AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಗಮನಿಸಿ: ಮೇ 10ರಂದು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಮೇ 10ರಂದು ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಲಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳಿಂದಾಗಿ ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಡುವೆ ಸೇವೆ ಸ್ಥಗಿತಗೊಳ್ಳಲಿದೆ. ಬಿಎಂಆರ್‌ಸಿಎಲ್ ಈ ಬಗ್ಗೆ ಪ್ರಕಟಣೆ ನೀಡಿದ್ದು, ಪ್ರಯಾಣಿಕರು ತಮ್ಮ ಪ್ರಯಾಣವನ್ನು ಪೂರ್ವಯೋಜನೆ ಮಾಡಿಕೊಳ್ಳಲು ಸೂಚಿಸಿದೆ.

ಬೆಂಗಳೂರಿಗರೇ ಗಮನಿಸಿ: ಮೇ 10ರಂದು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ನಮ್ಮ ಮೆಟ್ರೋImage Credit source: mathrubhumi.com
ಕಿರಣ್​ ಸೂರ್ಯ
| Edited By: |

Updated on: May 08, 2026 | 4:24 PM

Share

ಬೆಂಗಳೂರು, ಮೇ 08: ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಮೇ 10ರ ಭಾನುವಾರ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಪ್ರಕಟಣೆ ಮೂಲಕ ತಿಳಿಸಿದೆ. ಪ್ರಯಾಣಿಕರು ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನಿಸಿ ತಮ್ಮ ಪ್ರಯಾಣವನ್ನು ಪೂರ್ವಯೋಜನೆ ಮಾಡಿಕೊಳ್ಳುವಂತೆ ಬಿಎಂಆರ್​​ಸಿಎಲ್​​ ವಿನಂತಿಸಿಕೊಂಡಿದೆ.

  • ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
  • ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಸಂಚಾರ ತಾತ್ಕಾಲಿಕ ಸ್ಥಗಿತ
  • ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡ ಬಿಎಂಆರ್​​ಸಿಎಲ್​​

ಇದನ್ನೂ ಓದಿ: ನಮ್ಮ ಮೆಟ್ರೋ ನೇರಳೆ ಮಾರ್ಗದ ಸೇವೆಯಲ್ಲಿ ವ್ಯತ್ಯಯ; 15 ನಿಮಿಷ ನಿಂತಲ್ಲೇ ನಿಂತ ರೈಲುಗಳು

ಭಾನುವಾರದಂದು ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣ, ಸೆಂಟ್ರಲ್ ಕಾಲೇಜ್ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಾಗಿ ನೇರಳೆ ಮಾರ್ಗದಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯು ತಾತ್ಕಾಲಿಕವಾಗಿ ಎರಡು ಗಂಟೆಗಳ ಕಾಲ, ಅಂದರೆ ಬೆಳಿಗ್ಗೆ 7 ಗಂಟೆಯಿಂದ ಗಂಟೆಯಿಂದ 9ಎ ವರೆಗೆ ಸ್ಥಗಿತಗೊಳ್ಳಲಿದೆ.

ಆದಾಗ್ಯೂ, ಈ ಅವಧಿಯಲ್ಲಿ ಮೆಟ್ರೋ ರೈಲು ಸೇವೆಗಳು ಸಂಬಂಧಿತ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 7 ಗಂಟೆಗೆ ನಿಯಮಿತ ವೇಳಾಪಟ್ಟಿಯಂತೆ ಪ್ರಾರಂಭವಾಗಿ, ಕೆಳಕಂಡ ಮಾರ್ಗಗಳಲ್ಲಿ ಎಂದಿನ ಸಂಚರಿಸಲಿವೆ.

  • ಚಲ್ಲಘಟ್ಟ – ವಿಜಯನಗರ
  • ಎಂ.ಜಿ. ರಸ್ತೆ – ವೈಟ್‌ಫೀಲ್ಡ್ (ಕಾಡುಗೋಡಿ)
  • ಮಾದಾವರ – ಸಿಲ್ಕ್ ಇನ್‌ಸ್ಟಿಟ್ಯೂಟ್
  • ಆರ್.ವಿ. ರಸ್ತೆ – ಬೊಮ್ಮಸಂದ್ರ

ಬೆಳಿಗ್ಗೆ 9 ಗಂಟೆಯ ನಂತರ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ – ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ