AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬರ್ತಿವೆ 96 ಹೊಸ ರೈಲು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಬರೋಬ್ಬರಿ 96 ಹೊಸ ರೈಲುಗಳು ಶೀಘ್ರದಲ್ಲೇ ಮೆಟ್ರೋ ಸೇರಲಿವೆ. ಇದರಿಂದ ಮೆಟ್ರೋ ರೈಲುಗಳ ಸಂಖ್ಯೆ 160ಕ್ಕೆ ಏರಿಕೆಯಾಗಲಿದ್ದು, 4 ನಿಮಿಷಕ್ಕೊಂದರಂತೆ ರೈಲು ಸಂಚಾರಕ್ಕೆ ಲಭ್ಯವಾಗಲಿವೆ. ಇದು ಬೆಂಗಳೂರು ಮೆಟ್ರೋ ಪ್ರಯಾಣವನ್ನು ಮತ್ತಷ್ಟು ವೇಗಗೊಳಿಸಿ, ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡುವ ನಿರೀಕ್ಷೆ ಇದೆ.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬರ್ತಿವೆ 96 ಹೊಸ ರೈಲು
ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: |

Updated on: Dec 08, 2025 | 3:05 PM

Share

ಬೆಂಗಳೂರು, ಡಿಸೆಂಬರ್​​ 08: ಯೆಲ್ಲೋ ಲೈನ್​ ಆರಂಭದ ಬೆನ್ನಲ್ಲೇ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​​ ನ್ಯೂಸ್​ ಸಿಕ್ಕಿದೆ. ಒಂದೆರಡಲ್ಲ ಬರೋಬ್ಬರಿ 96 ಹೊಸ ರೈಲುಗಳ ನಮ್ಮ ಮೆಟ್ರೋಗೆ ಬರುತ್ತಿದ್ದು, ಅವುಗಳು ಕಾರ್ಯಾಚರಣೆಗೆ ಇಳಿಯುತ್ತಿದ್ದಂತೆ 4 ನಿಮಿಷಕ್ಕೊಂದರಂತೆ  ರೈಲು ಸಂಚಾರಕ್ಕೆ ಸಿದ್ಧತೆ ನಡೆದಿದೆ.

ನಮ್ಮ ಮೆಟ್ರೋ ಬಳಿ ಸದ್ಯ ಗ್ರೀನ್, ಪರ್ಪಲ್, ಯೆಲ್ಲೋ ಲೈನ್​​ಗಳು ಸೇರಿ ಒಟ್ಟು 64 ರೈಲುಗಳಿವೆ. ಆ ಪೈಕಿ ಗ್ರೀನ್ ಲೈನ್, ಪರ್ಪಲ್ ಲೈನ್​​ನಲ್ಲಿ 58, ಯೆಲ್ಲೋ ಲೈನ್​ನಲ್ಲಿ 6 ರೈಲುಗಳು ಹಾಲಿ ಕಾರ್ಯಾಚರಣೆ ನಡೆಸುತ್ತಿವೆ. ಈಗ ಇರುವ ಲೈನ್​​ಗಳಿಗೆ ಹೊಸ ರೈಲುಗಳು ಸೇರಿ, ಇನ್ನೂ ಆರಂಭವಾಗಬೇಕಿರುವ ಬ್ಲೂ ಮತ್ತು ಪಿಂಕ್​​ ಲೈನ್​​ಗಳಿಗೂ ರೈಲುಗಳನ್ನ ಆರ್ಡರ್​​ ನೀಡಲಾಗಿದೆ. ಇವುಗಳೆಲ್ಲ ಆಗಮಿಸಿದ ಬಳಿಕ ಹಾಲಿ ಇರುವ ನಮ್ಮ ಮೆಟ್ರೋ ರೈಲುಗಳ ಸಂಖ್ಯೆ 160ಕ್ಕೆ ಏರಿಕೆಯಾಗಲಿದೆ.

ಇದನ್ನೂ ಓದಿ: ಬೆಂಗಳೂರು – ತುಮಕೂರು ಮೆಟ್ರೋ ಯೋಜನೆ ಡಿಪಿಆರ್​ಗೆ ಬಿಡ್ ಕರೆದ ಬಿಎಂಆರ್ ಸಿಎಲ್

ಯಾವ ಲೈನ್​​ಗೆ ಎಷ್ಟು ಹೊಸ ರೈಲು?

  • ಗ್ರೀನ್​​ ಮತ್ತು ಪರ್ಪಲ್​​ ಲೈನ್​​ಗೆ 21 ಹೊಸ ರೈಲು
  • ಯೆಲ್ಲೋ ಲೈನ್​​ಗೆ 9 ಹೊಸ ರೈಲು, ಇವುಗಳ ಜೊತೆ ಹೆಚ್ಚುವರಿಯಾಗಿ 6 ರೈಲುಗಳ ಆರ್ಡರ್​
  • ಬ್ಲ್ಯೂ ಲೈನ್​​ಗೆ 37 ಹೊಸ ರೈಲು. ಆ ಪೈಕಿ ಸಿಲ್ಕ್ ಬೋರ್ಡ್ ಟು ಕೆಆರ್ ಪುರ 16 ರೈಲು ಮತ್ತು ಕೆ.ಆರ್. ಪುರ ಟು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 21 ರೈಲು
  • ಪಿಂಕ್​​ ಲೈನ್​​ಗೆ 26 ಹೊಸರೈಲು, ಇವುಗಳ ಜೊತೆ ಹೆಚ್ಚುವರಿಯಾಗಿ 7 ರೈಲುಗಳ ಆರ್ಡರ್​

ಬೆಂಗಳೂರಿನಲ್ಲಿ ಟ್ರಾಫಿಕ್​​ ಸಮಸ್ಯೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ನಮ್ಮ ಮೆಟ್ರೋ ಪ್ರಮುಖ ಪಾತ್ರ ವಹಿಸಿದೆ. ಇವುಗಳ ನಡುವಿನ ಸಂಚಾರ ಸಮಯ ಮತ್ತಷ್ಟು ಇಳಿಕೆಯಾದಲ್ಲಿ, ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳವಾಗುವ ನಿರೀಕ್ಷೆ ಇದೆ. ಬಹು ಸಮಯದಿಂದ ಮೆಟ್ರೋಗಳ ನಡುವಿನ ಸಂಚಾರ ಸಮಯ ಇಳಿಸಬೇಕೆಂಬ ಬೇಡಿಕೆ ಇದ್ದು, ಹೊಸ ರೈಲುಗಳ ಸೇರ್ಪಡೆ ಇದನ್ನು ಈಡೇರಿಸಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ