AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರಿಗೆ ಗುಡ್​​ನ್ಯೂಸ್​​: ನಮ್ಮ ಮೆಟ್ರೋ ಯೆಲ್ಲೋ ಲೈನ್​​ನಲ್ಲಿ ನಾಳೆಯಿಂದ 8ನೇ ರೈಲು ಸಂಚಾರ

ಬೆಂಗಳೂರು ಮೆಟ್ರೋದ ಹಳದಿ ಮಾರ್ಗಕ್ಕೆ 8ನೇ ರೈಲು ಸೇರ್ಪಡೆಯಾಗಿದ್ದು, ಫೆಬ್ರವರಿ 27 ರಿಂದ ಸೇವೆಗೆ ಲಭ್ಯವಾಗಲಿದೆ. ಇದರಿಂದಾಗಿ ಸೋಮವಾರದಿಂದ ಶನಿವಾರದವರೆಗೆ ಪೀಕ್ ಅವಧಿಯಲ್ಲಿ 9 ನಿಮಿಷಕ್ಕೆ ಹಾಗೂ ನಾನ್-ಪೀಕ್ ಅವಧಿಯಲ್ಲಿ 14 ನಿಮಿಷಕ್ಕೆ ಮೆಟ್ರೋ ನಡುವಿನ ಸಂಚಾರದ ಅಂತರ ಕಡಿಮೆ ಆಗಲಿದೆ. ಇದರಿಂದ ಪ್ರಯಾಣಿಕರ ಕಾಯುವ ಸಮಯ ಕಡಿಮೆಯಾಗಲಿದ್ದು, ದಟ್ಟಣೆಯೂ ಇಳಿಕೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿಗರಿಗೆ ಗುಡ್​​ನ್ಯೂಸ್​​: ನಮ್ಮ ಮೆಟ್ರೋ ಯೆಲ್ಲೋ ಲೈನ್​​ನಲ್ಲಿ ನಾಳೆಯಿಂದ 8ನೇ ರೈಲು ಸಂಚಾರ
ಯೆಲ್ಲೋ ಲೈನ್​​ ಮೆಟ್ರೋImage Credit source: Google
Kiran Surya
| Edited By: |

Updated on: Feb 26, 2026 | 6:51 PM

Share

ಬೆಂಗಳೂರು, ಫೆಬ್ರವರಿ 26: ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಸಂಚರಿಸಲಿರುವ ಬಿಇಎಂಎಲ್ ಸಂಸ್ಥೆ ತಯಾರಿಸಿದ ಮೂರನೇ ಡ್ರೈವರ್​ಲೆಸ್​ ರೈಲಿನ ಸೆಟ್ ಯಶಸ್ವಿಯಾಗಿ ಕೊತ್ತನೂರು ಡಿಪೋವನ್ನು ತಲುಪಿರುವ ಸುದ್ದಿಯ ನಡುವೆ ಬಿಎಂಆರ್​​ಸಿಎಲ್​​ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​​ನ್ಯೂಸ್​​ ಕೊಟ್ಟಿದೆ. ಯೆಲ್ಲೋ ಲೈನ್ ಮೆಟ್ರೋ ಮಾರ್ಗದಲ್ಲಿ ನಾಳೆಯಿಂದ 8ನೇ ರೈಲು ಸಂಚಾರ ಮಾಡಲಿದೆ ಎಂದು ಪ್ರಕಟಣೆ  ತಿಳಿಸಿದೆ.

ಪ್ರಕಟಣೆಯಲ್ಲಿ ಏನಿದೆ?

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು 2026ರ ಫೆಬ್ರವರಿ 27ರಿಂದ ಹಳದಿ ಮಾರ್ಗದಲ್ಲಿ 8ನೇ ರೈಲನ್ನು ಪ್ರಯಾಣಿಕರ ಸೇವೆಗೆ ಒದಗಿಸುತ್ತಿದೆ. ಹೆಚ್ಚುವರಿ ರೈಲು ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಹಳದಿ ಮಾರ್ಗದಲ್ಲಿ ಪೀಕ್ ಅವಧಿಯ ವೇಳೆಯಲ್ಲಿ 10 ನಿಮಿಷಗಳ ಬದಲಿಗೆ 9 ನಿಮಿಷಗಳ ಅಂತರದಲ್ಲಿ ಹಾಗೂ ನಾನ್-ಪೀಕ್ ಅವಧಿಯಲ್ಲಿ 18 ನಿಮಿಷಗಳ ಬದಲಿಗೆ 14 ನಿಮಿಷಗಳ ಅಂತರದಲ್ಲಿ ಮೆಟ್ರೋ ರೈಲುಗಳು ಸಂಚರಿಸಲಿವೆ. ಭಾನುವಾರದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಎಲ್ಲಾ ದಿನಗಳಲ್ಲಿ ಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ಟರ್ಮಿನಲ್‌ ನಿಲ್ದಾಣಗಳಿಂದ ಹೊರಡುವ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್​​ಸಿಎಲ್​​ ತಿಳಿಸಿದೆ.

ಇದನ್ನೂ ಓದಿ: ಪಿಂಕ್ ಲೈನ್ ಮೆಟ್ರೋ; ಕೋತ್ತನೂರು ಡಿಪೋಗೆ ಮೂರನೇ ರೈಲು ಸೆಟ್ ಆಗಮನ

2025ರ ಆಗಸ್ಟ್ 10ರಂದು ಯೆಲ್ಲೋ ಲೈನ್​​ ಉದ್ಘಾಟನೆಯಾಗಿದ್ದು, ಆಗಸ್ಟ್​​ 11ರಿಂದ ವಾಣಿಜ್ಯ ಸಂಚಾರವನ್ನು ಈ ಮಾರ್ಗದಲ್ಲಿ ನಮ್ಮ ಮೆಟ್ರೋ ಆರಂಭಿಸಿತ್ತು. 19.15 ಕಿಮೀ ವಿಸ್ತೀರ್ಣವಿರುವ ಈ ಮಾರ್ಗದಲ್ಲಿ ಸದ್ಯ 7 ಮೆಟ್ರೋ ರೈಲುಗಳು ಮಾತ್ರ ಸಂಚಾರ ನಡೆಸುತ್ತಿದ್ದು, 8ನೇ ರೈಲಿನ ಸೇರ್ಪಡೆಯಿಂದ ರೈಲುಗಳ ಸಂಚಾರದ ನಡುವಿನ ಸಮಯ ಮಾತ್ರವಲ್ಲದೆ, ಪ್ರಯಾಣಿಕರ ದಟ್ಟಣೆಯೂ ಇಳಿಕೆಯಾಗುವ ನಿರೀಕ್ಷೆ ಇದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು