AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಕಾಮಗಾರಿ: ಶಿವಾಜಿನಗರದ ಈ ರಸ್ತೆಗಳಲ್ಲಿ 30 ದಿನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ಇಲ್ಲಿದೆ

Bangalore Traffic Advisroy: ಮೆಟ್ರೋ ಕಾಮಗಾರಿಯಿಂದಾಗಿ ಬೆಂಗಳೂರಿನ ಶಿವಾಜಿನಗರದ ಈ ರಸ್ತೆಗಳಲ್ಲಿ ಒಂದು ತಿಂಗಳ ಕಾಲ ಸಂಚಾರ ನಿರ್ಬಂಧಿಸಲಾಗಿದೆ. ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಸಮೀಪದ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

ಮೆಟ್ರೋ ಕಾಮಗಾರಿ: ಶಿವಾಜಿನಗರದ ಈ ರಸ್ತೆಗಳಲ್ಲಿ 30 ದಿನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ಇಲ್ಲಿದೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Nov 09, 2024 | 7:41 AM

Share

ಬೆಂಗಳೂರು, ನವೆಂಬರ್​ 09: ಬೆಂಗಳೂರಿನ (Bengaluru) ಶಿವಾಜಿನಗರ (Shivajinagar) ಸುತ್ತಮುತ್ತ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ಒಂದು ತಿಂಗಳಕಾಲ ನಿರ್ಭಂದಿಸಲಾಗಿದೆ. ಈ ಕುರಿತು ಬೆಂಗಳೂರು ಸಂಚಾರಿ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ತಿಳಿಸಿದ್ದಾರೆ. ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಬಳಿ ಮೆಟ್ರೋ (ಬಿಎಂಆರ್​ಸಿಎಲ್) ವತಿಯಿಂದ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ನ.11) ರಿಂದ 30 ದಿನಗಳ ಕಾಲ ಈ ಕೆಳಗಿನ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ

ಬಾಳೆಕುಂದ್ರಿಯಿಂದ ಶಿವಾಜಿ ಸರ್ಕಲ್ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಬಿಎಂಟಿಸಿ ಬಸ್ ಮತ್ತು ಎಲ್ಲಾ ಮಾದರಿಯ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ. ಶಿವಾಜಿ ರಸ್ತೆಯ ಮೂಲಕ ಶಿವಾಜಿ ಸರ್ಕಲ್ ಕಡೆಯಿಂದ ಜೋತಿ ಕೆಫೆ ಮತ್ತು ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ ಇಂದಿನಿಂದ ವಾಹನ ಸಂಚಾರ ಭಾಗಶಃ ನಿಷೇಧ: ಪರ್ಯಾಯ ಮಾರ್ಗ ವಿವರ ಇಲ್ಲಿದೆ

ಪರ್ಯಾಯ ಮಾರ್ಗ

ಬಾಳೆಕುಂದ್ರಿಯಿಂದ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಬಸ್ ಹಾಗೂ ಎಲ್ಲಾ ಮಾದರಿಯ ವಾಹನಗಳು ಟ್ರಾಫಿಕ್ ಹೆಡ್ ಕ್ವಾರ್ಟರ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆಯ ಮೂಲಕ ಸೆಂಟ್ರಲ್ ಸ್ಟ್ರೀಟ್ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

ಶಿವಾಜಿ ರಸ್ತೆಯಿಂದ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಎಲ್ಲಾ ಮಾದರಿಯ ವಾಹನಗಳು ಶಿವಾಜಿ ಸರ್ಕಲ್‌ನಲ್ಲಿ ಬಲ ತಿರುವು ಪಡೆದು ವೆಂಕಟಸ್ವಾಮಿ ನಾಯ್ಡು ರಸ್ತೆಯ ಮೂಲಕ ಬಾಳೆಕುಂದ್ರಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಟ್ರಾಫಿಕ್ ಹೆಡ್ ಕ್ವಾಟರ್ಸ್​​ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆಯ ಮೂಲಕ ಸೆಂಟ್ರಲ್ ಸ್ಟ್ರೀಟ್ ಜಂಕ್ಷನ್‌ನಲ್ಲಿ ಎಡ ತಿರುವು ತೆಗೆದುಕೊಂಡು ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ