Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ ಏರಿಕೆ: ಮೆಟ್ರೋ ಪ್ರಯಾಣಿಕರ ಪರ್ಯಾಯ ವ್ಯವಸ್ಥೆ, ಬೆಂಗಳೂರಿನಲ್ಲಿ ಶುರುವಾಯ್ತು ಟ್ರಾಫಿಕ್​ ಸಮಸ್ಯೆ

ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಗೆ ಮದ್ದು ಎರೆದಿದ್ದೇ ಮೆಟ್ರೋ. ಬೇಗ ಬೇಗ ಆಫೀಸ್, ಕಾಲೇಜಿಗೆ ಹೋಗಬೇಕೆಂದವರು ಮೆಟ್ರೋ ಹತ್ತಿದ್ರು. ಮಳೆ, ಚಳಿ, ಬಿಸಿಲು ಹಾಗೂ ಟ್ರಾಫಿಕ್ ಕಿರಿಕಿರಿ ಇಲ್ಲದೇ ನಮ್ಮ ಮೆಟ್ರೋನಲ್ಲಿ ಆರಾಮದಾಯಕ ಪ್ರಯಾಣ ಮಾಡುತ್ತಿದ್ದರು. ಆದ್ರೆ, ದರ ಏರಿಕೆ ಬರೆ ಎಳೆದುಬಿಟ್ಟಿದೆ. ಹೀಗಾಗಿ ಸ್ವಲ್ಪ ಕಷ್ಟ ಆದರೂ ಪರವಾಗಿಲ್ಲವೆಂದು ಜನರು ಮೆಟ್ರೋವನ್ನು ಧಿಕ್ಕರಿಸುತ್ತಿದ್ದಾರೆ.

ದರ ಏರಿಕೆ: ಮೆಟ್ರೋ ಪ್ರಯಾಣಿಕರ ಪರ್ಯಾಯ ವ್ಯವಸ್ಥೆ, ಬೆಂಗಳೂರಿನಲ್ಲಿ ಶುರುವಾಯ್ತು ಟ್ರಾಫಿಕ್​ ಸಮಸ್ಯೆ
Namma Metro
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Feb 15, 2025 | 2:49 PM

ಬೆಂಗಳೂರು, (ಫೆಬ್ರವರಿ 15): ನಮ್ಮ ಮೆಟ್ರೋ ದುಪ್ಪಟ್ಟು ದರ ಏರಿಕೆ ಮಾಡಿತ್ತು. ಜನಾಕ್ರೋಶ ಭುಗಿಲೆದ್ದ ಬಳಿಕ ಬಿಎಂಆರ್​ಸಿಎಲ್​ ಕೊಂಚ ಬೆಲೆ ಇಳಿಸಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿತ್ತು. ಆದ್ರೆ ಪ್ರಯಾಣಿಕರು ಮಾತ್ರ ಮೆಟ್ರೋದಿಂದ ಸ್ವಲ್ಪ ಸ್ವಲ್ಪವೇ ದೂರ ದೂರ ಉಳಿಯುತ್ತಿದ್ದಾರೆ. ಇದರಿಂದ ದಿನದಿಂದ ದಿನಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗುತ್ತಲೇ ಇದೆ. ಹೌದು…ಮೆಟ್ರೋ ಪ್ರಯಾಣ ದುಬಾರಿಯಾಗಿದ್ದರಿಂದ ಜನರು ಆರ್ಥಿಕ ಲೆಕ್ಕಾಚಾರದೊಂದಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ. ಕೆಲವರು ಬಿಎಂಟಿಸಿ ಬಸ್​ನತ್ತ ಮುಖ ಮಾಡುತ್ತಿದ್ದರೆ, ಇನ್ನೂ ಕೆಲವರು ಸ್ವಂತ ವಾಹನಗಳಲ್ಲಿ ಓಡಾಡಲು ಶುರು ಮಾಡಿದ್ದಾರೆ. ಹೀಗಾಗಿ ಮೆಟ್ರೋ ಪ್ರಯಾಣಿಕರಲ್ಲಿ ಕುಂಠಿತವಾಗಿದ್ದರೆ, ಟ್ರಾಫಿಕ್ ಸಮಸ್ಯೆ ಹೆಚ್ಚಳವಾಗುತ್ತಿದೆ.

ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಮುಖ

ಕಳೆದ ಸೋಮವಾರ 8 ಲಕ್ಷದ 28 ಸಾವಿರ ಮಂದಿ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದರು. ಮಾರನೇ ದಿನ ಅಂದ್ರೆ ಮಂಗಳವಾರ ಈ ಸಂಖ್ಯೆ 7 ಲಕ್ಷದ 78 ಸಾವಿರಕ್ಕೆ ಇಳಿಕೆಯಾಯ್ತು. ಇನ್ನು ಬುಧವಾರ 7 ಲಕ್ಷದ 62 ಸಾವಿರ ಮಂದಿ ಮೆಟ್ರೋದಲ್ಲಿ ಓಡಾಡಿದ್ರೆ ಗುರುವಾರ 7 ಲಕ್ಷದ 51 ಮಂದಿ ಪ್ರಯಾಣ ಬೆಳೆಸಿದ್ದಾರೆ.

ಇದನ್ನೂ ಓದಿ: ಜನಾಕ್ರೋಶ ಹಿನ್ನೆಲೆ ಪ್ರಯಾಣ ದರ ಸರಿಪಡಿಸಿದ ಮೆಟ್ರೋ: ಎಲ್ಲಿಂದ ಎಲ್ಲಿಗೆ ಎಷ್ಟು ಕಡಿಮೆಯಾಯ್ತು? ಇಲ್ಲಿದೆ ವಿವರ

ಮತ್ತಷ್ಟು ಟ್ರಾಫಿಕ್​ ಹೆಚ್ಚಳ

ಮೆಟ್ರೋದ ದರ ಏರಿಕೆಯ ಬಿಸಿ ಪ್ರಯಾಣಿಕರಿಗೆ ಮಾತ್ರವಲ್ಲ, ಟ್ರಾಫಿಕ್​ಗೂ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಯಾಕಂದ್ರೆ ಜನ ಮೆಟ್ರೋ ಹಾಗೂ ಖಾಸಗಿ ವಾಹನಗಳ ನಡುವಿನ ಖರ್ಚನ್ನು ತಾಳೆ ಹಾಕಿ ನೋಡುತ್ತಿದ್ದಾರೆ. ಹೀಗಾಗಿಯೇ ಸ್ವಂತ ವಾಹನಗಳ ಮೊರೆ ಹೋಗಿದ್ದಾರೆ ಎನ್ನಲಾಗ್ತಿದೆ. ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 1 ಕೋಟಿ 16 ಲಕ್ಷ ವಾಹನಗಳಿವೆ. ಸಿಟಿ ಮಂದಿ ಎಲ್ಲ ಖಾಸಗಿ ವಾಹನ ಬಳಸೋದಕ್ಕೆ ಶುರು ಮಾಡಿದ್ರೆ, ಟ್ರಾಫಿಕ್ ಸಮಸ್ಯೆ ಮತ್ತಷ್ಟು ಉಲ್ಭಣಗೊಳ್ಳಲಿದೆ.

ನಿರ್ವಹಣಾ ವೆಚ್ಚ ನಿಭಾಯಿಸಲು ಪ್ರಯಾಣಿಕರ ಮೇಲೆ ಹೊರೆ

ದೇಶದಲ್ಲಿ ಬೇರೆ ಬೇರೆ ಮೆಟ್ರೋಗಳಿಗೆ ಹೋಲಿಸಿದರೆ ನಮ್ಮ ಮೆಟ್ರೋ ತಾನು ಸೃಷ್ಟಿಸಿರುವ ಸ್ವತ್ತು ಮತ್ತು ರಿಯಲ್ ಎಸ್ಟೇಟ್ ಬಳಸಿಕೊಂಡು ಶುಲ್ಕೇತರ ಆದಾಯ ಗಳಿಸುವಲ್ಲಿ ಹಿಂದಿದೆ. ಹೀಗಾಗಿಯೇ ಮೆಟ್ರೋ ಪ್ರಯಾಣಿಕರ ಮೇಲೆ ಹೊರೆ ಹಾಕುತ್ತಿದೆ. ಹಣದುಬ್ಬರ, ಇಂಧನ ಹಾಗೂ ಕಾರ್ಯ ನಿರ್ವಹಣೆ ವೆಚ್ಚ ಅಧಿಕ ಆಗಿರುವುದು ದರ ಏರಿಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

2017ರ ಮಾರ್ಚ್​​ನಲ್ಲಿ 130.09 ಹಣದುಬ್ಬರವಿತ್ತು. ಈ ಅಂಕಿ 2024ಕ್ಕೆ 185ರಷ್ಟು ಹೆಚ್ಚಾಗಿದೆ. ಅಂದ್ರೆ ಶೇಕಾಡಾ 42ರಷ್ಟು ಏರಿಕೆ ಆಗಿದೆ. ಈ ಬದಲಾವಣೆ ನಿರ್ವಹಣೆ ವೆಚ್ಚದಲ್ಲಿ ಶೇಕಡಾ 6ರಷ್ಟು ಏರಿಕೆಯಾಗಿದೆ. ಇದರ ಪ್ರಕಾರ ಟಿಕೆಟ್ ವೆಚ್ಚ ಶೇಕಡಾ 25.58ರಷ್ಟು ಹೆಚ್ಚಿಸುವ ಅಗತ್ಯವಿದೆ. 2017ರಲ್ಲಿ ಮೆಟ್ರೋ ನಿರ್ವಹಣೆ ಹಾಗೂ ಆಡಳಿತಕ್ಕಾಗಿ 0.38ಕೋಟಿ ರೂಪಾಯಿ ವೆಚ್ಚ ಆಗ್ತಿತ್ತು. ಅಂದ್ರೆ ಶೇಕಡಾ 366 ವೆಚ್ಚ ಬದಲಾಗಿದೆ. ನಿರ್ವಹಣೆ ವೆಚ್ಚ ಶೇಕಡಾ 20ರಷ್ಟಿದ್ರೆ, ಶೇಕಡಾ 73.16ರಷ್ಟು ಟಿಕೆಟ್ ದರ ಹೆಚ್ಚಿಸುವ ಅಗತ್ಯ ನಿರ್ಮಾಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Sat, 15 February 25

ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್