AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಟಿಕೆಟ್ ದರ ಶೇ 30 ರ ವರೆಗೆ ಇಳಿಕೆ: ಆದರೆ ಎಲ್ಲೆಡೆಯೂ ಅಲ್ಲ!

ನಮ್ಮ ಮೆಟ್ರೋ ದರೆ ಏರಿಕೆ ಸಂಬಂಧಪಟ್ಟಂತೆ ಬಿಎಮ್ಆರ್‌ಸಿಎಲ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸೂಚನೆ ನೀಡಿದ ಬೆನ್ನಲ್ಲೇ ಸಂಸ್ಥೆಯ ಎಂಡಿ ಮಹೇಶ್ವರ್ ರಾವ್​ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಹಾಗಾದರೆ ಅವರು ಹೇಳಿದ್ದೇನು? ಮೆಟ್ರೋ ಪ್ರಯಾಣ ದರ ಮತ್ತೆ ಇಳಿಕೆಯಾಗುತ್ತಾ? ತಿಳಿಯಲು ಮುಂದೆ ಓದಿ.

ನಮ್ಮ ಮೆಟ್ರೋ ಟಿಕೆಟ್ ದರ ಶೇ 30 ರ ವರೆಗೆ ಇಳಿಕೆ: ಆದರೆ ಎಲ್ಲೆಡೆಯೂ ಅಲ್ಲ!
ನಮ್ಮ ಮೆಟ್ರೋ ಹಾಗೂ ಬಿಎಂಆರ್‌ಸಿಎಲ್ ಎಂಡಿ ಮಹೇಶ್ವರ್ ರಾವ್
Kiran Surya
| Edited By: |

Updated on:Feb 14, 2025 | 10:13 AM

Share

ಬೆಂಗಳೂರು, ಫೆಬ್ರವರಿ 13: ನಮ್ಮ ಮೆಟ್ರೋ ಪ್ರಯಾಣ ದರ ಮತ್ತೆ ಪರಿಷ್ಕರಣೆ ಮಾಡುವುದಿಲ್ಲ, ಆದರೆ ಸ್ಟೇಜ್ ಬೈ ಸ್ಟೇಜ್ ರೇಟ್ ಮರ್ಜ್ ಮಾಡುತ್ತೇವೆ ಎಂದು ಬಿಎಂಆರ್​ಸಿಎಲ್ ಎಂಡಿ ಮಹೇಶ್ವರ್ ರಾವ್ ಗುರುವಾರ ತಿಳಿಸಿದರು. ನಮ್ಮ ಮೆಟ್ರೋ ಪ್ರಯಾಣದರ ಏರಿಕೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ದರ ಏರಿಕೆ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ ಆಗಿರುವ ಬಗ್ಗೆ ಕೂಡ ವರದಿಯಾಗಿತ್ತು. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಎಂಆರ್​ಸಿಎಲ್ ಗೆ ಮಾತ್ರ ಸೂಚನೆ ನೀಡಿರುವ ಬಗ್ಗೆ ವರದಿಯಾಗಿತ್ತು. ಅದರ ಬೆನ್ನಲ್ಲೇ ಇದೀಗ ಬಿಎಂಆರ್ಸಿಎಲ್ ಎಂಡಿ ಮಹೇಶ್ವರ್ ರಾವ್ ಪತ್ರಿಕಾಗೋಷ್ಠಿ ನಡೆಸಿ ಮಹತ್ವದ ಮಾಹಿತಿ ನೀಡಿದ್ದಾರೆ.

ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡುವುದಕ್ಕೆ ಒಂದು ವಿಧಾನ ಇದೆ. ಅದರಂತೆಯೇ ದರ ನಿಗದಿ ಸಮಿತಿ ಅಧ್ಯಯನ ನಡೆಸಿ ಮಾಡಿದ ಶಿಫಾರಸಿನ ಮೇರೆಗೆ ದರ ಹೆಚ್ಚಳ ಮಾಡಲಾಗಿದೆ. ದರ ಏರಿಕೆಗೆ ಪ್ರಯಾಣಿಕರ ವಿರೋಧ ಹಿನ್ನೆಲೆಯಲ್ಲಿ ಸಭೆ ಮಾಡಲಾಗಿದೆ. ಕಳೆದ 3 ದಿನಗಳಿಂದ ಬೋರ್ಡ್ ಜೊತೆ ಸಭೆ ನಡೆಸಿದ್ದೇವೆ. ಸಿಎಂ ಹಾಗೂ ಡಿಸಿಎಂ ಸೂಚನೆ ಮೇರೆಗೆ ಸಭೆ ಮಾಡಿದ್ದೇವೆ. ಎಲ್ಲಿ ಅನಿವಾರ್ಯವೋ ಅಲ್ಲಿ ದರ ಮರ್ಜ್ ಮಾಡಬೇಕಾಗುತ್ತದೆ. ಎಲ್ಲೆಲ್ಲಿ (ಯಾವ ನಿಲ್ದಾಣದಿಂದ ಯಾವ ನಿಲ್ದಾಣಕ್ಕೆ ದುಪ್ಪಟ್ಟು ದರ ಏರಿಕೆಯಾಗಿದೆಯೋ ಅಲ್ಲಿ ಸ್ಟೇಜ್ ಬೈ ಸ್ಟೇಜ್ ಮರ್ಜ್ ಮಾಡುವ ಮೂಲಕ ದರ ಕಡಿಮೆಯಾಗುವಂತೆ ಮಾಡಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.

ಮೆಟ್ರೋಗೆ ಸಾಕಷ್ಟು ಬಂಡವಾಳ ಹೂಡಿಕೆ ಮಾಡಲಾಗಿದೆ. ಮೆಟ್ರೋ ಸಿಬ್ಬಂದಿ ವೇತನ, ಇತ್ಯಾದಿ ವಿಚಾರಗಳನ್ನೂ ದರ ಏರಿಕೆ ವೇಳೆ ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಶೀಘ್ರ ಸ್ಟೇಜ್ ಬೈ ಸ್ಟೇಜ್ ರೇಟ್ ಮರ್ಜ್, ಪ್ರಯಾಣಿಕರಿಗೆ ಸ್ವಲ್ಪ ಮಟ್ಟಿನ ರಿಲೀಫ್

ದುಪ್ಪಟ್ಟು ದರ ಏರಿಕೆಯಾಗಿರುವ ನಿಲ್ದಾಣಗಳಲ್ಲಿನ ದರವನ್ನು ಮರ್ಜ್ ಮಾಡಲಾಗುವುದು. ಇದರಿಂದ ಪ್ರಯಾಣಿಕರಿಗೆ ಸ್ವಲ್ಪ ಮಟ್ಟಿನ ರಿಲೀಫ್ ದೊರೆಯಲಿದೆ ಎಂದು ಮಹೇಶ್ವರ್ ರಾವ್ ತಿಳಿಸಿದರು. ನಮ್ಮ ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲಾಗುವುದು. ಮೆಟ್ರೋ ದರ ಶೇ 45 ರಿಂದ ಶೇ 50 ರ ವರೆಗೆ ಹೆಚ್ಚಳವಾಗಿರುವ ನಿಲ್ದಾಣಗಳ ಮಧ್ಯೆ ಇಳಿಕೆ ಮಾಡಲಾಗುವುದು. ಶೇ 60 ದರ ಹೆಚ್ಚಳವಾಗಿರುವಲ್ಲಿ ಸ್ಲ್ಯಾಬ್ ಮರ್ಜ್ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಶೇ 30 ರಷ್ಟು 30ರ ವರೆಗೆ ದರ ಇಳಿಕೆ

ಕೆಲವು ನಿಲ್ದಾಣಗಳಲ್ಲಿ ಪ್ರಯಾಣ ದರ ಶೇ 70 ರಿಂದ 100 ರಷ್ಟು ಹೆಚ್ಚಳವಾಗಿದೆ. ಅಂಥ ಕಡೆಗಳಲ್ಲಿ ಶೇ 30 ರ ವರೆಗೆ ಟಿಕೆಟ್ ದರ ಇಳಿಕೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.

ಇದನ್ನೂ ಓದಿ: ಬಿಎಂಆರ್​ಸಿಎಲ್​ಗೆ ಸಿಎಂ ಮಹತ್ವದ ಸೂಚನೆ

ನಮ್ಮ ಮೆಟ್ರೋ ಪ್ರಯಾಣ ದರವನ್ನು ಸ್ಟೇಜ್ ಆಧಾರದಲ್ಲಿ ಮರ್ಜ್ ಮಾಡುವ ಮೂಲಕ ಇಳಿಕೆ ಮಾಡಿ ಶೀಘ್ರದಲ್ಲೇ ವಿವರಗಳನ್ನು ಒದಗಿಸುತ್ತೇವೆ ಎಂದು ಅವರು ತಿಳಿಸಿದರು.

ನಮ್ಮ ಮೆಟ್ರೋ ಎಂಡಿ ಸುದ್ದಿಗೋಷ್ಠಿ ಹೈಲೈಟ್ಸ್

  • ಸ್ಟೇಜ್ ಬೈ ಸ್ಟೇಜ್ ರೇಟ್ ಮರ್ಜ್ ಮಾಡುತ್ತೇವೆ ಅಷ್ಟೇ.
  • ಸ್ಟೇಜ್​ನಲ್ಲಿ ರೇಟ್ ಜಂಪ್ ಆಗಿದ್ದರೆ ಮರ್ಜ್ ಮಾಡುತ್ತೇವೆ.
  • ನಮ್ಮ ಮೆಟ್ರೋ ಪ್ರಯಾಣ ದರ ಕನಿಷ್ಠ 10 ರೂ. ಇರುತ್ತದೆ.
  • ನಮ್ಮ ಮೆಟ್ರೋ ಪ್ರಯಾಣ ದರ ಗರಿಷ್ಠ 90 ರೂ. ಇರುತ್ತದೆ.
  • ನಮ್ಮ ಮೆಟ್ರೋ ಕನಿಷ್ಠ, ಗರಿಷ್ಠ ದರದಲ್ಲಿ ಬದಲಾವಣೆ ಇರಲ್ಲ.
  • ಶೇ 90-100ರಷ್ಟು ಜಂಪ್ ಆಗಿರುವುದನ್ನು ಕಡಿಮೆ ಮಾಡ್ತೇವೆ.
  • 30 ರೂ. ಇದ್ದದ್ದು 60 ರೂಪಾಯಿ ಆಗಿದ್ದರೆ ಕಡಿಮೆ ಮಾಡ್ತೇವೆ
  • ನಮ್ಮ ಮೆಟ್ರೋ ಸ್ಟೇಜ್​ಗಳ ನಡುವೆ ರೇಟ್ ಮರ್ಜ್ ಮಾಡ್ತೇವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Thu, 13 February 25

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ