಕಡೆಗೆ ರಾತ್ರಿ 8.40ಕ್ಕೆ ಹೊರಡಲಿದೆ. ಬೈಯಪ್ಪನಹಳ್ಳಿಯಿಂದ ಕೆಂಗೇರಿ ಕಡೆ ರಾತ್ರಿ 9.30ಕ್ಕೆ ಮೆಟ್ರೋ ಸೇವೆ ಕೊನೆಯಾಗಲಿದೆ. ಭಾನುವಾರ ನೇರಳೆ ಮಾರ್ಗದಲ್ಲಿ ಎಂದಿನಂತೆ ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ಆರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ. Namma metro

ಜೂನ್ 25ರ ಶನಿವಾರದಂದು ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ನಡೆಸಲಾಗುತ್ತಿದ್ದು ಮೆಟ್ರೋ ಸೇವೆಯಲ್ಲಿ ವ್ಯತ್ಯಾಸವಾಗಲಿದೆ. ನೇರಳೆ ಮಾರ್ಗದಲ್ಲಿ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ವರೆಗೆ ವಾಣಿಜ್ಯ ಸೇವೆಯನ್ನು ಸ್ಥಗಿತಗೊಳಿಸಲಿದೆ. ಜೂನ್ 25ರ ಶನಿವಾರ ರಾತ್ರಿ 9.30 ಗಂಟೆಯಿಂದ ತಾತ್ಕಾಲಿಕವಾಗಿ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಇದನ್ನೂ ಓದಿ: ಶ್ರೀರಂಗಪಟ್ಟಣದ ದರಸಗುಪ್ಪೆ ಗೇಟ್ ಬಳಿ ಸ್ಕೂಟರ್​ಗೆ ಏಕಾಏಕಿ ಬೆಂಕಿ, ಇಬ್ಬರಿಗೆ ತೀವ್ರ ಸುಟ್ಟ ಗಾಯ

ನೇರಳೆ ಮಾರ್ಗದಲ್ಲಿ ಕೊನೆಯ ಮೆಟ್ರೋ ಸೇವೆಯು, ಕಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಕಡೆಗೆ ರಾತ್ರಿ 8.40 ಗಂಟೆಗೆ ಹೊರಡಲಿದೆ ಮತ್ತು ಬೈಯಪ್ಪನಹಳ್ಳಿಯಿಂದ ಕಂಗೇರಿ ಕಡೆಗೆ ಕೊನೆಯ ಮೆಟ್ರೋ ರೈಲು ಸೇವೆ ರಾತ್ರಿ 09.30 ಗಂಟೆಗೆ ಲಭ್ಯವಿರುತ್ತದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್ನಿಂದ ಬೈಯಪ್ಪನಹಳ್ಳಿ ನಿಲ್ದಾಣಕ್ಕೆ ಹೋಗುವ ಕೊನೆಯ ರೈಲು ಸೇವೆ ರಾತ್ರಿ 9.10 ಗಂಟೆಯವರೆಗೆ ಲಭ್ಯವಿರುತ್ತದೆ. ಇನ್ನು ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಿರುವುದಿಲ್ಲ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

Published On - 7:20 pm, Fri, 24 June 22

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ