AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ರೆಡ್​​ ಲೈನ್​​ ಡಿಪಿಆರ್​​ಗೆ ಕೇಂದ್ರ ಸರ್ಕಾರದ ತಗಾದೆ: ಮರುಪರಿಶೀಲನೆಗೆ ಸೂಚನೆ

ಸರ್ಜಾಪುರ-ಹೆಬ್ಬಾಳ ಸಂಪರ್ಕಿಸುವ ನಮ್ಮ ಮೆಟ್ರೋ ರೆಡ್ ಲೈನ್ ಯೋಜನೆಯ ಡಿಪಿಆರ್​​ಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. 28,405 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಡಬಲ್ ಡೆಕ್ಕರ್ ಪ್ಲ್ಯಾನ್​​ಗೆ ಕೇಂದ್ರ ನೋ ಎಂದಿದ್ದು, ಯೋಜನೆ ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಹೀಗಾಗಿ ಕಾಮಗಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ನಮ್ಮ ಮೆಟ್ರೋ ರೆಡ್​​ ಲೈನ್​​ ಡಿಪಿಆರ್​​ಗೆ ಕೇಂದ್ರ ಸರ್ಕಾರದ ತಗಾದೆ: ಮರುಪರಿಶೀಲನೆಗೆ ಸೂಚನೆ
ಸಾಂದರ್ಭಿಕ ಚಿತ್ರImage Credit source: Google
ಕಿರಣ್​ ಸೂರ್ಯ
| Edited By: |

Updated on: Feb 12, 2026 | 11:48 AM

Share

ಬೆಂಗಳೂರು, ಫೆಬ್ರವರಿ 12: ನಮ್ಮ ಮೆಟ್ರೋ ರೈಲುಗಳ ಟಿಕೆಟ್​​ ದರ ಏರಿಕೆ ವಿಚಾರವಾಗಿ ಜಟಾಪಟಿ ಬೆನ್ನಲ್ಲೇ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬ್ಯಾಡ್​​ ನ್ಯೂಸ್​​ ಸಿಕ್ಕಿದೆ. ಬಹು ನಿರೀಕ್ಷಿತ ಮೆಟ್ರೋ ರೆಡ್​​ ಲೈನ್​​ನ ಸರ್ಜಾಪುರ ಟು ಹೆಬ್ಬಾಳ ಯೋಜನೆಯ ಡಿಪಿಆರ್​​ಗೆ ಕೇಂದ್ರ ಆಕ್ಷೇಪ ತೆಗೆದಿದ್ದು, ಡಬಲ್ ಡೆಕ್ಕರ್ ಪ್ಲ್ಯಾನ್​​ಗೆ ನೋ ಎಂದಿದೆ. ಹೀಗಾಗಿ ಮೆಟ್ರೋ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಮರ ಶುರುವಾಗುವ ಸಾಧ್ಯತೆ ಗೋಚರಿಸಿದೆ.

ಕೇಂದ್ರ ಸರ್ಕಾರದ ಆಕ್ಷೇಪ ಯಾಕೆ?

ಹೆಬ್ಬಾಳ-ಸರ್ಜಾಪುರ ಮೆಟ್ರೋ ಕಾರಿಡಾರ್‌ಗೆ 28,405 ಕೋಟಿ ಡಿಪಿಆರ್ ಹಿನ್ನೆಲೆ ಕೇಂದ್ರ ಸರ್ಕಾರ ತಗಾದೆ ತೆಗೆದಿದೆ. ಡಬಲ್ ಡೆಕ್ಕರ್ ಮಾಡೋದ್ರಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿರುವ ಕಾರಣ ರೆಡ್ ಲೈನ್ ಮೆಟ್ರೋ ಕಾರಿಡಾರ್​​ಗಳಲ್ಲಿ ಡಬಲ್ ಡೆಕ್ಕರ್ ಬೇಡ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಬೇಕಾದಲ್ಲಿ ಅಗತ್ಯ ಜಂಕ್ಷನ್​​ಗಳಲ್ಲಿ ಮಾತ್ರ ಡಬಲ್ ಡೆಕ್ಕರ್ ಮಾಡಲು ಒಪ್ಪಿಗೆ ಸೂಚಿಸಲಾಗಿದ್ದು, ಯೋಜನೆಯನ್ನು ಮರುಪರಿಶೀಲನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಕೇಂದ್ರದ ಒಂದೇ ಸೂಚನೆಗೆ ಮೆಟ್ರೋ ಟಿಕೆಟ್ ದರ ಏರಿಕೆ ಕೈಬಿಟ್ಟ BMRCL

ಬೆಂಗಳೂರು ನಮ್ಮ ಮೆಟ್ರೋ 3ನೇ ಹಂತದಲ್ಲಿ ಸರ್ಜಾಪುರ – ಹೆಬ್ಬಾಳ ಸಂಪರ್ಕಿಸುವ ಕೆಂಪು ಮಾರ್ಗ ಯೋಜನೆಯ ಡಿಪಿಆರ್​​ಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ, ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿತ್ತು. ಸುಮಾರು 37 ಕಿ.ಮೀ ಉದ್ದದ, ಅಂದಾಜು 28,405 ಕೋಟಿ ವೆಚ್ಚದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ, 28 ನಿಲ್ದಾಣಗಳನ್ನು ಈ ಮಾರ್ಗ ಹೊಂದಲಿದೆ. ಐಟಿ ಕಾರಿಡಾರ್ ಮತ್ತು ಉತ್ತರ ಬೆಂಗಳೂರನ್ನು ಸಂಪರ್ಕಿಸುವ ಈ ಮೆಟ್ರೋ ಮಾರ್ಗ 4 ಪ್ರಮುಖ ಇಂಟರ್‌ಚೆಂಜ್ ಮಾರ್ಗಗಳನ್ನು ಸಂಪರ್ಕಿಸಲಿದೆ ಎಂದು ಹೇಳಲಾಗಿತ್ತು. 2031ರ ವೇಳೆಗೆ ಈ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆಯಿತ್ತಾದರೂ ಈಗ ಕೇಂದ್ರ ಸರ್ಕಾರ ಯೋಜನೆಯ ಡಿಪಿಆರ್​​ಗೆ ಆಕ್ಷೇಪ ತೆಗೆದ ಕಾರಣ, ಕಾಮಗಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್