ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆಗೆ ಅಭಿಪ್ರಾಯ ಸಂಗ್ರಹ ಅವಧಿ ವಿಸ್ತರಣೆ

ತಾವು ಹೋಗಬೇಕಾದ ಸ್ಥಳಕ್ಕೆ ಬೇಗನೆ ತಲುಪಲು ಬೆಂಗಳೂರು ಜನರು ನಮ್ಮ ಮೆಟ್ರೋ ಮೊರೆ ಹೋಗುತ್ತಾರೆ. ನಮ್ಮ ಮೆಟ್ರೋ ವೇಗದ ಮತ್ತು ಆರಮದಾಯಕ ಪ್ರಯಾಣಕ್ಕೆ ಅನುಕೂಲಕಾರಿಯಾಗಿದೆ. ನಮ್ಮ ಮೆಟ್ರೋದಲ್ಲಿ ಇದೇ ವರ್ಷ ಆಗಸ್ಟ್​ವರೆಗೆ 9 ಲಕ್ಷ ಜನರು ಸಂಚರಿಸಿದ್ದರು. ಈ ಸಂಖ್ಯೆ ಏರುತ್ತಲೇ ಇದೆ. ಇದೀಗ ಬಿಎಂಆರ್​ಸಿಎಲ್​ ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆಗೆ ಮುಂದಾಗಿದೆ.

ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆಗೆ ಅಭಿಪ್ರಾಯ ಸಂಗ್ರಹ ಅವಧಿ ವಿಸ್ತರಣೆ
ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆ ಸಾಧ್ಯತೆ
Follow us
| Updated By: ವಿವೇಕ ಬಿರಾದಾರ

Updated on:Oct 20, 2024 | 1:55 PM

ಬೆಂಗಳೂರು, ಅಕ್ಟೋಬರ್​ 20: ಬೆಂಗಳೂರು (Bengaluru) ಜನರ ವೇಗದ ಮತ್ತು ಆರಾಮದಾಯಕ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ (Namma Metro) ಅನುಕೂಲಕರವಾಗಿದೆ. ನಮ್ಮ ಮೆಟ್ರೋದಲ್ಲಿ ನಿತ್ಯ ಲಕ್ಷಾಂತರ ಜನರು ಪ್ರಯಾಣಿಸುತ್ತಾರೆ. ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಮ್ಮ ಮೆಟ್ರೋ ರೈಲು ಟಿಕೆಟ್​ ದರ ಏರಿಸಲು ಮುಂದಾಗಿದೆ. ಈ ಬಗ್ಗೆ ಪ್ರಯಾಣಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ ಅವಧಿಯನ್ನು ಬಿಎಂಆರ್​ಸಿಎಲ್​ ವಿಸ್ತರಿಸಿದೆ.

ಟಿಕೆಟ್​ ದರ ಏರಿಕೆ ಬಗ್ಗೆ ಅಭಿಪ್ರಾಯ ತಿಳಿಸಲು ಬಿಎಂಆರ್​ಸಿಎಲ್ ಈ ಹಿಂದೆ​ ಅಕ್ಟೋಬರ್​ 21ರವರೆಗೆ ಗಡುವು ನೀಡಿತ್ತು. ಬಿಎಂಆರ್​ಸಿಎಲ್​ ಗಡುವು ಅವಧಿಯನ್ನು ವಿಸ್ತರಿಸಿದ್ದು, ಸಾರ್ವಜನಿಕರಿಗೆ ಅಕ್ಟೋಬರ್​ 28ರವರಗೆ ಸಮಯ ನೀಡಿದೆ.

ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ffc@bmrc.co.inಗೆ ಕಳುಹಿಸಬಹುದು. ಇಲ್ಲವೇ ಅಂಚೆ ಮೂಲಕ ಬಿಎಂಆರ್​ಸಿಎಲ್​​ ಒಂದನೇ ಶುಲ್ಕ ನಿಗದಿ ಸಮಿತಿ ಅಧ್ಯಕ್ಷರಿಗೆ ಕಳುಹಿಸಬಹುದು. ಅಥವಾ ವಾಟ್ಸಾಪ್​ ಸಂಖ್ಯೆ 9448291173ಗೂ ನಿಮ್ಮ ಸಲಹೆ ಕಳುಹಿಸಬಹುದಾಗಿದೆ ಎಂದು ಬಿಎಂಆರ್​ಸಿಎಲ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: ನಾಗಸಂದ್ರ-ಮಾದಾವರ ಮೆಟ್ರೋ ಸಂಬಂಧ ಡಿಕೆಶಿ, ಕೇಂದ್ರ ಸಚಿವರಿಗೆ ತೇಜಸ್ವಿ ಸೂರ್ಯ ಪತ್ರ

ಎಷ್ಟು ರೂಪಾಯಿ ಏರಿಕೆ?

ಕಳೆದ ಏಳು ವರ್ಷದಿಂದ ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆಯಾಗಿಲ್ಲ. ಇದೀಗ ಬಿಎಂಆರ್​​ಸಿಎಲ್​ ಟಿಕೆಟ್​ ದರ ಏರಿಸಲು ಮುಂದಾಗಿದೆ. ಟಿಕೆಟ್​ ದರ ಏರಿಕೆ ಸಂಬಂಧ “ದಿ ಫೇರ್​ ಪಿಕ್ಸೇಷನ್​ ಕಮಿಟಿ” ರಚನೆಯಾಗಿದ್ದು, ಈ ಸ್ವತಂತ್ರ ಸಂಸ್ಥೆ ಎಷ್ಟು ರೂಪಾಯಿ ಏರಿಕೆ ಮಾಡಬೇಕೆಂದು ನಿರ್ಧರಿಸುತ್ತದೆ.

“ರಾಜ್ಯ ಹಾಗೂ ಕೇಂದ್ರದ ಹಿರಿಯ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ಕಮಿಟಿ ಇದಾಗಿದ್ದು, ಕಮಿಟಿಯು ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮಾಡಲಿದೆ. ಖರ್ಚು, ವೆಚ್ಚ ನೋಡಿಕೊಂಡು ದರ ಏರಿಕೆ ಮಾಡಲಿದ್ದೇವೆ” ಎಂದು ಬಿಎಂಆರ್​ಸಿಎಲ್​​ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಹೇಳಿದ್ದಾರೆ.

ನಮ್ಮ ಮೆಟ್ರೋದ ಕನಿಷ್ಠ ದರ 10 ರೂ. ಆಗಿದ್ದು, ಗರಿಷ್ಠ ದರ 60 ರೂ. ಆಗಿದೆ. ಮೂಲಗಳಿಂದ ಬಂದ ಮಾಹಿತಿ ಪ್ರಕಾರ ಈಗ 15 ರಿಂದ 20 ರಷ್ಟು ಟಿಕೆಟ್​ ದರ ಏರಿಕೆ ಮಾಡಲು ಬಿಎಂಆರ್​ಸಿಎಲ್​ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:53 pm, Sun, 20 October 24

ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?