AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಮೆಟ್ರೋ ವಿಸ್ತರಣೆ ಬಗ್ಗೆ ಬಿಗ್​​​​ ಅಪ್ಡೇಟ್​ ನೀಡಿದ ಗೃಹಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರಿನಿಂದ ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆಯ ಬಹುನಿರೀಕ್ಷಿತ ಡಿಪಿಆರ್ (ವಿವರವಾದ ಯೋಜನಾ ವರದಿ) ಸಿದ್ಧವಾಗಿದೆ. ಮಾದಾವರದಿಂದ ತುಮಕೂರಿನವರೆಗೆ ಮೆಟ್ರೋ ಮಾರ್ಗ ನಿರ್ಮಿಸಲು ಅಂದಾಜು 20,000 ಕೋಟಿ ರೂ. ವೆಚ್ಚವಾಗಲಿದ್ದು, ಪಿಪಿಪಿ ಮಾದರಿ ಚಿಂತನೆಯಲ್ಲಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆದ ನಂತರ, ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ. ಇದು ತುಮಕೂರಿನ ಕೈಗಾರಿಕಾ ವಲಯ ಹಾಗೂ ಪ್ರಯಾಣಿಕರಿಗೆ ಭಾರಿ ಅನುಕೂಲ ಒದಗಿಸಲಿದೆ.

ತುಮಕೂರು ಮೆಟ್ರೋ ವಿಸ್ತರಣೆ ಬಗ್ಗೆ ಬಿಗ್​​​​ ಅಪ್ಡೇಟ್​ ನೀಡಿದ ಗೃಹಸಚಿವ ಡಾ. ಜಿ. ಪರಮೇಶ್ವರ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 23, 2026 | 9:02 PM

Share

ಬೆಂಗಳೂರು, ಮೇ 23: ತುಮಕೂರು ಮತ್ತು ಬೆಂಗಳೂರು ನಡುವೆ ದಿನನಿತ್ಯ ಸಂಚರಿಸುವ ಲಕ್ಷಾಂತರ ಪ್ರಯಾಣಿಕರ ದಶಕಗಳ ಕನಸು ಕೊನೆಗೂ ನನಸಾಗುವತ್ತ ದೊಡ್ಡ ಹೆಜ್ಜೆ ಇಟ್ಟಿದೆ. ಬೆಂಗಳೂರಿನ ಮಾದಾವರದಿಂದ ತುಮಕೂರು ನಗರದವರೆಗೆ ‘ನಮ್ಮ ಮೆಟ್ರೋ’ (Namma Metro) ರೈಲು ಯೋಜನೆಯನ್ನು ವಿಸ್ತರಿಸುವ ಕುರಿತು ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಿದ್ದು, ಶೀಘ್ರದಲ್ಲೇ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಹೇಳಿದ್ದಾರೆ.

ತುಮಕೂರಿಗೆ ಮೆಟ್ರೋ ಸಂಪರ್ಕ ಕಲ್ಪಿಸಬೇಕೆಂದು ಬಹಳ ದಿನಗಳಿಂದ ತೀವ್ರ ದೊಡ್ಡ ಮಟ್ಟದ ಪ್ರಯತ್ನಗಳು ನಡೆಯುತ್ತಿದ್ದವು. ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಯೋಜನೆಯ ಫೀಸಿಬಿಲಿಟಿ (ಸಾಧ್ಯತೆಗಳ) ಅಧ್ಯಯನ ನಡೆಸುವುದಾಗಿ ಭರವಸೆ ನೀಡಿದ್ದರು. ಅದರಂತೆ, ಹೈದರಾಬಾದ್ ಮೂಲದ ಸಂಸ್ಥೆಯೊಂದಕ್ಕೆ 3.5 ಕೋಟಿ ರೂಪಾಯಿ ವೆಚ್ಚದಲ್ಲಿ ಜವಾಬ್ದಾರಿ ನೀಡಲಾಗಿತ್ತು. ಆ ಸಂಸ್ಥೆಯು ನೀಡಿರುವ ವರದಿಯಲ್ಲಿ “ಮಾದಾವರದಿಂದ ತುಮಕೂರಿನವರೆಗೆ ಮೆಟ್ರೋ ಮಾರ್ಗ ನಿರ್ಮಿಸುವುದು ಸಂಪೂರ್ಣ ಸಾಧ್ಯ ಹಾಗೂ ಲಾಭದಾಯಕ” ಎಂದು ಸ್ಪಷ್ಟಪಡಿಸಲಾಗಿದೆ.

ಇನ್ನು ಇದರ ಸಾಧ್ಯತೆಗಳ ವರದಿ ಬಂದ ನಂತರ ಬಿಎಂಆರ್‌ಸಿಎಲ್ ಸಂಸ್ಥೆಯು ಮತ್ತೊಂದು ಖಾಸಗಿ ಏಜೆನ್ಸಿ ಮೂಲಕ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಿಕೊಂಡಿದೆ. ಈ ಡಿಪಿಆರ್ ವರದಿಯ ಪ್ರಕಾರ ಮಾದಾವರ-ತುಮಕೂರು ಮೆಟ್ರೋ ಲೈನ್ ನಿರ್ಮಾಣಕ್ಕೆ ಅಂದಾಜು 20,000 ಕೋಟಿ ರೂಪಾಯಿ ವೆಚ್ಚ ತಗುಲಬಹುದು ಎಂದು ಅಂದಾಜಿಸಲಾಗಿದೆ. ಇಷ್ಟೊಂದು ಬೃಹತ್ ಮೊತ್ತದ ಯೋಜನೆಯನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದ ಅಡಿಯಲ್ಲಿ ಅಂದರೆ ಪಿಪಿಪಿಮಾಡೆಲ್ ಮೂಲಕ ಜಾರಿಗೆ ತರಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಇದನ್ನೂ ಓದಿ: ತೆಲಂಗಾಣದಲ್ಲಿ ಬಿಸಿಲಿಗೆ 16 ಜನ ಸಾವು! ಭೀಕರ ಉಷ್ಣಗಾಳಿಗೆ ನಡುಗಿದ 7 ಜಿಲ್ಲೆಗಳು

“ಡಿಪಿಆರ್ ವರದಿ ಕೈಸೇರಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸಮಗ್ರವಾಗಿ ಚರ್ಚಿಸಿ ಅಧಿಕೃತ ಅನುಮೋದನೆ ಪಡೆದುಕೊಳ್ಳಲಿದ್ದೇವೆ. ಆ ನಂತರ ಜಾಗತಿಕ ಮಟ್ಟದಲ್ಲಿ ಟೆಂಡರ್ ಕರೆಯುವ ಪ್ರಕ್ರಿಯೆ ಆರಂಭವಾಗಲಿದೆ” ಎಂದು ಸಚಿವ ಪರಮೇಶ್ವರ್ ಭರವಸೆ ನೀಡಿದ್ದಾರೆ. ಈ ಯೋಜನೆಯಿಂದಾಗಿ ತುಮಕೂರು ಜಿಲ್ಲೆಯ ಕೈಗಾರಿಕಾ ವಲಯ ಹಾಗೂ ಉದ್ಯೋಗಿಗಳಿಗೆ ಭಾರಿ ಅನುಕೂಲವಾಗಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ಬಿಯರ್ ಬಾಟಲಿಗಳಿದ್ದ ಲಾರಿ ಪಲ್ಟಿ; ಲಕ್ಷಾಂತರ ರೂ. ಮೌಲ್ಯದ ಮದ್ಯರಸ್ತೆ ಪಾಲು
ಬಿಯರ್ ಬಾಟಲಿಗಳಿದ್ದ ಲಾರಿ ಪಲ್ಟಿ; ಲಕ್ಷಾಂತರ ರೂ. ಮೌಲ್ಯದ ಮದ್ಯರಸ್ತೆ ಪಾಲು