AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ನಂದಿನಿ ಹಾಲು ದರ 3 ರೂಪಾಯಿ ಏರಿಕೆ; ಸರ್ಕಾರದ ನಿರ್ಧಾರಕ್ಕೆ ಜನರ ಆಕ್ರೋಶ

ಕರೆಂಟ್ ಫ್ರೀ, ಬಸ್ ಫ್ರೀ ಎಂದು ಯೋಚಿಸುತ್ತಿರುವ ಜನರಿಗೆ ಸರ್ಕಾರ ದೊಡ್ಡ ಶಾಕ್ ಕೊಟ್ಟಿದೆ. ಹೌದು ನಂದಿನಿ ಹಾಲು ದರ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆಯಾಗಿದೆ. ಈ ಹಿನ್ನಲೆ ರಾಜ್ಯದ ಹಲವು ಕಡೆ ಆಕ್ರೋಶ ವ್ಯಕ್ತವಾಗುತ್ತಿದೆ.

ರಾಚಪ್ಪಾಜಿ ನಾಯ್ಕ್
| Edited By: |

Updated on:Jul 22, 2023 | 11:12 AM

Share

ಬೆಂಗಳೂರು, ಜು.22: ಕರೆಂಟ್ ಫ್ರೀ, ಬಸ್ ಫ್ರೀ ಎಂದು ಯೋಚಿಸುತ್ತಿರುವ ಜನರಿಗೆ ಸರ್ಕಾರ ದೊಡ್ಡ ಶಾಕ್ ಕೊಟ್ಟಿದೆ. ಹೌದು ನಂದಿನಿ ಹಾಲು ದರ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆಯಾಗಿದೆ. ಹೀಗ ಹೆಚ್ಚುವರಿ ಹಣವನ್ನ ರೈತರಿಗೆ ವರ್ಗಾವಣೆ ಮಾಡಲಿ ಮಂಡಳಿ ನಿರ್ಧಾರ ಮಾಡಿದೆ. ಆರ್ಥಿಕ ನಷ್ಟದ ಕಾರಣ ಹೇಳಿ ಕೆಎಂಎಫ್(KMF) ಹಾಲಿನ ದರ‌ವನ್ನ 5 ರೂಪಾಯಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿತ್ತು. ಆದ್ರೆ, ಸರ್ಕಾರ 3 ರೂಪಾಯಿ ಹೆಚ್ಚಳಕ್ಕೆ ಅನುಮತಿ ನೀಡಿದೆ. ಮತ್ತು ಆಗಸ್ಟ್‌ 1 ರಿಂದಲೇ ಹೊಸ ದರ ಜಾರಿಯಾಗಲಿದೆ.

ಎಲ್ಲಾ ಮಾದರಿಯ ಹಾಲಿಗೂ 3 ರೂ ದರ ಏರಿಕೆ ಆಗಲಿದೆ

ಇನ್ನು ಸದ್ಯ ಕೆಎಂಎಫ್‌ ರೈತರಿಂದ 31.14 ರೂ. ಜತೆಗೆ ಸರ್ಕಾರದಿಂದ ಐದು ಪ್ರೋತ್ಸಾಹ ಧನ ಸೇರಿ 36 ರೂಪಾಯಿಗೆ ಖರೀದಿ ಮಾಡುತ್ತಿದ್ದು, ಪ್ರತಿ ಲೀಟರ್‌ಗೆ ಗ್ರಾಹಕರಿಗೆ 39 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಅದರಂತೆ ಇದೀಗ ಎಲ್ಲಾ ಮಾದರಿಯ ಹಾಲಿಗೂ 3 ರೂ ದರ ಏರಿಕೆ ಆಗಲಿದ್ದು, ರೈತರಿಂದ ಖರೀದಿ ಮಾಡುವ ದರವೂ ಹೆಚ್ಚಳವಾಗಲಿದೆ.

ಇದನ್ನೂ ಓದಿ:IIT-M’s 3D: 30 ಸೆಕೆಂಡುಗಳಲ್ಲಿ ಹಾಲಿನ ಕಲಬೆರಕೆಯನ್ನು ಪತ್ತೆ ಮಾಡುತ್ತೆ ಈ ಪೋರ್ಟಬಲ್ ಸಾಧನ!

ಈಗಿರುವ ದರ ಹಾಗೂ ಅಗಸ್ಟ್ 1 ರ ಬಳಿಕ ಜಾರಿಯಾಗಲಿರೋ ರೇಟ್

ಲೀ. ಟೋನ್ಡ್ ಹಾಲು – 39ರೂ                                        42ರೂ.

ಲೀ. ಹೋಮೋಜಿನೈಸ್ಡ್ ಟೋನ್ಡ್ ಹಾಲು 40ರೂ         43ರೂ.

ಲೀ. ಸ್ಪೆಷಲ್ ಹಾಲು 45 ರೂ                                          48ರೂ

ಲೀ. ಶುಭಂ ಹಾಲು 45ರೂ                                             48ರೂ

ಲೀ. ಸಮೃದ್ದಿ ಹಾಲು 50ರೂ                                         53ರೂ

ಲೀ. ಸಂತೃಪ್ತಿ ಹಾಲು 52ರೂ                                         55 ರೂ

ಲೀ. ಡಬ್ಬಲ್ ಟೋನ್ಡ್ ಹಾಲು 38 ರೂ                         41 ರೂ

ಲೀ. ಮೊಸರು ಪ್ರತಿ ಲೀ 47 ರೂ                                     51ರೂ

ಹಾಲಿನ ದರ ಏರಿಕೆ ಹಿನ್ನಲೆ ಆಕ್ರೋಶ ಹೊರ ಹಾಕಿದ ಗ್ರಾಹಕರು

ಹಾಲಿನ ದರ 3 ರೂಪಾಯಿ ಏರಿಕೆ ಹಿನ್ನಲೆ ಗ್ರಾಹಕರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರ ಹೀಗೆ ಬೆಲೆ ಜಾಸ್ತಿ ಮಾಡ್ತಿದ್ರೆ ಹೇಗೆ?, ಒಂದು ಕಡೆ ಫ್ರೀ ಅಂತಾ ಅನೌನ್ಸ್ ಮಾಡ್ತಾರೆ. ಕೆಲವರಿಗೆ ಫ್ರೀ ಫ್ರೀ ಅಂತಾ ಕೊಡ್ತಾರೆ ಮತ್ತೊಂದು ಕಡೆ ಎಲ್ಲಾ ವಸ್ತು ಬೆಲೆ ಜಾಸ್ತಿ ಮಾಡ್ತಾರೆ. ಇವರಿಗೆ ಫ್ರೀ ಕೊಡಿ ಅಂತಾ ಹೇಳಿದವರ್ಯಾರು?, ಮಧ್ಯಮ ವರ್ಗದ ಜನ ಬದುಕುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ಇನ್ನು ಹುಬ್ಬಳ್ಳಿಯಲ್ಲೂ ಹಾಲಿನ ಬೆಲೆ ಹೆಚ್ಚಳ ನಿರ್ಧಾರಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಬೇಡಿ. ಬೆಳಗಾದ್ರೆ ಹಾಲು ಬೇಕು. ರೇಟ್ ಹೆಚ್ಚಾದ್ರೆ ಏನ ಮಾಡೋಣ. ನೀವು ಮದ್ಯದ ಬೆಲೆ ಇನ್ನು ಹೆಚ್ಚಳ ಮಾಡಿ‌. ಕೊನೆಗೆ ಕುಡಿಯೋದನ್ನ ಆದ್ರೂ ಬಿಡ್ತಾರೆ. ಆದ್ರೆ, ಹಾಲಿನ ಬೆಲೆ ಮಾತ್ರ ಹೆಚ್ಚಳ ಮಾಡಬೇಡಿ ಎಂದು ಜನರು ಮನದ ನೋವುನ್ನ ಹೊರ ಹಾಕಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:35 am, Sat, 22 July 23

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್