AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ನಂದಿನಿ ಹಾಲು ದರ 3 ರೂಪಾಯಿ ಏರಿಕೆ; ಸರ್ಕಾರದ ನಿರ್ಧಾರಕ್ಕೆ ಜನರ ಆಕ್ರೋಶ

ಕರೆಂಟ್ ಫ್ರೀ, ಬಸ್ ಫ್ರೀ ಎಂದು ಯೋಚಿಸುತ್ತಿರುವ ಜನರಿಗೆ ಸರ್ಕಾರ ದೊಡ್ಡ ಶಾಕ್ ಕೊಟ್ಟಿದೆ. ಹೌದು ನಂದಿನಿ ಹಾಲು ದರ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆಯಾಗಿದೆ. ಈ ಹಿನ್ನಲೆ ರಾಜ್ಯದ ಹಲವು ಕಡೆ ಆಕ್ರೋಶ ವ್ಯಕ್ತವಾಗುತ್ತಿದೆ.

ರಾಚಪ್ಪಾಜಿ ನಾಯ್ಕ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 22, 2023 | 11:12 AM

Share

ಬೆಂಗಳೂರು, ಜು.22: ಕರೆಂಟ್ ಫ್ರೀ, ಬಸ್ ಫ್ರೀ ಎಂದು ಯೋಚಿಸುತ್ತಿರುವ ಜನರಿಗೆ ಸರ್ಕಾರ ದೊಡ್ಡ ಶಾಕ್ ಕೊಟ್ಟಿದೆ. ಹೌದು ನಂದಿನಿ ಹಾಲು ದರ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆಯಾಗಿದೆ. ಹೀಗ ಹೆಚ್ಚುವರಿ ಹಣವನ್ನ ರೈತರಿಗೆ ವರ್ಗಾವಣೆ ಮಾಡಲಿ ಮಂಡಳಿ ನಿರ್ಧಾರ ಮಾಡಿದೆ. ಆರ್ಥಿಕ ನಷ್ಟದ ಕಾರಣ ಹೇಳಿ ಕೆಎಂಎಫ್(KMF) ಹಾಲಿನ ದರ‌ವನ್ನ 5 ರೂಪಾಯಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿತ್ತು. ಆದ್ರೆ, ಸರ್ಕಾರ 3 ರೂಪಾಯಿ ಹೆಚ್ಚಳಕ್ಕೆ ಅನುಮತಿ ನೀಡಿದೆ. ಮತ್ತು ಆಗಸ್ಟ್‌ 1 ರಿಂದಲೇ ಹೊಸ ದರ ಜಾರಿಯಾಗಲಿದೆ.

ಎಲ್ಲಾ ಮಾದರಿಯ ಹಾಲಿಗೂ 3 ರೂ ದರ ಏರಿಕೆ ಆಗಲಿದೆ

ಇನ್ನು ಸದ್ಯ ಕೆಎಂಎಫ್‌ ರೈತರಿಂದ 31.14 ರೂ. ಜತೆಗೆ ಸರ್ಕಾರದಿಂದ ಐದು ಪ್ರೋತ್ಸಾಹ ಧನ ಸೇರಿ 36 ರೂಪಾಯಿಗೆ ಖರೀದಿ ಮಾಡುತ್ತಿದ್ದು, ಪ್ರತಿ ಲೀಟರ್‌ಗೆ ಗ್ರಾಹಕರಿಗೆ 39 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಅದರಂತೆ ಇದೀಗ ಎಲ್ಲಾ ಮಾದರಿಯ ಹಾಲಿಗೂ 3 ರೂ ದರ ಏರಿಕೆ ಆಗಲಿದ್ದು, ರೈತರಿಂದ ಖರೀದಿ ಮಾಡುವ ದರವೂ ಹೆಚ್ಚಳವಾಗಲಿದೆ.

ಇದನ್ನೂ ಓದಿ:IIT-M’s 3D: 30 ಸೆಕೆಂಡುಗಳಲ್ಲಿ ಹಾಲಿನ ಕಲಬೆರಕೆಯನ್ನು ಪತ್ತೆ ಮಾಡುತ್ತೆ ಈ ಪೋರ್ಟಬಲ್ ಸಾಧನ!

ಈಗಿರುವ ದರ ಹಾಗೂ ಅಗಸ್ಟ್ 1 ರ ಬಳಿಕ ಜಾರಿಯಾಗಲಿರೋ ರೇಟ್

ಲೀ. ಟೋನ್ಡ್ ಹಾಲು – 39ರೂ                                        42ರೂ.

ಲೀ. ಹೋಮೋಜಿನೈಸ್ಡ್ ಟೋನ್ಡ್ ಹಾಲು 40ರೂ         43ರೂ.

ಲೀ. ಸ್ಪೆಷಲ್ ಹಾಲು 45 ರೂ                                          48ರೂ

ಲೀ. ಶುಭಂ ಹಾಲು 45ರೂ                                             48ರೂ

ಲೀ. ಸಮೃದ್ದಿ ಹಾಲು 50ರೂ                                         53ರೂ

ಲೀ. ಸಂತೃಪ್ತಿ ಹಾಲು 52ರೂ                                         55 ರೂ

ಲೀ. ಡಬ್ಬಲ್ ಟೋನ್ಡ್ ಹಾಲು 38 ರೂ                         41 ರೂ

ಲೀ. ಮೊಸರು ಪ್ರತಿ ಲೀ 47 ರೂ                                     51ರೂ

ಹಾಲಿನ ದರ ಏರಿಕೆ ಹಿನ್ನಲೆ ಆಕ್ರೋಶ ಹೊರ ಹಾಕಿದ ಗ್ರಾಹಕರು

ಹಾಲಿನ ದರ 3 ರೂಪಾಯಿ ಏರಿಕೆ ಹಿನ್ನಲೆ ಗ್ರಾಹಕರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರ ಹೀಗೆ ಬೆಲೆ ಜಾಸ್ತಿ ಮಾಡ್ತಿದ್ರೆ ಹೇಗೆ?, ಒಂದು ಕಡೆ ಫ್ರೀ ಅಂತಾ ಅನೌನ್ಸ್ ಮಾಡ್ತಾರೆ. ಕೆಲವರಿಗೆ ಫ್ರೀ ಫ್ರೀ ಅಂತಾ ಕೊಡ್ತಾರೆ ಮತ್ತೊಂದು ಕಡೆ ಎಲ್ಲಾ ವಸ್ತು ಬೆಲೆ ಜಾಸ್ತಿ ಮಾಡ್ತಾರೆ. ಇವರಿಗೆ ಫ್ರೀ ಕೊಡಿ ಅಂತಾ ಹೇಳಿದವರ್ಯಾರು?, ಮಧ್ಯಮ ವರ್ಗದ ಜನ ಬದುಕುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ಇನ್ನು ಹುಬ್ಬಳ್ಳಿಯಲ್ಲೂ ಹಾಲಿನ ಬೆಲೆ ಹೆಚ್ಚಳ ನಿರ್ಧಾರಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಬೇಡಿ. ಬೆಳಗಾದ್ರೆ ಹಾಲು ಬೇಕು. ರೇಟ್ ಹೆಚ್ಚಾದ್ರೆ ಏನ ಮಾಡೋಣ. ನೀವು ಮದ್ಯದ ಬೆಲೆ ಇನ್ನು ಹೆಚ್ಚಳ ಮಾಡಿ‌. ಕೊನೆಗೆ ಕುಡಿಯೋದನ್ನ ಆದ್ರೂ ಬಿಡ್ತಾರೆ. ಆದ್ರೆ, ಹಾಲಿನ ಬೆಲೆ ಮಾತ್ರ ಹೆಚ್ಚಳ ಮಾಡಬೇಡಿ ಎಂದು ಜನರು ಮನದ ನೋವುನ್ನ ಹೊರ ಹಾಕಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:35 am, Sat, 22 July 23

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು