Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡಮಾನ್‌ ಜೈಲು ನೋಡಿದ್ರೆ ರಾಹುಲ್‌ ಗಾಂಧಿ ಚಡ್ಡಿ ಪ್ಯಾಂಟ್‌ ಒದ್ದೆ ಆಗುತ್ತೆ, ಸಾವರ್ಕರ್ ಪಾದದ ಧೂಳಿಗೂ ರಾಹುಲ್‌ ಸಮವಿಲ್ಲ – ಸಿ.ಟಿ.ರವಿ

CT Ravi : ಕಾಂಗ್ರೆಸ್ ಪಕ್ಷ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಭ್ರಷ್ಟಾಚಾರ ಮುಚ್ಚಿಹಾಕಲು ಬೀದಿಗಿಳಿದು ನಾಟಕ ಮಾಡುತ್ತಿದ್ದಾರೆ. ಪ್ರಕರಣದ ಸಮಗ್ರ ತನಿಖೆ ಆಗಬೇಕು, ಮೂಲ ಷೇರುದಾರರಿಗೆ ಆದಾಯ ಹಂಚಿಕೆ ಆಗಬೇಕು ಎಂದು ರವಿ ಆಗ್ರಹಿಸಿದ್ದಾರೆ.

ಅಂಡಮಾನ್‌ ಜೈಲು ನೋಡಿದ್ರೆ ರಾಹುಲ್‌ ಗಾಂಧಿ ಚಡ್ಡಿ ಪ್ಯಾಂಟ್‌ ಒದ್ದೆ ಆಗುತ್ತೆ, ಸಾವರ್ಕರ್ ಪಾದದ ಧೂಳಿಗೂ ರಾಹುಲ್‌ ಸಮವಿಲ್ಲ - ಸಿ.ಟಿ.ರವಿ
ಸಿ ಟಿ ರವಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 13, 2022 | 4:08 PM

ಬೆಂಗಳೂರು: ನ್ಯಾಷನಲ್ ಹೆರಾಲ್ಡ್​ ಪ್ರಕರಣದಲ್ಲಿ (National Herald) ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಜಾರಿ ನಿರ್ದೇಶನಾಲಯ ಬುಲಾವ್ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್​ ಪಕ್ಷ ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದೆ (Congress Protest). ಆದರೆ ಆಡಳಿತಾರೂಢ ಬಿಜೆಪಿ ನಾಯಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಆ ಪಕ್ಷದ ನಡೆ ವಿರುದ್ಧ ಸಿಡಿದೆದ್ದಿದ್ದಾರೆ. ಇ.ಡಿ. ನೋಟಿಸ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ಸುದ್ದಿಗೋಷ್ಠಿ ನಡೆಸಿ, ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್​ನವರು ಸಂವಿಧಾನಕ್ಕಿಂತ ಮೇಲಿನವರಾ? ಕಾಂಗ್ರೆಸ್​ನವರಿಗೆ ಭಯ ಯಾಕೆ? ಹಗರಣಗಳ ಸರದಾರ ಕಾಂಗ್ರೆಸ್ ಪಾರ್ಟಿ. ಕಾಲಿನಿಂದ ತಲೆವರೆಗೂ ಹಗರಣ ಹೊದ್ದುಕೊಂಡಿದೆ. ಆಡು ಮುಟ್ಟದ ಸೊಪ್ಪಿಲ್ಲ, ಹಗರಣ ಮಾಡದ ಕಾಂಗ್ರೆಸ್​ನವರಿಲ್ಲ. ಭ್ರಷ್ಟಾಚಾರ ನಡೆಸಿದವರಿಗೆ ಭ್ರಷ್ಟರೇ ಬೆಂಬಲ ನೀಡ್ತಿದ್ದಾರೆ. ಗಾಂಧಿ ಕುಟುಂಬವನ್ನ ಕಾಪಾಡಿಕೊಳ್ಳಲು ಕಾರ್ಯಕರ್ತರ ಬಳಕೆ ನಡೆದಿದೆ. ಮೇವು ತಿಂದವರ ಜೊತೆ ಪೇಪರ್ ತಿಂದವರೂ ಜೈಲಿಗೆ ಹೋಗ್ತಾರೆ ಎಂದು ಸಿ.ಟಿ.ರವಿ ಲೇವಡಿ ಮಾಡಿದ್ದಾರೆ.

ಇದನ್ನು ಓದಿ:

ಜೂನ್ 20, 21 ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ

ಇನ್ನು, ನಾನು ಸಾವರ್ಕರ್ ಅಲ್ಲ ಅಂತಾ ರಾಹುಲ್ ಗಾಂಧಿ ಪೋಸ್ಟರ್ ರಾರಾಜಿಸುತ್ತಿರುವ ಬಗ್ಗೆ ಮಾತನಾಡಿದ ಸಿ.ಟಿ.ರವಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರವಾಗಿ ಕಿಡಿಕಾರಿದರು. ಸಾವರ್ಕರ್ ಪಾದದ ಧೂಳಿಗೂ ರಾಹುಲ್‌ ಗಾಂಧಿಗೆ ಯೋಗ್ಯತೆ ಇಲ್ಲ. ಅಂಡಮಾನ್‌ ಜೈಲು ನೋಡಿದ್ರೆ ಅವರ ಚಡ್ಡಿ, ಪ್ಯಾಂಟ್‌ನಲ್ಲಿ ಒದ್ದೆ ಆಗುತ್ತೆ. ಈ ಜನ್ಮ, ಮುಂದಿನ ಜನ್ಮದಲ್ಲೂ ಸಾವರ್ಕರ್ ಆಗಲು ಅವರಿಗೆ ಸಾಧ್ಯವಿಲ್ಲ. ಸಾವರ್ಕರ್ ಆಗಲು ರಾಹುಲ್‌ಗಾಂಧಿಗೆ ಸಾಧ್ಯವೇ ಇಲ್ಲ. ಕಾಂಗ್ರೆಸ್ ಪಕ್ಷ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಭ್ರಷ್ಟಾಚಾರ ಮುಚ್ಚಿಹಾಕಲು ಬೀದಿಗಿಳಿದು ನಾಟಕ ಮಾಡುತ್ತಿದ್ದಾರೆ. ಪ್ರಕರಣದ ಸಮಗ್ರ ತನಿಖೆ ಆಗಬೇಕು, ಮೂಲ ಷೇರುದಾರರಿಗೆ ಆದಾಯ ಹಂಚಿಕೆ ಆಗಬೇಕು. ಭ್ರಷ್ಟಾಚಾರ ಮುಚ್ಚಿ ಹಾಕಲು ಈ ಷಡ್ಯಂತ್ರ ಮಾಡಿದ್ದಾರೆ ಎಂದು ರವಿ ಹೇಳಿದ್ದಾರೆ.

ಇದನ್ನು ಓದಿ: ಇಡಿ ವಿಚಾರಣೆಗೆ ಇಂದು ರಾಹುಲ್ ಗಾಂಧಿ ಹಾಜರು, ಕಾಂಗ್ರೆಸ್​ ಪ್ರತಿಭಟನೆಗೆ ದೆಹಲಿ ಪೊಲೀಸರಿಂದ ಅನುಮತಿ ನಿರಾಕರಣೆ

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Mon, 13 June 22

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ