AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆಗೆ ಅಭಿಪ್ರಾಯ ಸಂಗ್ರಹ ಅವಧಿ ವಿಸ್ತರಣೆ

ತಾವು ಹೋಗಬೇಕಾದ ಸ್ಥಳಕ್ಕೆ ಬೇಗನೆ ತಲುಪಲು ಬೆಂಗಳೂರು ಜನರು ನಮ್ಮ ಮೆಟ್ರೋ ಮೊರೆ ಹೋಗುತ್ತಾರೆ. ನಮ್ಮ ಮೆಟ್ರೋ ವೇಗದ ಮತ್ತು ಆರಮದಾಯಕ ಪ್ರಯಾಣಕ್ಕೆ ಅನುಕೂಲಕಾರಿಯಾಗಿದೆ. ನಮ್ಮ ಮೆಟ್ರೋದಲ್ಲಿ ಇದೇ ವರ್ಷ ಆಗಸ್ಟ್​ವರೆಗೆ 9 ಲಕ್ಷ ಜನರು ಸಂಚರಿಸಿದ್ದರು. ಈ ಸಂಖ್ಯೆ ಏರುತ್ತಲೇ ಇದೆ. ಇದೀಗ ಬಿಎಂಆರ್​ಸಿಎಲ್​ ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆಗೆ ಮುಂದಾಗಿದೆ.

ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆಗೆ ಅಭಿಪ್ರಾಯ ಸಂಗ್ರಹ ಅವಧಿ ವಿಸ್ತರಣೆ
ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆ ಸಾಧ್ಯತೆ
Kiran Surya
| Edited By: |

Updated on:Oct 20, 2024 | 1:55 PM

Share

ಬೆಂಗಳೂರು, ಅಕ್ಟೋಬರ್​ 20: ಬೆಂಗಳೂರು (Bengaluru) ಜನರ ವೇಗದ ಮತ್ತು ಆರಾಮದಾಯಕ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ (Namma Metro) ಅನುಕೂಲಕರವಾಗಿದೆ. ನಮ್ಮ ಮೆಟ್ರೋದಲ್ಲಿ ನಿತ್ಯ ಲಕ್ಷಾಂತರ ಜನರು ಪ್ರಯಾಣಿಸುತ್ತಾರೆ. ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಮ್ಮ ಮೆಟ್ರೋ ರೈಲು ಟಿಕೆಟ್​ ದರ ಏರಿಸಲು ಮುಂದಾಗಿದೆ. ಈ ಬಗ್ಗೆ ಪ್ರಯಾಣಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ ಅವಧಿಯನ್ನು ಬಿಎಂಆರ್​ಸಿಎಲ್​ ವಿಸ್ತರಿಸಿದೆ.

ಟಿಕೆಟ್​ ದರ ಏರಿಕೆ ಬಗ್ಗೆ ಅಭಿಪ್ರಾಯ ತಿಳಿಸಲು ಬಿಎಂಆರ್​ಸಿಎಲ್ ಈ ಹಿಂದೆ​ ಅಕ್ಟೋಬರ್​ 21ರವರೆಗೆ ಗಡುವು ನೀಡಿತ್ತು. ಬಿಎಂಆರ್​ಸಿಎಲ್​ ಗಡುವು ಅವಧಿಯನ್ನು ವಿಸ್ತರಿಸಿದ್ದು, ಸಾರ್ವಜನಿಕರಿಗೆ ಅಕ್ಟೋಬರ್​ 28ರವರಗೆ ಸಮಯ ನೀಡಿದೆ.

ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ffc@bmrc.co.inಗೆ ಕಳುಹಿಸಬಹುದು. ಇಲ್ಲವೇ ಅಂಚೆ ಮೂಲಕ ಬಿಎಂಆರ್​ಸಿಎಲ್​​ ಒಂದನೇ ಶುಲ್ಕ ನಿಗದಿ ಸಮಿತಿ ಅಧ್ಯಕ್ಷರಿಗೆ ಕಳುಹಿಸಬಹುದು. ಅಥವಾ ವಾಟ್ಸಾಪ್​ ಸಂಖ್ಯೆ 9448291173ಗೂ ನಿಮ್ಮ ಸಲಹೆ ಕಳುಹಿಸಬಹುದಾಗಿದೆ ಎಂದು ಬಿಎಂಆರ್​ಸಿಎಲ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ: ನಾಗಸಂದ್ರ-ಮಾದಾವರ ಮೆಟ್ರೋ ಸಂಬಂಧ ಡಿಕೆಶಿ, ಕೇಂದ್ರ ಸಚಿವರಿಗೆ ತೇಜಸ್ವಿ ಸೂರ್ಯ ಪತ್ರ

ಎಷ್ಟು ರೂಪಾಯಿ ಏರಿಕೆ?

ಕಳೆದ ಏಳು ವರ್ಷದಿಂದ ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆಯಾಗಿಲ್ಲ. ಇದೀಗ ಬಿಎಂಆರ್​​ಸಿಎಲ್​ ಟಿಕೆಟ್​ ದರ ಏರಿಸಲು ಮುಂದಾಗಿದೆ. ಟಿಕೆಟ್​ ದರ ಏರಿಕೆ ಸಂಬಂಧ “ದಿ ಫೇರ್​ ಪಿಕ್ಸೇಷನ್​ ಕಮಿಟಿ” ರಚನೆಯಾಗಿದ್ದು, ಈ ಸ್ವತಂತ್ರ ಸಂಸ್ಥೆ ಎಷ್ಟು ರೂಪಾಯಿ ಏರಿಕೆ ಮಾಡಬೇಕೆಂದು ನಿರ್ಧರಿಸುತ್ತದೆ.

“ರಾಜ್ಯ ಹಾಗೂ ಕೇಂದ್ರದ ಹಿರಿಯ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ಕಮಿಟಿ ಇದಾಗಿದ್ದು, ಕಮಿಟಿಯು ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮಾಡಲಿದೆ. ಖರ್ಚು, ವೆಚ್ಚ ನೋಡಿಕೊಂಡು ದರ ಏರಿಕೆ ಮಾಡಲಿದ್ದೇವೆ” ಎಂದು ಬಿಎಂಆರ್​ಸಿಎಲ್​​ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಹೇಳಿದ್ದಾರೆ.

ನಮ್ಮ ಮೆಟ್ರೋದ ಕನಿಷ್ಠ ದರ 10 ರೂ. ಆಗಿದ್ದು, ಗರಿಷ್ಠ ದರ 60 ರೂ. ಆಗಿದೆ. ಮೂಲಗಳಿಂದ ಬಂದ ಮಾಹಿತಿ ಪ್ರಕಾರ ಈಗ 15 ರಿಂದ 20 ರಷ್ಟು ಟಿಕೆಟ್​ ದರ ಏರಿಕೆ ಮಾಡಲು ಬಿಎಂಆರ್​ಸಿಎಲ್​ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:53 pm, Sun, 20 October 24

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ