AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೆಟ್ರೋಗೆ ಬರಲಿವೆ ಪ್ಲಾಟ್‌ಫಾರ್ಮ್ ಸ್ಕ್ರೀನ್ ಬಾಗಿಲುಗಳು

ನಮ್ಮ ಮೆಟ್ರೋ ಪಿಂಕ್ ಲೈನ್‌ನಲ್ಲಿ ಮೊದಲ ಬಾರಿಗೆ ಪ್ಲಾಟ್‌ಫಾರ್ಮ್ ಸ್ಕ್ರೀನ್ ಬಾಗಿಲುಗಳನ್ನು (PSDs) ಪರಿಚಯಿಸುತ್ತಿದೆ. ಇದು ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸಿ, ಅಹಿತಕರ ಘಟನೆಗಳನ್ನು ತಡೆಯುತ್ತದೆ. ಸುರಂಗ ಮಾರ್ಗಗಳಲ್ಲಿ ವಾಯು ವಿನಿಮಯವನ್ನು ಸುಧಾರಿಸುತ್ತದೆ. ದೆಹಲಿ, ಮುಂಬೈ ಮೆಟ್ರೋಗಳಲ್ಲಿರುವ ಈ ತಂತ್ರಜ್ಞಾನ ಬೆಂಗಳೂರಿನ ಪಿಂಕ್ ಲೈನ್, ಮೆಜೆಸ್ಟಿಕ್ ಮತ್ತು ಸೆಂಟ್ರಲ್ ಕಾಲೇಜು ನಿಲ್ದಾಣಗಳಲ್ಲಿ ಅಳವಡಿಕೆಯಾಗಲಿದೆ. ಪ್ರತಿ ನಿಲ್ದಾಣಕ್ಕೆ 9 ಕೋಟಿ ರೂ. ವೆಚ್ಚವಾಗಲಿದೆ.

ಬೆಂಗಳೂರು ಮೆಟ್ರೋಗೆ ಬರಲಿವೆ ಪ್ಲಾಟ್‌ಫಾರ್ಮ್ ಸ್ಕ್ರೀನ್ ಬಾಗಿಲುಗಳು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 02, 2025 | 11:55 AM

Share

ಬೆಂಗಳೂರು, ಡಿ.2: ಬೆಂಗಳೂರು ಮೆಟ್ರೋದಲ್ಲಿ (Namma Metro) ಹೊಸ ಯೋಜನೆಯೊಂದು ಬರಲಿದೆ. ನಮ್ಮ ಮೆಟ್ರೋ ಮೊದಲ ಬಾರಿಗೆ ಪ್ಲಾಟ್‌ಫಾರ್ಮ್ ಸ್ಕ್ರೀನ್ ಬಾಗಿಲುಗಳನ್ನು (ಪಿಎಸ್‌ಡಿ) ಪರಿಚಯಿಸಲು ಸಿದ್ಧತೆ ನಡೆಸುತ್ತಿದ್ದು, ಈ ಯೋಜನೆ ಮುಂಬರುವ ಪಿಂಕ್ ಲೈನ್‌ನಲ್ಲಿರುವ ನಿಲ್ದಾಣಗಳಿಂದ ಆರಂಭವಾಗಲಿದೆ. ಈಗಾಗಲೇ ಪೂರ್ಣ ಪ್ರಮಾಣದ ಮೂಲ ಮಾದರಿಯನ್ನು ನಿರ್ಮಾಣ ಮಾಡಲಾಗಿದೆ ಎಂದು ವರದಿಯೊಂದು ಹೇಳಿದೆ. 21.26 ಕಿ.ಮೀ. ಕಲೇನಾ ಅಗ್ರಹಾರ-ನಾಗವಾರ ಕಾರಿಡಾರ್‌ನಲ್ಲಿ ಸಿವಿಲ್ ಕಾಮಗಾರಿಗಳು ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಬಿಎಂಆರ್‌ಸಿಎಲ್ ಪಿಎಸ್‌ಡಿಗಳು ಸೇರಿದಂತೆ ಪ್ರಮುಖ ವ್ಯವಸ್ಥೆಗಳ ಹಳಿಗಳ ಜೋಡಣೆ ಕಾರ್ಯವನ್ನು ಆರಂಭಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಈ ಬಾಗಿಲುಗಳು ಎಷ್ಟು ಉಪಯುಕ್ತವಾಗಿದೆ ಎಂದರೆ, ಮೆಟ್ರೋ ಅದರ ಗಮ್ಯಸ್ಥಾನದಲ್ಲಿ ಸರಿಯಾಗಿ ಬಂದು ನಿಂತಾಗ ಮಾತ್ರ ಈ ಬಾಗಿಲು ತೆರೆಯುತ್ತದೆ. ಜತೆಗೆ ಇದು ಜನ ಮೆಟ್ರೋ ಹತ್ತುವಾಗ ಆಸ್ಮಿಕವಾಗಿ ಬಾಗಿಲು ಬೀಳುವುದನ್ನು ಕೂಡ ತಡೆಯುತ್ತದೆ. ಇತ್ತೀಚಿನ ದಿನಗಳಲ್ಲಿ ಪವರ್​​ ಹಳಿಗಳ ಮೇಲೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚಾಗಿದೆ. ಆದರೆ ಪಿಎಸ್‌ಡಿಗಳಿಂದ ಇಂಥಹ ಪ್ರಕರಣಗಳು ಕಡಿಮೆ ಆಗಲಿದೆ. ಇದರ ಜತೆಗೆ PSDಗಳು ಪ್ಲಾಟ್‌ಫಾರ್ಮ್‌ಗಳು ಸುರಂಗ ಮಾರ್ಗದಲ್ಲಿ ಉಂಟಾಗುವ ವಾಯು ವಿನಿಮಯವನ್ನು ಕಡಿಮೆ ಮಾಡುತ್ತದೆ. ದೆಹಲಿ, ಮುಂಬೈ ಮತ್ತು ಚೆನ್ನೈನಲ್ಲಿರುವ ಮೆಟ್ರೋಗಳಲ್ಲಿ ಈಗಾಗಲೇ, ಈ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಆದರೆ ಬೆಂಗಳೂರಿನಲ್ಲಿರುವ 83 ನಿಲ್ದಾಣಗಳಲ್ಲಿ ಯಾವುದಕ್ಕೂ ಇದನ್ನು ಅಳವಡಿಸಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: “ನಾನು ಶಿಮ್ಲಾದಲ್ಲಿ ಇಲ್ಲ, ಕೋರಮಂಗಲದಲ್ಲಿ ಇದ್ದೇನೆ”: ಮತ್ತೆ ವೈರಲ್​​​​​ ಆಯಿತು ಬೆಂಗಳೂರಿನ ಹವಾಮಾನ

ಇನ್ನು ಈಗಾಗಲೇ ಮಾದರಿ ವಿದ್ಯುತ್ ಸ್ಥಾವರವನ್ನು ಹೊಂದಿರುವ ಎಂಜಿ ರಸ್ತೆಯ ಮೆಟ್ರೋ ನಿಲ್ದಾಣದಿಂದ ಈ ಯೋಜನೆಯನ್ನು ಪ್ರಾರಂಭ ಮಾಡುವ ಸಾಧ್ಯತೆಗಳು ಇದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಯೋಜನೆಗೆ ಅನುಮೋದನೆ ಸಿಕ್ಕ ನಂತರ ಆರು ತಿಂಗಳ ಅವಧಿಯಲ್ಲಿ ಪಿಂಕ್ ಲೈನ್‌ನಲ್ಲಿರುವ ಎಲ್ಲಾ 12 ಸುರಂಗ ಮಾರ್ಗಗಳಿಗೂ ಪಿಎಸ್‌ಡಿಗಳನ್ನು ಅಳವಡಿಸಲಾಗುವುದು ಎಂದು ಹಿರಿಯ ಬಿಎಂಆರ್‌ಸಿಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರತಿಯೊಂದು ದ್ವಾರವು ಸುಮಾರು 2.15 ಮೀಟರ್ ಎತ್ತರವಿದ್ದು, ಪ್ಲಾಟ್‌ಫಾರ್ಮ್ ಗೇಟ್‌ಗಳು 1.4 ಮೀಟರ್ ಎತ್ತರವಿದೆ. ಹಾಗೂ 128 ಮೀಟರ್ ಪ್ಲಾಟ್‌ಫಾರ್ಮ್ ಅನ್ನು ವ್ಯಾಪಿಸಿರುತ್ತವೆ. ಪ್ರತಿ ನಿಲ್ದಾಣದ ವೆಚ್ಚ 9 ಕೋಟಿ ರೂ. ಎಂದು ವರದಿಯಲ್ಲಿ ಅಂದಾಜಿಸಲಾಗಿದೆ. ಇದು ಜೂನ್ 2024ರಲ್ಲಿ ಆಲ್ಸ್ಟೋಮ್ ಟ್ರಾನ್ಸ್‌ಪೋರ್ಟ್‌ ಜತೆಗೆ ಮಾಡಿಕೊಂಡ ದೊಡ್ಡ ಒಪ್ಪಂದದ ಭಾಗವಾಗಿದೆ. ಇನ್ನು ಈ ಯೋಜನೆಯನ್ನು ಪಿಂಕ್ ಲೈನ್‌ ಮಾತ್ರವಲ್ಲದೆ, ಪರ್ಪಲ್ ಲೈನ್‌ನಲ್ಲಿರುವ ಮೆಜೆಸ್ಟಿಕ್ ಮತ್ತು ಸೆಂಟ್ರಲ್ ಕಾಲೇಜು ನಿಲ್ದಾಣಗಳಲ್ಲಿ ಪಿಎಸ್‌ಡಿ ಅಳವಡಿಸಲಾಗುವುದು ಎಂದು ಹೇಳಲಾಗಿದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು