ಮೆಟ್ರೋ ಪ್ರಯಾಣಿಕರೇ ಗಮನಿಸಿ: ನೇರಳೆ ಮಾರ್ಗ ಸಂಬಂಧ ಮಹತ್ವದ ಮಾಹಿತಿ ಹಂಚಿಕೊಂಡ BMRCL

ನೇರಳೆ ಮಾರ್ಗದ ಮೆಟ್ರೋ ಕಾಮಗಾರಿ ನಿಗದಿತ ಸಮಯಕ್ಕಿಂತ ಮೊದಲೇ ಪೂರ್ಣಗೊಂಡಿದ್ದು, ಭಾನುವಾರ ಬೆಳಿಗ್ಗೆ 7 ಗಂಟೆಯಿಂದಲೇ ರೈಲು ಸಂಚಾರ ಎಂದಿನಂತೆ ಆರಂಭವಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್ ಮೆಜೆಸ್ಟಿಕ್) ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 7 ಗಂಟೆಯಿಂದ 9ರ ವರೆಗೆ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಮೇ 29ರಂದು ಪ್ರಕಟಣೆ ಮೂಲಕ ಬಿಎಂಆರ್​​ಸಿಎಲ್​​ ತಿಳಿಸಿತ್ತು.

ಮೆಟ್ರೋ ಪ್ರಯಾಣಿಕರೇ ಗಮನಿಸಿ: ನೇರಳೆ ಮಾರ್ಗ ಸಂಬಂಧ ಮಹತ್ವದ ಮಾಹಿತಿ ಹಂಚಿಕೊಂಡ BMRCL
ಸಾಂದರ್ಭಿಕ ಚಿತ್ರ
Image Credit source: MURALI KUMAR K
Edited By:

Updated on: May 31, 2026 | 7:57 AM

ಬೆಂಗಳೂರು, ಮೇ 31: ನಿರ್ವಹಣಾ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ, ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆಗಳು ಇಂದು (ಮೇ 31) ಬೆಳಿಗ್ಗೆ 7 ಗಂಟೆಯಿಂದಲೇ ಸಂಪೂರ್ಣವಾಗಿ ಲಭ್ಯವಿರುತ್ತವೆ. ಹೀಗಾಗಿ ಪ್ರಯಾಣಿಕರು ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಬಿಎಂಆರ್​​ಸಿಎಲ್​​ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನೇರಳೆ ಮಾರ್ಗದ ಕೆಲ ನಿಲ್ದಾಣಗಳ ನಡುವೆ ಇಂದು ಸಂಚಾರ ವ್ಯತ್ಯಯದ ಬಗ್ಗೆ ಈ ಹಿಂದೆಯೇ BMRCL ಮಾಹಿತಿ ನೀಡಿತ್ತು.

BMRCL ಪ್ರಕಟಣೆಯಲ್ಲಿ ಏನಿದೆ?

ನೇರಳೆ ಮಾರ್ಗದಲ್ಲಿರುವ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ಭಾಗದಲ್ಲಿ ಅತ್ಯಗತ್ಯ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಕಾಮಗಾರಿಗಳನ್ನು ಸುಗಮವಾಗಿ ಮತ್ತು ಸುರಕ್ಷಿತವಾಗಿ ನಿರ್ವಹಿಸುವ ಉದ್ದೇಶದಿಂದ ಮೇ 31ರ ರೈಲು ಸಂಚಾರದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್ ಮೆಜೆಸ್ಟಿಕ್) ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 7 ಗಂಟೆಯಿಂದ 9ರ ವರೆಗೆ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ. ಬೆಳಿಗ್ಗೆ 9 ಗಂಟೆಯ ನಂತರ ಇಡೀ ನೇರಳೆ ಮಾರ್ಗದಲ್ಲಿ ಎಂದಿನಂತೆ ಸಾಮಾನ್ಯ ಸೇವೆಗಳು ಪುನರಾರಂಭಗೊಳ್ಳಲಿವೆ ಎಂದು ಮೇ 29ರಂದು ಪ್ರಕಟಣೆ ಮೂಲಕ ಬಿಎಂಆರ್​​ಸಿಎಲ್​​ ತಿಳಿಸಿತ್ತು. ಆದರೆ ನಿರ್ವಹಣಾ ಕಾಮಗಾರಿಗಳು ನಿಗದಿತ ಸಮಯಕ್ಕೂ ಮೊದಲೇ ಮುಗಿದಿರುವ ಕಾರಣ ಬೆಳಿಗ್ಗೆ 9 ಗಂಟೆಯ ಬದಲು 7 ಗಂಟೆಯಿಂದಲೇ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ಸಂಚಾರ ಸಹಜ ಸ್ಥಿತಿಗೆ ಮರಳಿದೆ.

ಇದನ್ನೂ ಓದಿ: ಹಳದಿ ಮಾರ್ಗದಲ್ಲಿ ಮೆಟ್ರೋ ರೈಲುಗಳ ಕೊರತೆ ಹಿನ್ನೆಲೆ ನಿತ್ಯ ಪರದಾಟ; BMRCL ವಿರುದ್ಧ ಪ್ರಯಾಣಿಕರ ಆಕ್ರೋಶ

ವಾರಾಂತ್ಯ ಪ್ರಯಾಣಿಕರು ನಿರಾಳ

ರಜೆಯ ದಿನವಾದ ಭಾನುವಾರವೇ ಮೆಟ್ರೋ ಸೇವೆಯಲ್ಲಿ ವ್ಯತ್ಯಯದ ಬಗ್ಗೆ ಬಿಎಂಆರ್​​ಸಿಎಲ್​​ ತಿಳಿಸಿದ್ದ ಕಾರಣ ಪ್ರಯಾಣಿಕರು ಕೊಂಚ ನಿರಾಸೆಗೊಂಡಿದ್ದರು. ಆದರೆ  ಬಿಎಂಆರ್​​ಸಿಎಲ್​​ ನೀಡಿರುವ ಸುದ್ದಿ ಅವರಿಗೀಗ ನಿರಾಳರಾಗುವಂತೆ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:54 am, Sun, 31 May 26

Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us