AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಯಪ್ಪನಹಳ್ಳಿಯಿಂದ ಕೆಂಗೇರಿಗೆ ನಮ್ಮ ಮೆಟ್ರೋ ಪ್ರಯಾಣ ದರ ಎಷ್ಟು? ಕೆಂಗೇರಿಗೆ ಸದ್ಯ 10 ನಿಮಿಷಕ್ಕೊಂದು ರೈಲು

ವಿಸ್ತರಿಸಿದ ನೇರಳೆ ಮಾರ್ಗದ ಪ್ರಯಾಣ ದರವನ್ನು ನಿಗದಿ ಪಡಿಸಲಾಗಿದ್ದು, ಬೈಯಪ್ಪನಹಳ್ಳಿಯಿಂದ ಕೇಂಗೇರಿಗೆ 56 ರೂಪಾಯಿ. ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆಗೆ 45 ರೂಪಾಯಿ ಟಿಕೆಟ್ ದರವಿದೆ.

ಬೈಯಪ್ಪನಹಳ್ಳಿಯಿಂದ ಕೆಂಗೇರಿಗೆ ನಮ್ಮ ಮೆಟ್ರೋ ಪ್ರಯಾಣ ದರ ಎಷ್ಟು? ಕೆಂಗೇರಿಗೆ ಸದ್ಯ 10 ನಿಮಿಷಕ್ಕೊಂದು ರೈಲು
ನಮ್ಮ ಮೆಟ್ರೋ
TV9 Web
| Edited By: |

Updated on: Aug 23, 2021 | 7:53 AM

Share

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಆರಂಭವಾದ ನಾಯಂಡಹಳ್ಳಿ- ಕೆಂಗೇರಿ ಮೆಟ್ರೋ ರೈಲು ಸಂಚಾರ ಸೇವೆಯು ಹತ್ತು ನಿಮಿಷಗಳಿಗೆ ಒಂದು ರೈಲು ಕಾರ್ಯಚರಿಸಲು ಮೆಟ್ರೋ ನಿಗಮ ನಿರ್ಧರಿಸಿತ್ತು. ಆದರೆ ಈಗ ಪ್ರಯಾಣಿಕರ ದಟ್ಟಣೆ ನೋಡಿ ರೈಲು ಸಂಚಾರ ಸೇವೆಯನ್ನು ಮತ್ತಷ್ಟು ಹೆಚ್ಚಿಸಲು ಬಿಎಂಆರ್​ಸಿಎಲ್​ ನಿರ್ಧರಿಸಿದೆ.

ಇನ್ನಿತರ ಸಮಯದಲ್ಲಿ 10 ನಿಮಿಷಗಳಿಗೆ ಒಂದರಂತೆ ರೈಲು ಸಂಚಾರ ಇರುತ್ತದೆ. ಅಂದರೆ ಬೈಯಪ್ಪನಹಳ್ಳಿಯಿಂದ ಕೆಂಗೇರಿಗೆ ಬೆಳಿಗ್ಗೆ 7 ರಿಂದ 11 ಗಂಟೆ ಮತ್ತು ಸಂಜೆ 4.30 ರಿಂದ 7.30 ರವರೆಗೆ ಇರಲಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾದಾಗ 5 ರಿಂದ 8 ನಿಮಿಷಗಳಿಗೆ ಒಂದರಂತೆ ಮೈಸೂರು ರಸ್ತೆಯಿಂದ ಬೈಯಪ್ಪನಹಳ್ಳಿವರೆಗೆ ರೈಲು ಸಂಚರಿಸಲಿದೆ ಎಂದು ಬಿಎಂಆರ್​ಸಿಎಲ್​ ಅಧಿಕಾರಿಗಳು ಹೇಳಿದ್ದಾರೆ.

ಮೆಟ್ರೋ ರೈಲುಗಳು ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆ ನಡುವೆ ಮಾತ್ರ ಸಂಚರಿಸಲಿದೆ. ಅನಿವಾರ್ಯತೆ ಇದ್ದಾಗ ಮಾತ್ರ ಕಡಿಮೆ ಸಮಯಕ್ಕೆ ಒಂದರಂತೆ ರೈಲು ಸಂಚರಿಸಲು ಬಿಎಂಆರ್​ಸಿಎಲ್ ಕ್ರಮಕೈಗೊಳ್ಳಲಿದೆ. 7.5 ಕಿಲೋಮೀಟರ್ ವಿಸ್ತರಿಸಿದ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭಿಸಿದರೆ, ಒಟ್ಟು 55 ಕಿಲೋಮೀಟರ್ ಬಿಎಂಆರ್​ಸಿಎಲ್ ನಗರದಲ್ಲಿ ಮೆಟ್ರೋ ಸಂಚರಿಸಿದಂತಾಗುತ್ತದೆ.

ಇನ್ನು ವಿಸ್ತರಿಸಿದ ನೇರಳೆ ಮಾರ್ಗದ ಪ್ರಯಾಣ ದರವನ್ನು ನಿಗದಿ ಪಡಿಸಲಾಗಿದ್ದು, ಬೈಯಪ್ಪನಹಳ್ಳಿಯಿಂದ ಕೇಂಗೇರಿಗೆ 56 ರೂಪಾಯಿ. ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆಗೆ 45 ರೂಪಾಯಿ ಟಿಕೆಟ್ ದರವಿದೆ. ಅದರಂತೆ ಮೈಸೂರು ರಸ್ತೆಯಿಂದ ಕೆಂಗೇರಿವಗರೆಗೆ 6 ಮೆಟ್ರೋ ನಿಲ್ದಾಣಗಳು ಬರಲಿದೆ.

55 ಕಿಲೋಮೀಟರ್ ಸಂಚಾರ ಸಂಪರ್ಕ ಸಾಧಿಸಿರುವ ಪೈಕಿ ದೆಹಲಿ ಹಾಗೂ ಹೈದರಾಬಾದ್ ಮೊದಲೇರಡು ಸ್ಥಾನ ಕಾಯ್ದುಕೊಂಡಿದೆ. ಬೆಂಗಳೂರು ಮೆಟ್ರೋ ನಂತರದ ಸ್ಥಾನದಲ್ಲಿದೆ. ನಾಗಸಂದ್ರ -ರೇಷ್ಮೆ ಸಂಸ್ಥೆ ವರೆಗಿನ ಹಸಿರು ಮಾರ್ಗ 30 ಕಿಲೋಮಿಟರ್, ಬೈಯಪ್ಪನಹಳ್ಳಿ ಕೆಂಗೇರಿವರೆಗಿನ ನೇರಳೆ ಮಾರ್ಗ 25 ಕಿಲೋಮೀಟರ್ ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Neo Metro: ಮೈಸೂರಿಗೆ ಬರಲಿರುವ ನಿಯೋ ಮೆಟ್ರೋ ವಿಶೇಷತೆಗಳೇನು? ರಸ್ತೆಯ ಮೇಲೆ ಓಡಾಡುವ ರೈಲು ಹೇಗಿರಲಿದೆ?

Namma Metro: ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗದಲ್ಲಿ ಆಗಸ್ಟ್ 29 ಮಧ್ಯಾಹ್ನ 12 ಗಂಟೆಯಿಂದ ಮೆಟ್ರೋ ಸಂಚಾರ ಆರಂಭ

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್