AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಟಿಕೆಟ್ ದರ ಶೇ 30 ರ ವರೆಗೆ ಇಳಿಕೆ: ಆದರೆ ಎಲ್ಲೆಡೆಯೂ ಅಲ್ಲ!

ನಮ್ಮ ಮೆಟ್ರೋ ದರೆ ಏರಿಕೆ ಸಂಬಂಧಪಟ್ಟಂತೆ ಬಿಎಮ್ಆರ್‌ಸಿಎಲ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸೂಚನೆ ನೀಡಿದ ಬೆನ್ನಲ್ಲೇ ಸಂಸ್ಥೆಯ ಎಂಡಿ ಮಹೇಶ್ವರ್ ರಾವ್​ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಹಾಗಾದರೆ ಅವರು ಹೇಳಿದ್ದೇನು? ಮೆಟ್ರೋ ಪ್ರಯಾಣ ದರ ಮತ್ತೆ ಇಳಿಕೆಯಾಗುತ್ತಾ? ತಿಳಿಯಲು ಮುಂದೆ ಓದಿ.

ನಮ್ಮ ಮೆಟ್ರೋ ಟಿಕೆಟ್ ದರ ಶೇ 30 ರ ವರೆಗೆ ಇಳಿಕೆ: ಆದರೆ ಎಲ್ಲೆಡೆಯೂ ಅಲ್ಲ!
ನಮ್ಮ ಮೆಟ್ರೋ ಹಾಗೂ ಬಿಎಂಆರ್‌ಸಿಎಲ್ ಎಂಡಿ ಮಹೇಶ್ವರ್ ರಾವ್
ಕಿರಣ್​ ಸೂರ್ಯ
| Edited By: |

Updated on:Feb 14, 2025 | 10:13 AM

Share

ಬೆಂಗಳೂರು, ಫೆಬ್ರವರಿ 13: ನಮ್ಮ ಮೆಟ್ರೋ ಪ್ರಯಾಣ ದರ ಮತ್ತೆ ಪರಿಷ್ಕರಣೆ ಮಾಡುವುದಿಲ್ಲ, ಆದರೆ ಸ್ಟೇಜ್ ಬೈ ಸ್ಟೇಜ್ ರೇಟ್ ಮರ್ಜ್ ಮಾಡುತ್ತೇವೆ ಎಂದು ಬಿಎಂಆರ್​ಸಿಎಲ್ ಎಂಡಿ ಮಹೇಶ್ವರ್ ರಾವ್ ಗುರುವಾರ ತಿಳಿಸಿದರು. ನಮ್ಮ ಮೆಟ್ರೋ ಪ್ರಯಾಣದರ ಏರಿಕೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ದರ ಏರಿಕೆ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ ಆಗಿರುವ ಬಗ್ಗೆ ಕೂಡ ವರದಿಯಾಗಿತ್ತು. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಎಂಆರ್​ಸಿಎಲ್ ಗೆ ಮಾತ್ರ ಸೂಚನೆ ನೀಡಿರುವ ಬಗ್ಗೆ ವರದಿಯಾಗಿತ್ತು. ಅದರ ಬೆನ್ನಲ್ಲೇ ಇದೀಗ ಬಿಎಂಆರ್ಸಿಎಲ್ ಎಂಡಿ ಮಹೇಶ್ವರ್ ರಾವ್ ಪತ್ರಿಕಾಗೋಷ್ಠಿ ನಡೆಸಿ ಮಹತ್ವದ ಮಾಹಿತಿ ನೀಡಿದ್ದಾರೆ.

ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡುವುದಕ್ಕೆ ಒಂದು ವಿಧಾನ ಇದೆ. ಅದರಂತೆಯೇ ದರ ನಿಗದಿ ಸಮಿತಿ ಅಧ್ಯಯನ ನಡೆಸಿ ಮಾಡಿದ ಶಿಫಾರಸಿನ ಮೇರೆಗೆ ದರ ಹೆಚ್ಚಳ ಮಾಡಲಾಗಿದೆ. ದರ ಏರಿಕೆಗೆ ಪ್ರಯಾಣಿಕರ ವಿರೋಧ ಹಿನ್ನೆಲೆಯಲ್ಲಿ ಸಭೆ ಮಾಡಲಾಗಿದೆ. ಕಳೆದ 3 ದಿನಗಳಿಂದ ಬೋರ್ಡ್ ಜೊತೆ ಸಭೆ ನಡೆಸಿದ್ದೇವೆ. ಸಿಎಂ ಹಾಗೂ ಡಿಸಿಎಂ ಸೂಚನೆ ಮೇರೆಗೆ ಸಭೆ ಮಾಡಿದ್ದೇವೆ. ಎಲ್ಲಿ ಅನಿವಾರ್ಯವೋ ಅಲ್ಲಿ ದರ ಮರ್ಜ್ ಮಾಡಬೇಕಾಗುತ್ತದೆ. ಎಲ್ಲೆಲ್ಲಿ (ಯಾವ ನಿಲ್ದಾಣದಿಂದ ಯಾವ ನಿಲ್ದಾಣಕ್ಕೆ ದುಪ್ಪಟ್ಟು ದರ ಏರಿಕೆಯಾಗಿದೆಯೋ ಅಲ್ಲಿ ಸ್ಟೇಜ್ ಬೈ ಸ್ಟೇಜ್ ಮರ್ಜ್ ಮಾಡುವ ಮೂಲಕ ದರ ಕಡಿಮೆಯಾಗುವಂತೆ ಮಾಡಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.

ಮೆಟ್ರೋಗೆ ಸಾಕಷ್ಟು ಬಂಡವಾಳ ಹೂಡಿಕೆ ಮಾಡಲಾಗಿದೆ. ಮೆಟ್ರೋ ಸಿಬ್ಬಂದಿ ವೇತನ, ಇತ್ಯಾದಿ ವಿಚಾರಗಳನ್ನೂ ದರ ಏರಿಕೆ ವೇಳೆ ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಶೀಘ್ರ ಸ್ಟೇಜ್ ಬೈ ಸ್ಟೇಜ್ ರೇಟ್ ಮರ್ಜ್, ಪ್ರಯಾಣಿಕರಿಗೆ ಸ್ವಲ್ಪ ಮಟ್ಟಿನ ರಿಲೀಫ್

ದುಪ್ಪಟ್ಟು ದರ ಏರಿಕೆಯಾಗಿರುವ ನಿಲ್ದಾಣಗಳಲ್ಲಿನ ದರವನ್ನು ಮರ್ಜ್ ಮಾಡಲಾಗುವುದು. ಇದರಿಂದ ಪ್ರಯಾಣಿಕರಿಗೆ ಸ್ವಲ್ಪ ಮಟ್ಟಿನ ರಿಲೀಫ್ ದೊರೆಯಲಿದೆ ಎಂದು ಮಹೇಶ್ವರ್ ರಾವ್ ತಿಳಿಸಿದರು. ನಮ್ಮ ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲಾಗುವುದು. ಮೆಟ್ರೋ ದರ ಶೇ 45 ರಿಂದ ಶೇ 50 ರ ವರೆಗೆ ಹೆಚ್ಚಳವಾಗಿರುವ ನಿಲ್ದಾಣಗಳ ಮಧ್ಯೆ ಇಳಿಕೆ ಮಾಡಲಾಗುವುದು. ಶೇ 60 ದರ ಹೆಚ್ಚಳವಾಗಿರುವಲ್ಲಿ ಸ್ಲ್ಯಾಬ್ ಮರ್ಜ್ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಶೇ 30 ರಷ್ಟು 30ರ ವರೆಗೆ ದರ ಇಳಿಕೆ

ಕೆಲವು ನಿಲ್ದಾಣಗಳಲ್ಲಿ ಪ್ರಯಾಣ ದರ ಶೇ 70 ರಿಂದ 100 ರಷ್ಟು ಹೆಚ್ಚಳವಾಗಿದೆ. ಅಂಥ ಕಡೆಗಳಲ್ಲಿ ಶೇ 30 ರ ವರೆಗೆ ಟಿಕೆಟ್ ದರ ಇಳಿಕೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.

ಇದನ್ನೂ ಓದಿ: ಬಿಎಂಆರ್​ಸಿಎಲ್​ಗೆ ಸಿಎಂ ಮಹತ್ವದ ಸೂಚನೆ

ನಮ್ಮ ಮೆಟ್ರೋ ಪ್ರಯಾಣ ದರವನ್ನು ಸ್ಟೇಜ್ ಆಧಾರದಲ್ಲಿ ಮರ್ಜ್ ಮಾಡುವ ಮೂಲಕ ಇಳಿಕೆ ಮಾಡಿ ಶೀಘ್ರದಲ್ಲೇ ವಿವರಗಳನ್ನು ಒದಗಿಸುತ್ತೇವೆ ಎಂದು ಅವರು ತಿಳಿಸಿದರು.

ನಮ್ಮ ಮೆಟ್ರೋ ಎಂಡಿ ಸುದ್ದಿಗೋಷ್ಠಿ ಹೈಲೈಟ್ಸ್

  • ಸ್ಟೇಜ್ ಬೈ ಸ್ಟೇಜ್ ರೇಟ್ ಮರ್ಜ್ ಮಾಡುತ್ತೇವೆ ಅಷ್ಟೇ.
  • ಸ್ಟೇಜ್​ನಲ್ಲಿ ರೇಟ್ ಜಂಪ್ ಆಗಿದ್ದರೆ ಮರ್ಜ್ ಮಾಡುತ್ತೇವೆ.
  • ನಮ್ಮ ಮೆಟ್ರೋ ಪ್ರಯಾಣ ದರ ಕನಿಷ್ಠ 10 ರೂ. ಇರುತ್ತದೆ.
  • ನಮ್ಮ ಮೆಟ್ರೋ ಪ್ರಯಾಣ ದರ ಗರಿಷ್ಠ 90 ರೂ. ಇರುತ್ತದೆ.
  • ನಮ್ಮ ಮೆಟ್ರೋ ಕನಿಷ್ಠ, ಗರಿಷ್ಠ ದರದಲ್ಲಿ ಬದಲಾವಣೆ ಇರಲ್ಲ.
  • ಶೇ 90-100ರಷ್ಟು ಜಂಪ್ ಆಗಿರುವುದನ್ನು ಕಡಿಮೆ ಮಾಡ್ತೇವೆ.
  • 30 ರೂ. ಇದ್ದದ್ದು 60 ರೂಪಾಯಿ ಆಗಿದ್ದರೆ ಕಡಿಮೆ ಮಾಡ್ತೇವೆ
  • ನಮ್ಮ ಮೆಟ್ರೋ ಸ್ಟೇಜ್​ಗಳ ನಡುವೆ ರೇಟ್ ಮರ್ಜ್ ಮಾಡ್ತೇವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Thu, 13 February 25

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!