
ಬೆಂಗಳೂರು, ಮೇ 08: ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಮೇ 10ರ ಭಾನುವಾರ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಪ್ರಕಟಣೆ ಮೂಲಕ ತಿಳಿಸಿದೆ. ಪ್ರಯಾಣಿಕರು ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನಿಸಿ ತಮ್ಮ ಪ್ರಯಾಣವನ್ನು ಪೂರ್ವಯೋಜನೆ ಮಾಡಿಕೊಳ್ಳುವಂತೆ ಬಿಎಂಆರ್ಸಿಎಲ್ ವಿನಂತಿಸಿಕೊಂಡಿದೆ.
ಇದನ್ನೂ ಓದಿ: ನಮ್ಮ ಮೆಟ್ರೋ ನೇರಳೆ ಮಾರ್ಗದ ಸೇವೆಯಲ್ಲಿ ವ್ಯತ್ಯಯ; 15 ನಿಮಿಷ ನಿಂತಲ್ಲೇ ನಿಂತ ರೈಲುಗಳು
ಭಾನುವಾರದಂದು ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣ, ಸೆಂಟ್ರಲ್ ಕಾಲೇಜ್ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಾಗಿ ನೇರಳೆ ಮಾರ್ಗದಲ್ಲಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ-ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯು ತಾತ್ಕಾಲಿಕವಾಗಿ ಎರಡು ಗಂಟೆಗಳ ಕಾಲ, ಅಂದರೆ ಬೆಳಿಗ್ಗೆ 7 ಗಂಟೆಯಿಂದ ಗಂಟೆಯಿಂದ 9ಎ ವರೆಗೆ ಸ್ಥಗಿತಗೊಳ್ಳಲಿದೆ.
ಆದಾಗ್ಯೂ, ಈ ಅವಧಿಯಲ್ಲಿ ಮೆಟ್ರೋ ರೈಲು ಸೇವೆಗಳು ಸಂಬಂಧಿತ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 7 ಗಂಟೆಗೆ ನಿಯಮಿತ ವೇಳಾಪಟ್ಟಿಯಂತೆ ಪ್ರಾರಂಭವಾಗಿ, ಕೆಳಕಂಡ ಮಾರ್ಗಗಳಲ್ಲಿ ಎಂದಿನ ಸಂಚರಿಸಲಿವೆ.
ಬೆಳಿಗ್ಗೆ 9 ಗಂಟೆಯ ನಂತರ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ – ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮಾಹಿತಿ ನೀಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.