AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC and KSRTC: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ ಹಿನ್ನೆಲೆ 2 ಗಂಟೆಗಳ ಕಾಲ ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್​ ಸಂಚಾರ ಸ್ಥಗಿತ

ಪ್ರಧಾನಿ ನರೇಂದ್ರ ಮೋದಿ(Narendra Modi) ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು(ಶುಕ್ರವಾರ) 2 ಗಂಟೆಗಳ ಕಾಲ ಬಿಎಂಟಿಸಿ(BMTC), ಕೆಎಸ್​ಆರ್​ಟಿಸಿ(KSRTC) ಬಸ್​ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ.

BMTC and KSRTC: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ ಹಿನ್ನೆಲೆ 2 ಗಂಟೆಗಳ ಕಾಲ ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್​ ಸಂಚಾರ ಸ್ಥಗಿತ
BMTC and KSRTC
TV9 Web
| Updated By: ನಯನಾ ರಾಜೀವ್|

Updated on: Nov 11, 2022 | 10:06 AM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು(ಶುಕ್ರವಾರ) 2 ಗಂಟೆಗಳ ಕಾಲ ಬಿಎಂಟಿಸಿ(BMTC), ಕೆಎಸ್​ಆರ್​ಟಿಸಿ(KSRTC) ಬಸ್​ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ. ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯುತ್ತಿರುವ ಹಿನ್ನಲೆ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೂ ಬಸ್ ಸಂಚಾರ ಸ್ಥಗಿತ ಸ್ಥಗಿತಗೊಳಿಸಲಾಗುತ್ತಿದೆ.

ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬರುವ ವಾಹನಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗುತ್ತಿದ್ದು, ಮೆಜೆಸ್ಟಿಕ್​ಗೆ ಬರುವ ಬರುವ ಪ್ರಯಾಣಿಕರನ್ನು ಹತ್ತಿರದ ಬಸ್ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ.

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿನ್ನಲೆ 2 ಗಂಟೆಗಳ ಕಾಲ ಮೆಜೆಸ್ಟಿಕ್​ಗೆ ಬರುವ ಬಸ್ ಸಂಚಾರ ಸ್ಥಗಿತ ಮಾಡುವಂತೆ ಪೊಲೀಸರಿಂದ ಮನವಿ ಮಾಡಲಾಗಿದೆ.

ಉಪ್ಪಾರಪೇಟೆ ಪೊಲೀಸ್ ಠಾಣೆಯಿಂದ ಸಾರಿಗೆ ನಿಗಮಕ್ಕೆ ಮನವಿ ಮಾಡಲಾಗಿದೆ. ಹೀಗಾಗಿ ಪ್ರಯಾಣಿಕರು ಸಹಕರಿಸುವಂತೆ ಕೋರಲಾಗಿದೆ.

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ (Traffic Problem) ಎದುರಾಗಬಹುದು.

ಬೆಳಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಬದಲಿ ಮಾರ್ಗದ ಮೂಲಕ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಮೈಸೂರು ಬ್ಯಾಂಕ್​ ವೃತ್ತ-ಅರಮನೆ ರಸ್ತೆಯಲ್ಲಿ ಸಂಚಾರ ನಿಷೇಧ ಹಿನ್ನೆಲೆ ಕೆಂಪೇಗೌಡ ರಸ್ತೆಯ ಮೂಲಕ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ಸಂಚಾರ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಇಂದು 11 ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಯಾವೆಲ್ಲಾ ರೈಲುಗಳ ಸಂಚಾರದಲ್ಲಿ ವ್ಯತ್ಯಯ:

ಕಣ್ಣೂರು-ಕೆಎಸ್​ಆರ್​ ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಅರಸೀಕೆರೆ-ಕೆಎಸ್​ಆರ್​ ಸ್ಪೆಷಲ್ ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಕೋಲಾರ-ಯಶವಂತಪುರ​​ ಡೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಮೈಸೂರು-ನಾಯಂಡಹಳ್ಳಿ​​ ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಹಿಂದೂಪುರ-ಯಶವಂತಪುರ ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಮಾರಿಕುಪ್ಪಂ-ಕಂಟೋನ್ಮೆಂಟ್​ ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಕೆಎಸ್​ಆರ್-ತುಮಕೂರು ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಹಾಸನ-ಕೆಎಸ್​ಆರ್​ ಡೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಕೆಎಸ್​ಆರ್​-ವೈಟ್​ಫೀಲ್ಡ್​ ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಮೈಸೂರು-ಕೆಎಸ್​ಆರ್​ ಮೈಸೂರು ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಕುಪ್ಪಂ-ಬೆಂಗಳೂರು ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?