AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಮ್ಮ ಮೆಟ್ರೋ ಹಳದಿ ಲೈನ್: ಮಹತ್ವದ ಅಪ್​ಡೇಟ್ ನೀಡಿದ ಬಿಎಂಆರ್​ಸಿಎಲ್

ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಈ ಕುರಿತು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅಧಿಕೃತ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ. ಯಾವಾಗ ಮೆಟ್ರೋ ಸಂಚಾರ ಶುರುವಾಗಲಿದೆ? ಎಷ್ಟು ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಸಂಚರಿಸಲಿವೆ ಇತ್ಯಾದಿ ಮಾಹಿತಿ ಇಲ್ಲಿದೆ

ಬೆಂಗಳೂರು ನಮ್ಮ ಮೆಟ್ರೋ ಹಳದಿ ಲೈನ್: ಮಹತ್ವದ ಅಪ್​ಡೇಟ್ ನೀಡಿದ ಬಿಎಂಆರ್​ಸಿಎಲ್
ನಮ್ಮ ಮೆಟ್ರೋ ಹಳದಿ ಲೈನ್
ಗಣಪತಿ ಶರ್ಮಾ
|

Updated on: Oct 06, 2024 | 11:55 AM

Share

ಬೆಂಗಳೂರು, ಅಕ್ಟೋಬರ್ 6: ನಮ್ಮ ಮೆಟ್ರೋ ಹಳದಿ ಲೈನ್ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಮಹತ್ವದ ಅಪ್​ಡೇಟ್ ನೀಡಿದೆ. ಯೆಲ್ಲೋ ಲೈನ್​ ಮಾರ್ಗದಲ್ಲಿ ಆರ್‌ವಿ ರಸ್ತೆಯಿಂದ ಎಲೆಕ್ಟ್ರಾನಿಕ್ಸ್ ಸಿಟಿ ಮೂಲಕ ಬೊಮ್ಮಸಂದ್ರದವರೆಗೆ 2025 ರ ಜನವರಿಯಿಂದ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಪ್ರತಿ 30 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ.

ಈ ವರ್ಷ ಡಿಸೆಂಬರ್​​ನಲ್ಲಿ ರೈಲು ಸುರಕ್ಷತಾ ಆಯುಕ್ತರಿಂದ ತಪಾಸಣೆ ನಡೆಯಲಿದೆ. ಈ ಮಾರ್ಗದ ಸಂಚಾರಕ್ಕಾಗಿ ನವೆಂಬರ್-ಡಿಸೆಂಬರ್ ವೇಳೆಗೆ ಮೂರು ರೈಲುಗಳು ಲಭ್ಯವಿರಲಿವೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ಸಿಗ್ನಲಿಂಗ್ ವ್ಯವಸ್ಥೆ ಮತ್ತು ರೋಲಿಂಗ್ ಸ್ಟಾಕ್‌ಗೆ ಸಂಬಂಧಿಸಿ ರೈಲ್ವೆ ಮಂಡಳಿಯಿಂದ ತಾಂತ್ರಿಕ ಅನುಮೋದನೆ ದೊರೆತಿದ್ದು, ಮುಂದಿನ ಪ್ರಕ್ರಿಯೆಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ. ಮುಂದಿನ ವರ್ಷ ಮಾರ್ಚ್‌ನಿಂದ ತಿಂಗಳಿಗೆ ಎರಡು ರೈಲುಗಳಂತೆ ಪಶ್ಚಿಮ ಬಂಗಾಳದ ಟಿಟಾಗರ್ ರೈಲ್ ಸಿಸ್ಟಮ್ಸ್ ಲಿಮಿಟೆಡ್‌ನಿಂದ ರೈಲುಗಳು ಪೂರೈಕೆಯಾಗಲಿವೆ. ರೀಚ್-5 ಮಾರ್ಗದ ಎಲ್ಲಾ 15 ರೈಲುಗಳು 2025 ರ ಆಗಸ್ಟ್ ವೇಳೆಗೆ ಕಾರ್ಯಾಚರಣೆಗೆ ಸಿದ್ಧವಾಗಿರಲಿವೆ ಎಂದು ಬಿಎಂಆರ್​​ಸಿಎಲ್ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ದೇವನಹಳ್ಳಿ ಕಂಟೋನ್ಮೆಂಟ್ ರೈಲು ನಿಲ್ದಾಣ ನವೀಕರಣ ಕಾಮಗಾರಿ ಪರಿಶೀಲಿಸಿದ ಅಶ್ವಿನಿ ವೈಷ್ಣವ್: ಸಚಿವ ವಿ ಸೋಮಣ್ಣ ಸಾಥ್

ಸದ್ಯ ಹಳದಿ ಮಾರ್ಗದಲ್ಲಿ ಚಾಲಕರಹಿತ ಮೆಟ್ರೋ ರೈಲಿನ ಪರೀಕ್ಷಾರ್ಥ ಸಂಚಾರ ನಡೆಯುತ್ತಿದೆ. ಹಳದಿ ಮಾರ್ಗದಲ್ಲಿ ಬೊಮ್ಮಸಂದ್ರದಿಂದ ಆರ್​​ವಿ ರಸ್ತೆ ವರೆಗೆ ಒಟ್ಟು 16 ನಿಲ್ದಾಣಗಳು ಇರಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ