AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು 13ನೇ ರೈಲು: ಶೀಘ್ರದಲ್ಲೇ 5 ನಿಮಿಷಕ್ಕೊದರಂತೆ ಮೆಟ್ರೋ ಸಂಚಾರ ಶುರು

ಬೆಂಗಳೂರು ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ (Yellow Line) ಮತ್ತೊಂದು ಬಲ ಬಂದಿದೆ. ಚೀನಾದಿಂದ ತರಿಸಿಕೊಳ್ಳಲಾಗುತ್ತಿರುವ 13ನೇ ಮೆಟ್ರೋ ರೈಲು ಸೋಮವಾರ ಹೆಬ್ಬಗೋಡಿ ಡಿಪೋ ತಲುಪಿದೆ. ಆಗಸ್ಟ್ ವೇಳೆಗೆ ಈ ಮಾರ್ಗದಲ್ಲಿ ಒಟ್ಟು 15 ರೈಲುಗಳು ಕಾರ್ಯನಿರ್ವಹಿಸಲಿದ್ದು, ಪೀಕ್ ಅವರ್‌ನಲ್ಲಿ 5 ನಿಮಿಷಕ್ಕೊಂದರಂತೆ ರೈಲುಗಳು ಸಂಚರಿಸಲಿವೆ.

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು 13ನೇ ರೈಲು: ಶೀಘ್ರದಲ್ಲೇ 5 ನಿಮಿಷಕ್ಕೊದರಂತೆ ಮೆಟ್ರೋ ಸಂಚಾರ ಶುರು
ನಮ್ಮ ಮೆಟ್ರೋ ಹಳದಿ ಮಾರ್ಗ ರೈಲಿನ ಸಂಗ್ರಹ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: Jun 16, 2026 | 8:10 AM

Share

ಬೆಂಗಳೂರು, ಜೂನ್ 16: ಬೆಂಗಳೂರಿನ ಸಂಚಾರ ದಟ್ಟಣೆಗೆ ಪ್ರಮುಖ ಪರಿಹಾರ ಎಂದೇ ಬಿಂಬಿತವಾಗಿರುವ ನಮ್ಮ ಮೆಟ್ರೋದ ಎಲೆಕ್ಟ್ರಾನಿಕ್ ಸಿಟಿ ಮಾರ್ಗ ಅಥವಾ ಹಳದಿ ಮಾರ್ಗಕ್ಕೆ (Yellow Line) ಮತ್ತೊಂದು ಹೊಸ ರೈಲು ಸೇರ್ಪಡೆಯಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸೋಮವಾರ 13ನೇ ಹೊಸ ರೈಲನ್ನು ಬರಮಾಡಿಕೊಂಡಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಾಂಶಗಳು

  • ಹೆಬ್ಬಗೋಡಿ ಡಿಪೋಗೆ ಆಗಮಿಸಿದ 13ನೇ ರೈಲು
  • ರಾತ್ರಿ ವೇಳೆ 750 ಕಿಮೀ ಟ್ರಯಲ್ ರನ್
  • ಆಗಸ್ಟ್ ವೇಳೆಗೆ ಪೂರ್ಣಗೊಳ್ಳಲಿರುವ ರೈಲುಗಳ ಸೇರ್ಪಡೆ

ಆರು ಕೋಚ್‌ಗಳನ್ನು ಒಳಗೊಂಡಿರುವ ಈ ಹೊಸ ಮೆಟ್ರೋ ರೈಲು ಸೋಮವಾರ ಹೆಬ್ಬಗೋಡಿ ಡಿಪೋಗೆ ಬಂದು ತಲುಪಿದೆ. ಸದ್ಯ ಟ್ರೈಲರ್‌ಗಳಿಂದ ಕೋಚ್‌ಗಳನ್ನು ಕೆಳಗಿಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಬಳಿಕ ಇವುಗಳನ್ನು ಒಟ್ಟುಗೂಡಿಸಿ (Assemble) ಸ್ಟ್ಯಾಟಿಕ್ ಟೆಸ್ಟಿಂಗ್‌ಗಾಗಿ ಇನ್ಸ್‌ಪೆಕ್ಷನ್ ಬೇ ಲೈನ್‌ಗೆ (IBL) ಕೊಂಡೊಯ್ಯಲಾಗುತ್ತದೆ. ಸಾರ್ವಜನಿಕರ ಸೇವೆಗೆ ಮುಕ್ತವಾಗುವ ಮುನ್ನ ಈ ರೈಲು ಮುಖ್ಯ ಮಾರ್ಗದಲ್ಲಿ ಸುಮಾರು 750 ಕಿಲೋಮೀಟರ್‌ಗಳಷ್ಟು ಪರೀಕ್ಷಾರ್ಥ ಸಂಚಾರ ಪೂರ್ಣಗೊಳಿಸಬೇಕಿದೆ. ಮೆಟ್ರೋ ಸಂಚಾರಕ್ಕೆ ತೊಂದರೆಯಾಗದಂತೆ ಈ ಪ್ರಕ್ರಿಯೆಯನ್ನು ಕೇವಲ ರಾತ್ರಿ ವೇಳೆಯಲ್ಲಿ ಮಾತ್ರ ನಡೆಸಲಾಗುತ್ತದೆ.

ಪೀಕ್ ಅವರ್‌ನಲ್ಲಿ 5 ನಿಮಿಷಕ್ಕೊಂದು ರೈಲು

ಪ್ರಸ್ತುತ 19.75 ಕಿಲೋಮೀಟರ್ ಉದ್ದದ ಹಳದಿ ಮಾರ್ಗದಲ್ಲಿ ಒಟ್ಟು 10 ರೈಲುಗಳು ಕಾರ್ಯನಿರ್ವಹಿಸುತ್ತಿದ್ದು, ಪೀಕ್ ಅವರ್‌ನಲ್ಲಿ (ಹೆಚ್ಚಿನ ದಟ್ಟಣೆ ಇರುವ ಸಮಯ) ಪ್ರತಿ 7 ನಿಮಿಷಕ್ಕೊಮ್ಮೆ ಮೆಟ್ರೋ ಸೌಲಭ್ಯ ಸಿಗುತ್ತಿದೆ. ಇನ್ನುಳಿದ ಎರಡು ರೈಲುಗಳು ಈಗಾಗಲೇ ಪರೀಕ್ಷಾ ಹಂತದಲ್ಲಿದ್ದು, ಮುಂದಿನ ಕೆಲವೇ ವಾರಗಳಲ್ಲಿ ಸಂಚಾರಕ್ಕೆ ಲಭ್ಯವಾಗಲಿವೆ. ಕೋಲ್ಕತ್ತಾ ಸಮೀಪದ ತಿತಾಗಢ್ ರೈಲ್ ಸಿಸ್ಟಮ್ಸ್ ಲಿಮಿಟೆಡ್ (TRSL) ಸಂಸ್ಥೆಯು 14 ಮತ್ತು 15ನೇ ರೈಲುಗಳನ್ನು ಸಿದ್ಧಪಡಿಸುತ್ತಿದ್ದು, ಜುಲೈ ಆರಂಭದ ವೇಳೆಗೆ ಅವು ಬೆಂಗಳೂರಿಗೆ ರವಾನೆಯಾಗಲಿವೆ.

ಇದನ್ನೂ ಓದಿ: ಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿಯ ಮೊದಲ ಫಲ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಮತ್ತೊಂದು ಗುಡ್ ನ್ಯೂಸ್

ಬರುವ ಆಗಸ್ಟ್ 11ಕ್ಕೆ ಹಳದಿ ಮಾರ್ಗದ ಮೊದಲ ವಾರ್ಷಿಕೋತ್ಸವದ ವೇಳೆಗೆ ಎಲ್ಲಾ 15 ರೈಲುಗಳು ಕಾರ್ಯಾಚರಣೆಗೆ ಸಜ್ಜಾಗಲಿವೆ. ಇದರಿಂದಾಗಿ ಪೀಕ್ ಅವರ್‌ನ ಕಾಯುವಿಕೆ ಅವಧಿ 5 ನಿಮಿಷ ಅಥವಾ ಅದಕ್ಕಿಂತಲೂ ಕಡಿಮೆಯಾಗಲಿದೆ. ಇದರಲ್ಲಿ ಎರಡು ರೈಲುಗಳನ್ನು ತುರ್ತು ಪರಿಸ್ಥಿತಿ ಎದುರಿಸಲು ರಿಸರ್ವ್ ಸ್ಟಾಕ್ ಆಗಿ ಇರಿಸಲಾಗುತ್ತದೆ. ಇದರ ನಂತರ ಟಿಆರ್‌ಎಸ್‌ಎಲ್ ಸಂಸ್ಥೆಯು ಪರ್ಪಲ್ ಮತ್ತು ಗ್ರೀನ್ ಲೈನ್‌ಗಳಿಗಾಗಿ 18 ರೈಲುಗಳನ್ನು ಪೂರೈಸುವತ್ತ ಗಮನ ಹರಿಸಲಿದೆ. ಅಲ್ಲದೆ, 2027ರ ವೇಳೆಗೆ ಬೆಮೆಲ್ (BEML) ಸಂಸ್ಥೆಯಿಂದ ಹಳದಿ ಮಾರ್ಗಕ್ಕೆ ಹೆಚ್ಚುವರಿಯಾಗಿ ಮತ್ತೂ 6 ರೈಲುಗಳು ಪೂರೈಕೆಯಾಗಲಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ