ಸೆ.21ರಂದು ಕೆ.ಆರ್.ಪುರಂ-ಗರುಡಾಚಾರ್ ಪಾಳ್ಯ ನಡುವೆ ದಿನಪೂರ್ತಿ ನಮ್ಮ ಮೆಟ್ರೋ ಸೇವೆ ಬಂದ್

ಕೆಆರ್​ ಪುರ ಮತ್ತು ಗರುಡಾಚಾರ್‌ಪಾಳ್ಯದವರೆಗೆ ಇಡೀ ದಿನ ಮೆಟ್ರೋ ರೈಲು ಸಂಚಾರ ಸೇವೆ ಇರುವುದಿಲ್ಲ. ಬೈಯ್ಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1.30ರಿಂದ 4.30ರವರೆಗೆ ರೈಲು ಸಂಚರಿಸುವುದಿಲ್ಲ ಎಂದು ಬಿಎಂಆರ್​ಸಿಎಲ್​​ ತಿಳಿಸಿದೆ.

ಸೆ.21ರಂದು ಕೆ.ಆರ್.ಪುರಂ-ಗರುಡಾಚಾರ್ ಪಾಳ್ಯ ನಡುವೆ ದಿನಪೂರ್ತಿ ನಮ್ಮ ಮೆಟ್ರೋ ಸೇವೆ ಬಂದ್
ನಮ್ಮ ಮೆಟ್ರೋ
Edited By: ವಿವೇಕ ಬಿರಾದಾರ

Updated on: Sep 20, 2023 | 7:13 AM

ಬೆಂಗಳೂರು ಸೆ.20: ಗುರುವಾರ (ಸೆ.21) ರಂದು ಕೇಂದ್ರ ಮೆಟ್ರೋ (Metro) ರೈಲ್ವೆ ಸುರಕ್ಷತಾ ಆಯುಕ್ತರು ನಮ್ಮ ಮೆಟ್ರೋದ ಕೆ.ಆರ್​.ಪುರ-ಬೈಯಪ್ಪನಹಳ್ಳಿ (KR Puram-Baiyappanahalli) ಮಾರ್ಗವನ್ನು ಪರಿಶೀಲನೆ ಮಾಡುವ ಹಿನ್ನೆಲೆಯಲ್ಲಿ ಇಡೀ ದಿನ ನೇರಳೆ ಮಾರ್ಗದ (Purple Line) ಮೆಟ್ರೋ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಸೆ. 21 ರಂದು ಬೈಯ್ಯಪ್ಪನಹಳ್ಳಿಯಿಂದ ಕೆ.ಆರ್.ಪುರಂ ಮೆಟ್ರೋ ಮಾರ್ಗ ಹಾಗೂ ಚಲ್ಲಘಟ್ಟದಿಂದ ಕೆಂಗೇರಿವರೆಗೆ ಸುರಕ್ಷತಾ ಪರಿಶೀಲನೆ ನಡೆಯಲಿದೆ. ಹೀಗಾಗಿ ಕೃಷ್ಣರಾಜಪುರ ಮತ್ತು ಗರುಡಾಚಾರ್ ಪಾಳ್ಯದವರೆಗಿನ ಮೆಟ್ರೋ ರೈಲ್ವೆ ಸಂಚಾರವನ್ನು ಬಿಎಂಆರ್​​ಸಿಎಲ್ (BMRCL) ರದ್ದುಪಡಿಸಿದೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಬೆಂಗಳೂರು ಮೆಟ್ರೋ ರೈಲು ನಿಗಮ, ಕೃಷ್ಣರಾಜಪುರ ಮತ್ತು ಗರುಡಾಚಾರ್‌ಪಾಳ್ಯದವರೆಗೆ ಇಡೀ ದಿನ ಮೆಟ್ರೋ ರೈಲು ಸಂಚಾರ ಸೇವೆ ಇರುವುದಿಲ್ಲ. ಬೈಯ್ಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದ ವರೆಗೆ ಮಧ್ಯಾಹ್ನ 1.30ರಿಂದ 4.30ರವರೆಗೆ ರೈಲು ಸಂಚರಿಸುವುದಿಲ್ಲ ಎಂದು ತಿಳಿಸಿದೆ.

ಉಳಿದಂತೆ ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಗರುಡಾಚಾರಪಾಳ್ಯ ನಡುವೆ ರೈಲು ಸೇವೆ ಎಂದಿನಂತೆ ಇರಲಿದೆ. ಇಂದಿರಾನಗರ ಮತ್ತು ಕೆಂಗೇರಿ ನಡುವೆ ಮಧ್ಯಾಹ್ನ 1:30 ರಿಂದ 4.30ರವರೆಗೆ ರೈಲ್ವೆ ಸೇವೆ ಲಭ್ಯವಿದೆ. ಮಧ್ಯಾಹ್ನ 1:30 ರವರೆಗೆ ಮತ್ತು ಸಂಜೆ 4.30ರ ಬಳಿಕ ಬೈಯ್ಯಪ್ಪನಹಳ್ಳಿ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣದ ನಡುವೆ ರಾತ್ರಿ 11 ಗಂಟೆವರೆಗೆ ಮೆಟ್ರೋ ಸೇವೆ ಎಂದಿನಂತೆ ನಡೆಯಲಿದೆ. ಮೆಟ್ರೋ ಪ್ರಯಾಣಿಕರು ರೈಲ್ವೆ ಸಂಚಾರದ ವ್ಯತ್ಯಯ ಗಮನಿಸಿ ಸಹಕರಿಸುವಂತೆ ಬಿಎಂಆರ್‌ಸಿಎಲ್‌ ಮನವಿ ಮಾಡಿದೆ.

ಇದನ್ನೂ ಓದಿ: ನಮ್ಮ ಮೆಟ್ರೋದ ಬೈಯ್ಯಪ್ಪನಹಳ್ಳಿ-ಕೆಆರ್​ಪುರ ಮಾರ್ಗ ತಪಾಸಣೆ

ಬೈಯಪ್ಪನಹಳ್ಳಿ – ಕೆಆರ್​ ಪುರ 2 ಕಿ.ಮೀ. ಮಾರ್ಗವಾಗಿದ್ದು, ಇದಕ್ಕೆ ಮೆಟ್ರೋ ಸುರಕ್ಷತಾ ಆಯುಕ್ತರು ತಪಾಸಣೆ ನಡೆಸಿ ಗ್ರೀನ್ ಸಿಗ್ನಲ್ ನೀಡಿದರೇ, ಕೆಂಗೇರಿಯಿಂದ ತಡೆರಹಿತವಾಗಿ ವೈಟ್‌ಫೀಲ್ಡ್​​ವರೆಗೆ ಸಂಚಾರ ಮಾಡಬಹುದಾಗಿದೆ. ಈ ನಡುವೆ, ಕೆಂಗೇರಿ-ಚಲ್ಲಘಟ್ಟ ವಿಸ್ತರಿತ ಮಾರ್ಗದ ಸುರಕ್ಷತಾ ತಪಾಸಣಾ ದಿನಾಂಕ ಇನ್ನೂ ನಿಗದಿ ಆಗಿಲ್ಲ.

ಕೆಂಗೇರಿಯಿಂದ-ವೈಟ್​​ಫೀಲ್ಡ್​​​​ವರೆಗಿನ ಮೆಟ್ರೋ ಮಾರ್ಗದಿಂದ ಐಟಿ ಹಬ್ ಆಗಿರುವ ವೈಟ್‌ ಫೀಲ್ಡ್​​ನ ಸಾವಿರಾರು ಟೆಕ್ನಿಗಳಿಗೆ ಅನುಕೂಲವಾಗಲಿದೆ. ಈವರೆಗೆ ಕೆ.ಆರ್.ಪುರ – ಬೈಯಪ್ಪನಹಳ್ಳಿ ಮಾರ್ಗ ನಿರ್ಮಾಣ ಅಪೂರ್ಣವಾಗಿದ್ದ ಕಾರಣ ಕೆಂಗೇರಿಯಿಂದ ವೈಟ್‌ ಫೀಲ್ಡ್​ಗೆ ಹೋಗುವವರು, ಬೈಯಪ್ಪನಹಳ್ಳಿಯಲ್ಲಿ ಇಳಿದು 2 ಕಿ.ಮೀ. ಬಸ್​​ನಲ್ಲಿ ಸಾಗಿ ಮತ್ತೆ ಕೆ.ಆರ್.ಪುರದಲ್ಲಿ ಮೆಟ್ರೋ ಹತ್ತಿ ಮುಂದೆ ಸಾಗಬೇಕಿತ್ತು. ಇದು ಸಾಕಷ್ಟು ಕಿರಿಕಿರಿ ಉಂಟು ಮಾಡುತ್ತಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us