AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಕಾಮಗಾರಿ: ಶಿವಾಜಿನಗರದ ಈ ರಸ್ತೆಗಳಲ್ಲಿ 30 ದಿನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ಇಲ್ಲಿದೆ

Bangalore Traffic Advisroy: ಮೆಟ್ರೋ ಕಾಮಗಾರಿಯಿಂದಾಗಿ ಬೆಂಗಳೂರಿನ ಶಿವಾಜಿನಗರದ ಈ ರಸ್ತೆಗಳಲ್ಲಿ ಒಂದು ತಿಂಗಳ ಕಾಲ ಸಂಚಾರ ನಿರ್ಬಂಧಿಸಲಾಗಿದೆ. ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಸಮೀಪದ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

ಮೆಟ್ರೋ ಕಾಮಗಾರಿ: ಶಿವಾಜಿನಗರದ ಈ ರಸ್ತೆಗಳಲ್ಲಿ 30 ದಿನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ಇಲ್ಲಿದೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Nov 09, 2024 | 7:41 AM

Share

ಬೆಂಗಳೂರು, ನವೆಂಬರ್​ 09: ಬೆಂಗಳೂರಿನ (Bengaluru) ಶಿವಾಜಿನಗರ (Shivajinagar) ಸುತ್ತಮುತ್ತ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ಒಂದು ತಿಂಗಳಕಾಲ ನಿರ್ಭಂದಿಸಲಾಗಿದೆ. ಈ ಕುರಿತು ಬೆಂಗಳೂರು ಸಂಚಾರಿ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ತಿಳಿಸಿದ್ದಾರೆ. ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಬಳಿ ಮೆಟ್ರೋ (ಬಿಎಂಆರ್​ಸಿಎಲ್) ವತಿಯಿಂದ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ನ.11) ರಿಂದ 30 ದಿನಗಳ ಕಾಲ ಈ ಕೆಳಗಿನ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ

ಬಾಳೆಕುಂದ್ರಿಯಿಂದ ಶಿವಾಜಿ ಸರ್ಕಲ್ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಬಿಎಂಟಿಸಿ ಬಸ್ ಮತ್ತು ಎಲ್ಲಾ ಮಾದರಿಯ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ. ಶಿವಾಜಿ ರಸ್ತೆಯ ಮೂಲಕ ಶಿವಾಜಿ ಸರ್ಕಲ್ ಕಡೆಯಿಂದ ಜೋತಿ ಕೆಫೆ ಮತ್ತು ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ ಇಂದಿನಿಂದ ವಾಹನ ಸಂಚಾರ ಭಾಗಶಃ ನಿಷೇಧ: ಪರ್ಯಾಯ ಮಾರ್ಗ ವಿವರ ಇಲ್ಲಿದೆ

ಪರ್ಯಾಯ ಮಾರ್ಗ

ಬಾಳೆಕುಂದ್ರಿಯಿಂದ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಬಸ್ ಹಾಗೂ ಎಲ್ಲಾ ಮಾದರಿಯ ವಾಹನಗಳು ಟ್ರಾಫಿಕ್ ಹೆಡ್ ಕ್ವಾರ್ಟರ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆಯ ಮೂಲಕ ಸೆಂಟ್ರಲ್ ಸ್ಟ್ರೀಟ್ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

ಶಿವಾಜಿ ರಸ್ತೆಯಿಂದ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಎಲ್ಲಾ ಮಾದರಿಯ ವಾಹನಗಳು ಶಿವಾಜಿ ಸರ್ಕಲ್‌ನಲ್ಲಿ ಬಲ ತಿರುವು ಪಡೆದು ವೆಂಕಟಸ್ವಾಮಿ ನಾಯ್ಡು ರಸ್ತೆಯ ಮೂಲಕ ಬಾಳೆಕುಂದ್ರಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಟ್ರಾಫಿಕ್ ಹೆಡ್ ಕ್ವಾಟರ್ಸ್​​ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆಯ ಮೂಲಕ ಸೆಂಟ್ರಲ್ ಸ್ಟ್ರೀಟ್ ಜಂಕ್ಷನ್‌ನಲ್ಲಿ ಎಡ ತಿರುವು ತೆಗೆದುಕೊಂಡು ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು