AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಕಾಮಗಾರಿ: ಶಿವಾಜಿನಗರದ ಈ ರಸ್ತೆಗಳಲ್ಲಿ 30 ದಿನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ಇಲ್ಲಿದೆ

Bangalore Traffic Advisroy: ಮೆಟ್ರೋ ಕಾಮಗಾರಿಯಿಂದಾಗಿ ಬೆಂಗಳೂರಿನ ಶಿವಾಜಿನಗರದ ಈ ರಸ್ತೆಗಳಲ್ಲಿ ಒಂದು ತಿಂಗಳ ಕಾಲ ಸಂಚಾರ ನಿರ್ಬಂಧಿಸಲಾಗಿದೆ. ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಸಮೀಪದ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

ಮೆಟ್ರೋ ಕಾಮಗಾರಿ: ಶಿವಾಜಿನಗರದ ಈ ರಸ್ತೆಗಳಲ್ಲಿ 30 ದಿನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ಇಲ್ಲಿದೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Nov 09, 2024 | 7:41 AM

Share

ಬೆಂಗಳೂರು, ನವೆಂಬರ್​ 09: ಬೆಂಗಳೂರಿನ (Bengaluru) ಶಿವಾಜಿನಗರ (Shivajinagar) ಸುತ್ತಮುತ್ತ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ಒಂದು ತಿಂಗಳಕಾಲ ನಿರ್ಭಂದಿಸಲಾಗಿದೆ. ಈ ಕುರಿತು ಬೆಂಗಳೂರು ಸಂಚಾರಿ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ತಿಳಿಸಿದ್ದಾರೆ. ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಬಳಿ ಮೆಟ್ರೋ (ಬಿಎಂಆರ್​ಸಿಎಲ್) ವತಿಯಿಂದ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ನ.11) ರಿಂದ 30 ದಿನಗಳ ಕಾಲ ಈ ಕೆಳಗಿನ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ

ಬಾಳೆಕುಂದ್ರಿಯಿಂದ ಶಿವಾಜಿ ಸರ್ಕಲ್ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಬಿಎಂಟಿಸಿ ಬಸ್ ಮತ್ತು ಎಲ್ಲಾ ಮಾದರಿಯ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ. ಶಿವಾಜಿ ರಸ್ತೆಯ ಮೂಲಕ ಶಿವಾಜಿ ಸರ್ಕಲ್ ಕಡೆಯಿಂದ ಜೋತಿ ಕೆಫೆ ಮತ್ತು ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ ಇಂದಿನಿಂದ ವಾಹನ ಸಂಚಾರ ಭಾಗಶಃ ನಿಷೇಧ: ಪರ್ಯಾಯ ಮಾರ್ಗ ವಿವರ ಇಲ್ಲಿದೆ

ಪರ್ಯಾಯ ಮಾರ್ಗ

ಬಾಳೆಕುಂದ್ರಿಯಿಂದ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಬಸ್ ಹಾಗೂ ಎಲ್ಲಾ ಮಾದರಿಯ ವಾಹನಗಳು ಟ್ರಾಫಿಕ್ ಹೆಡ್ ಕ್ವಾರ್ಟರ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆಯ ಮೂಲಕ ಸೆಂಟ್ರಲ್ ಸ್ಟ್ರೀಟ್ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

ಶಿವಾಜಿ ರಸ್ತೆಯಿಂದ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಎಲ್ಲಾ ಮಾದರಿಯ ವಾಹನಗಳು ಶಿವಾಜಿ ಸರ್ಕಲ್‌ನಲ್ಲಿ ಬಲ ತಿರುವು ಪಡೆದು ವೆಂಕಟಸ್ವಾಮಿ ನಾಯ್ಡು ರಸ್ತೆಯ ಮೂಲಕ ಬಾಳೆಕುಂದ್ರಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಟ್ರಾಫಿಕ್ ಹೆಡ್ ಕ್ವಾಟರ್ಸ್​​ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆಯ ಮೂಲಕ ಸೆಂಟ್ರಲ್ ಸ್ಟ್ರೀಟ್ ಜಂಕ್ಷನ್‌ನಲ್ಲಿ ಎಡ ತಿರುವು ತೆಗೆದುಕೊಂಡು ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ