AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಪೆ ನಂದಿನಿ ಪಶು ಆಹಾರದಿಂದ ಹಸುಗಳ ಸಾವಾಯ್ತಾ? ಕಳಪೆ ಗುಣಮಟ್ಟದ ಬಗ್ಗೆ ಗಂಭೀರ ಆರೋಪ

ಬೆಂಗಳೂರಿನ ಯಲಹಂಕ ಸಮೀಪದ ರಾಜಾನುಕುಂಟೆ ಪಶು ಆಹಾರ ಘಟಕದಲ್ಲಿ ತಯಾರಾಗುತ್ತಿರುವ ನಂದಿನಿ ಪಶು ಆಹಾರದ ಗುಣಮಟ್ಟದ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ಕಳಪೆ ಗುಣಮಟ್ಟದ ಕಚ್ಚಾ ವಸ್ತು ಬಳಸಿ ಆಹಾರ ತಯಾರಿಸಲಾಗಿದೆ ಎಂಬ ಆರೋಪದ ಬೆನ್ನಲ್ಲೇ, ಆಹಾರ ಸೇವಿಸಿದ ಬಳಿಕ ಪಶುಗಳ ಆರೋಗ್ಯ ಹದಗೆಟ್ಟಿದ್ದು, ಹಾಲಿನ ಇಳುವರಿ ಕುಸಿದಿದೆ ಎಂದು ರೈತರು ದೂರಿದ್ದಾರೆ. ಕಳೆದ ಎರಡು ತಿಂಗಳಲ್ಲಿ 1,600ಕ್ಕೂ ಹೆಚ್ಚು ಹಸುಗಳು ಮೃತಪಟ್ಟಿವೆ ಎಂಬ ಆರೋಪವೂ ಕೇಳಿಬಂದಿದೆ.

ಕಳಪೆ ನಂದಿನಿ ಪಶು ಆಹಾರದಿಂದ ಹಸುಗಳ ಸಾವಾಯ್ತಾ? ಕಳಪೆ ಗುಣಮಟ್ಟದ ಬಗ್ಗೆ ಗಂಭೀರ ಆರೋಪ
ಸಾಂದರ್ಭಿಕ ಚಿತ್ರImage Credit source: TV9 Network
ಶಿವಪ್ರಸಾದ್​ ಬಿ.
| Edited By: |

Updated on: Aug 19, 2026 | 7:53 AM

Share

ಮುಖ್ಯಾಂಶಗಳು

  • ನಂದಿನಿ ಪಶು ಆಹಾರದ ಗುಣಮಟ್ಟಕ್ಕೆ ಪ್ರಶ್ನೆ
  • 1,600 ಹಸುಗಳ ಸಾವಿನ ಗಂಭೀರ ಆರೋಪ
  • ಕಚ್ಚಾ ವಸ್ತು ಖರೀದಿಯಲ್ಲಿ ಅಕ್ರಮದ ಅನುಮಾನ

ಬೆಂಗಳೂರು, ಆಗಸ್ಟ್ 19: ಹೈನುಗಾರಿಕೆಯನ್ನೇ ನಂಬಿ ಜೀವನ ನಡೆಸುತ್ತಿರುವ ರೈತರಿಗೆ ನಂದಿನಿ ಪಶು ಆಹಾರದ ಗುಣಮಟ್ಟದ ಕುರಿತ ಆರೋಪಗಳು ಆತಂಕ ಮೂಡಿಸಿವೆ. ಬೆಂಗಳೂರಿನ (Bengaluru) ಯಲಹಂಕ ಸಮೀಪದ ಗ್ರಾಮವೊಂದರಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಹಾಗೂ ಬಡಕಲಾಗಿರುವ ಹಸುಗಳನ್ನು ಕಂಡು ರೈತರು ಕಂಗಾಲಾಗಿದ್ದಾರೆ. ರಾಜಾನುಕುಂಟೆಯ ಪಶು ಆಹಾರ ಘಟಕದಲ್ಲಿ ತಯಾರಿಸಲಾದ ಆಹಾರದ ಗುಣಮಟ್ಟದ ಬಗ್ಗೆ ರೈತರು ಪ್ರಶ್ನೆ ಎತ್ತಿದ್ದಾರೆ.

ಕಳಪೆ ಆಹಾರದಿಂದ ಪಶುಗಳಿಗೆ ಅನಾರೋಗ್ಯ?

ರಾಜಾನುಕುಂಟೆ ಪಶು ಆಹಾರ ಘಟಕದಲ್ಲಿ ಕಳಪೆ ಗುಣಮಟ್ಟದ ಕಚ್ಚಾ ವಸ್ತುಗಳನ್ನು ಬಳಸಿ ಪಶು ಆಹಾರ ತಯಾರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇಂತಹ ಆಹಾರವನ್ನು ರೈತರಿಗೆ ಪೂರೈಕೆ ಮಾಡಲಾಗಿದ್ದು, ಅದನ್ನು ಸೇವಿಸಿದ ಬಳಿಕ ಹಲವು ಪಶುಗಳು ಅನಾರೋಗ್ಯಕ್ಕೆ ಒಳಗಾಗಿವೆ ಎಂದು ರೈತರು ಆರೋಪಿಸಿದ್ದಾರೆ.

ಹಾಲಿನ ಇಳುವರಿ ಗಣನೀಯ ಕುಸಿತ

ಕೆಲವು ಹಸುಗಳಲ್ಲಿ ಹಾಲಿನ ಇಳುವರಿ ಗಣನೀಯವಾಗಿ ಕುಸಿದಿದೆ. ಇನ್ನೂ ಕೆಲವು ಪಶುಗಳು ಗರ್ಭಧರಿಸದೆ ಆರೋಗ್ಯ ಸಮಸ್ಯೆ ಎದುರಿಸುತ್ತಿವೆ ಎನ್ನಲಾಗಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ 1,600 ಹಸುಗಳು ಮೃತಪಟ್ಟಿವೆ ಎಂಬ ಆರೋಪವೂ ಕೇಳಿಬಂದಿದೆ. ಆದರೆ, ಈ ಸಾವಿಗೆ ಪಶು ಆಹಾರವೇ ನೇರ ಕಾರಣ ಎಂಬುದು ಅಧಿಕೃತವಾಗಿ ದೃಢಪಟ್ಟಿಲ್ಲ.

86 ಸಾವಿರ ಮೆಟ್ರಿಕ್ ಟನ್ ಆಹಾರ ಕಳಪೆ?

ಪಶು ಆಹಾರ ತಯಾರಿಕೆಗೆ ಬಳಸುವ ಕಚ್ಚಾ ವಸ್ತುಗಳ ಖರೀದಿ ಮತ್ತು ಗುಣಮಟ್ಟದ ಪರಿಶೀಲನೆಯಲ್ಲಿ ಅಕ್ರಮ ನಡೆದಿರುವ ಅನುಮಾನವನ್ನು ರೈತರು ವ್ಯಕ್ತಪಡಿಸಿದ್ದಾರೆ. ಸುಮಾರು 86 ಸಾವಿರ ಮೆಟ್ರಿಕ್ ಟನ್ ಪಶು ಆಹಾರ ಕಳಪೆ ಗುಣಮಟ್ಟದ್ದಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಆಹಾರವನ್ನು ರೈತರು ಸ್ವೀಕರಿಸದೆ ಘಟಕಕ್ಕೆ ವಾಪಸ್ ಕಳುಹಿಸುತ್ತಿದ್ದಾರೆ ಎಂಬುದು ತಿಳಿದುಬಂದಿದೆ.

ಪಶು ಆಹಾರ ತಯಾರಿಕೆಗೆ ಬಳಸುವ ಮೊಲಾಸಸ್‌ (ಕಾಕಂಬಿ) ಸೇರಿದಂತೆ ವಿವಿಧ ಕಚ್ಚಾ ವಸ್ತುಗಳ ಖರೀದಿಯಲ್ಲೂ ಅಕ್ರಮ ನಡೆದಿರುವ ಆರೋಪವಿದೆ. ಗುಣಮಟ್ಟ ಕಡಿಮೆ ಇರುವ TRS ಹೊಂದಿದ್ದ ಕಾಕಂಬಿಯನ್ನು ಖರೀದಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ರೈತರಿಗೆ ನಂದಿನಿ ಪಶು ಆಹಾರ ಖರೀದಿಸುವ ಒತ್ತಡ?

ಬಮೂಲ್ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ಸುಮಾರು 14,500 ಮೆಟ್ರಿಕ್ ಟನ್ ಪಶು ಆಹಾರ ಖರೀದಿಸಲಾಗುತ್ತಿದೆ ಎನ್ನಲಾಗಿದೆ. ಹಾಲಿನ ಗುಣಮಟ್ಟದ ಕಾರಣ ನೀಡಿ ಕೆಲವು ಸೊಸೈಟಿಗಳು ಹಾಲು ಸ್ವೀಕರಿಸುವುದಿಲ್ಲ ಎಂಬ ಆರೋಪವೂ ರೈತರಿಂದ ಕೇಳಿಬಂದಿದೆ. ಇದರ ನಡುವೆ ರೈತರು ನಂದಿನಿ ಪಶು ಆಹಾರ ಖರೀದಿಸುವಂತೆ ಒತ್ತಡ ಹೇರಲಾಗುತ್ತಿದೆ ಎಂಬ ಆರೋಪವೂ ಇದೆ. ಆಹಾರದ ಗುಣಮಟ್ಟದ ಬಗ್ಗೆ ಅನುಮಾನವಿದ್ದರೂ ರೈತರು ಅದನ್ನು ಖರೀದಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ ಎಂದು ದೂರಲಾಗಿದೆ.

ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಆತಂಕ

ಕಳಪೆ ಗುಣಮಟ್ಟದ ಪಶು ಆಹಾರದಿಂದ ಪಶುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿದೆ ಎಂಬ ಆರೋಪ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಆನೇಕಲ್, ನೆಲಮಂಗಲ, ರಾಮನಗರ ಮತ್ತು ಚನ್ನಪಟ್ಟಣ ಭಾಗದ ರೈತರಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ: ಬೆಂಗಳೂರು ಕೂಗಳತೆ ದೂರದಲ್ಲೇ ನಕಲಿ ಔಷಧ ಜಾಲ! ನಕಲಿ ಕ್ಯಾನ್ಸರ್ ಔಷಧಿ ಮಾರುತ್ತಿದ್ದ ಬೃಹತ್ ಜಾಲ ಪತ್ತೆ, ಕಿಂಗ್​ಪಿನ್​ಗೆ ಬಲೆ

ಪಶು ಆಹಾರವನ್ನು ರೈತರು ಘಟಕಕ್ಕೆ ವಾಪಸ್ ಕಳುಹಿಸುತ್ತಿರುವ ಪ್ರಕರಣಗಳೂ ವರದಿಯಾಗಿವೆ. ಈ ಆರೋಪಗಳ ಹಿನ್ನೆಲೆಯಲ್ಲಿ ರಾಜಾನುಕುಂಟೆ ಪಶು ಆಹಾರ ಘಟಕದಲ್ಲಿ ಕಚ್ಚಾ ವಸ್ತುಗಳ ಖರೀದಿ, ಗುಣಮಟ್ಟ ಪರೀಕ್ಷೆ, ಉತ್ಪಾದನೆ ಮತ್ತು ಪೂರೈಕೆ ಪ್ರಕ್ರಿಯೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಇದೀಗ, ಪಶು ಆಹಾರದ ಗುಣಮಟ್ಟದ ಕುರಿತು ಎದ್ದಿರುವ ಪ್ರಶ್ನೆಗಳಿಗೆ KMF ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ