AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ರೆಡ್​​ ಲೈನ್​​ ಡಿಪಿಆರ್​​ಗೆ ಕೇಂದ್ರ ಸರ್ಕಾರದ ತಗಾದೆ: ಮರುಪರಿಶೀಲನೆಗೆ ಸೂಚನೆ

ಸರ್ಜಾಪುರ-ಹೆಬ್ಬಾಳ ಸಂಪರ್ಕಿಸುವ ನಮ್ಮ ಮೆಟ್ರೋ ರೆಡ್ ಲೈನ್ ಯೋಜನೆಯ ಡಿಪಿಆರ್​​ಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. 28,405 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಡಬಲ್ ಡೆಕ್ಕರ್ ಪ್ಲ್ಯಾನ್​​ಗೆ ಕೇಂದ್ರ ನೋ ಎಂದಿದ್ದು, ಯೋಜನೆ ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಹೀಗಾಗಿ ಕಾಮಗಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ನಮ್ಮ ಮೆಟ್ರೋ ರೆಡ್​​ ಲೈನ್​​ ಡಿಪಿಆರ್​​ಗೆ ಕೇಂದ್ರ ಸರ್ಕಾರದ ತಗಾದೆ: ಮರುಪರಿಶೀಲನೆಗೆ ಸೂಚನೆ
ಸಾಂದರ್ಭಿಕ ಚಿತ್ರImage Credit source: Google
ಕಿರಣ್​ ಸೂರ್ಯ
| Edited By: |

Updated on: Feb 12, 2026 | 11:48 AM

Share

ಬೆಂಗಳೂರು, ಫೆಬ್ರವರಿ 12: ನಮ್ಮ ಮೆಟ್ರೋ ರೈಲುಗಳ ಟಿಕೆಟ್​​ ದರ ಏರಿಕೆ ವಿಚಾರವಾಗಿ ಜಟಾಪಟಿ ಬೆನ್ನಲ್ಲೇ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬ್ಯಾಡ್​​ ನ್ಯೂಸ್​​ ಸಿಕ್ಕಿದೆ. ಬಹು ನಿರೀಕ್ಷಿತ ಮೆಟ್ರೋ ರೆಡ್​​ ಲೈನ್​​ನ ಸರ್ಜಾಪುರ ಟು ಹೆಬ್ಬಾಳ ಯೋಜನೆಯ ಡಿಪಿಆರ್​​ಗೆ ಕೇಂದ್ರ ಆಕ್ಷೇಪ ತೆಗೆದಿದ್ದು, ಡಬಲ್ ಡೆಕ್ಕರ್ ಪ್ಲ್ಯಾನ್​​ಗೆ ನೋ ಎಂದಿದೆ. ಹೀಗಾಗಿ ಮೆಟ್ರೋ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಮರ ಶುರುವಾಗುವ ಸಾಧ್ಯತೆ ಗೋಚರಿಸಿದೆ.

ಕೇಂದ್ರ ಸರ್ಕಾರದ ಆಕ್ಷೇಪ ಯಾಕೆ?

ಹೆಬ್ಬಾಳ-ಸರ್ಜಾಪುರ ಮೆಟ್ರೋ ಕಾರಿಡಾರ್‌ಗೆ 28,405 ಕೋಟಿ ಡಿಪಿಆರ್ ಹಿನ್ನೆಲೆ ಕೇಂದ್ರ ಸರ್ಕಾರ ತಗಾದೆ ತೆಗೆದಿದೆ. ಡಬಲ್ ಡೆಕ್ಕರ್ ಮಾಡೋದ್ರಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿರುವ ಕಾರಣ ರೆಡ್ ಲೈನ್ ಮೆಟ್ರೋ ಕಾರಿಡಾರ್​​ಗಳಲ್ಲಿ ಡಬಲ್ ಡೆಕ್ಕರ್ ಬೇಡ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಬೇಕಾದಲ್ಲಿ ಅಗತ್ಯ ಜಂಕ್ಷನ್​​ಗಳಲ್ಲಿ ಮಾತ್ರ ಡಬಲ್ ಡೆಕ್ಕರ್ ಮಾಡಲು ಒಪ್ಪಿಗೆ ಸೂಚಿಸಲಾಗಿದ್ದು, ಯೋಜನೆಯನ್ನು ಮರುಪರಿಶೀಲನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕೇಂದ್ರದ ಒಂದೇ ಸೂಚನೆಗೆ ಮೆಟ್ರೋ ಟಿಕೆಟ್ ದರ ಏರಿಕೆ ಕೈಬಿಟ್ಟ BMRCL

ಬೆಂಗಳೂರು ನಮ್ಮ ಮೆಟ್ರೋ 3ನೇ ಹಂತದಲ್ಲಿ ಸರ್ಜಾಪುರ – ಹೆಬ್ಬಾಳ ಸಂಪರ್ಕಿಸುವ ಕೆಂಪು ಮಾರ್ಗ ಯೋಜನೆಯ ಡಿಪಿಆರ್​​ಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ, ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿತ್ತು. ಸುಮಾರು 37 ಕಿ.ಮೀ ಉದ್ದದ, ಅಂದಾಜು 28,405 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ, 28 ನಿಲ್ದಾಣಗಳನ್ನು ಈ ಮಾರ್ಗ ಹೊಂದಲಿದೆ. ಐಟಿ ಕಾರಿಡಾರ್ ಮತ್ತು ಉತ್ತರ ಬೆಂಗಳೂರನ್ನು ಸಂಪರ್ಕಿಸುವ ಈ ಮೆಟ್ರೋ ಮಾರ್ಗ 4 ಪ್ರಮುಖ ಇಂಟರ್‌ಚೆಂಜ್ ಮಾರ್ಗಗಳನ್ನು ಸಂಪರ್ಕಿಸಲಿದೆ ಎಂದು ಹೇಳಲಾಗಿತ್ತು. 2031ರ ವೇಳೆಗೆ ಈ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆಯಿತ್ತಾದರೂ ಈಗ ಕೇಂದ್ರ ಸರ್ಕಾರ ಯೋಜನೆಯ ಡಿಪಿಆರ್​​ಗೆ ಆಕ್ಷೇಪ ತೆಗೆದ ಕಾರಣ, ಕಾಮಗಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು