AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡಮಾನ್‌ ಜೈಲು ನೋಡಿದ್ರೆ ರಾಹುಲ್‌ ಗಾಂಧಿ ಚಡ್ಡಿ ಪ್ಯಾಂಟ್‌ ಒದ್ದೆ ಆಗುತ್ತೆ, ಸಾವರ್ಕರ್ ಪಾದದ ಧೂಳಿಗೂ ರಾಹುಲ್‌ ಸಮವಿಲ್ಲ – ಸಿ.ಟಿ.ರವಿ

CT Ravi : ಕಾಂಗ್ರೆಸ್ ಪಕ್ಷ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಭ್ರಷ್ಟಾಚಾರ ಮುಚ್ಚಿಹಾಕಲು ಬೀದಿಗಿಳಿದು ನಾಟಕ ಮಾಡುತ್ತಿದ್ದಾರೆ. ಪ್ರಕರಣದ ಸಮಗ್ರ ತನಿಖೆ ಆಗಬೇಕು, ಮೂಲ ಷೇರುದಾರರಿಗೆ ಆದಾಯ ಹಂಚಿಕೆ ಆಗಬೇಕು ಎಂದು ರವಿ ಆಗ್ರಹಿಸಿದ್ದಾರೆ.

ಅಂಡಮಾನ್‌ ಜೈಲು ನೋಡಿದ್ರೆ ರಾಹುಲ್‌ ಗಾಂಧಿ ಚಡ್ಡಿ ಪ್ಯಾಂಟ್‌ ಒದ್ದೆ ಆಗುತ್ತೆ, ಸಾವರ್ಕರ್ ಪಾದದ ಧೂಳಿಗೂ ರಾಹುಲ್‌ ಸಮವಿಲ್ಲ - ಸಿ.ಟಿ.ರವಿ
ಸಿ ಟಿ ರವಿ
TV9 Web
| Edited By: |

Updated on:Jun 13, 2022 | 4:08 PM

Share

ಬೆಂಗಳೂರು: ನ್ಯಾಷನಲ್ ಹೆರಾಲ್ಡ್​ ಪ್ರಕರಣದಲ್ಲಿ (National Herald) ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಜಾರಿ ನಿರ್ದೇಶನಾಲಯ ಬುಲಾವ್ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್​ ಪಕ್ಷ ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದೆ (Congress Protest). ಆದರೆ ಆಡಳಿತಾರೂಢ ಬಿಜೆಪಿ ನಾಯಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಆ ಪಕ್ಷದ ನಡೆ ವಿರುದ್ಧ ಸಿಡಿದೆದ್ದಿದ್ದಾರೆ. ಇ.ಡಿ. ನೋಟಿಸ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ಸುದ್ದಿಗೋಷ್ಠಿ ನಡೆಸಿ, ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್​ನವರು ಸಂವಿಧಾನಕ್ಕಿಂತ ಮೇಲಿನವರಾ? ಕಾಂಗ್ರೆಸ್​ನವರಿಗೆ ಭಯ ಯಾಕೆ? ಹಗರಣಗಳ ಸರದಾರ ಕಾಂಗ್ರೆಸ್ ಪಾರ್ಟಿ. ಕಾಲಿನಿಂದ ತಲೆವರೆಗೂ ಹಗರಣ ಹೊದ್ದುಕೊಂಡಿದೆ. ಆಡು ಮುಟ್ಟದ ಸೊಪ್ಪಿಲ್ಲ, ಹಗರಣ ಮಾಡದ ಕಾಂಗ್ರೆಸ್​ನವರಿಲ್ಲ. ಭ್ರಷ್ಟಾಚಾರ ನಡೆಸಿದವರಿಗೆ ಭ್ರಷ್ಟರೇ ಬೆಂಬಲ ನೀಡ್ತಿದ್ದಾರೆ. ಗಾಂಧಿ ಕುಟುಂಬವನ್ನ ಕಾಪಾಡಿಕೊಳ್ಳಲು ಕಾರ್ಯಕರ್ತರ ಬಳಕೆ ನಡೆದಿದೆ. ಮೇವು ತಿಂದವರ ಜೊತೆ ಪೇಪರ್ ತಿಂದವರೂ ಜೈಲಿಗೆ ಹೋಗ್ತಾರೆ ಎಂದು ಸಿ.ಟಿ.ರವಿ ಲೇವಡಿ ಮಾಡಿದ್ದಾರೆ.

ಇದನ್ನು ಓದಿ:

ಜೂನ್ 20, 21 ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ

ಇನ್ನು, ನಾನು ಸಾವರ್ಕರ್ ಅಲ್ಲ ಅಂತಾ ರಾಹುಲ್ ಗಾಂಧಿ ಪೋಸ್ಟರ್ ರಾರಾಜಿಸುತ್ತಿರುವ ಬಗ್ಗೆ ಮಾತನಾಡಿದ ಸಿ.ಟಿ.ರವಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರವಾಗಿ ಕಿಡಿಕಾರಿದರು. ಸಾವರ್ಕರ್ ಪಾದದ ಧೂಳಿಗೂ ರಾಹುಲ್‌ ಗಾಂಧಿಗೆ ಯೋಗ್ಯತೆ ಇಲ್ಲ. ಅಂಡಮಾನ್‌ ಜೈಲು ನೋಡಿದ್ರೆ ಅವರ ಚಡ್ಡಿ, ಪ್ಯಾಂಟ್‌ನಲ್ಲಿ ಒದ್ದೆ ಆಗುತ್ತೆ. ಈ ಜನ್ಮ, ಮುಂದಿನ ಜನ್ಮದಲ್ಲೂ ಸಾವರ್ಕರ್ ಆಗಲು ಅವರಿಗೆ ಸಾಧ್ಯವಿಲ್ಲ. ಸಾವರ್ಕರ್ ಆಗಲು ರಾಹುಲ್‌ಗಾಂಧಿಗೆ ಸಾಧ್ಯವೇ ಇಲ್ಲ. ಕಾಂಗ್ರೆಸ್ ಪಕ್ಷ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಭ್ರಷ್ಟಾಚಾರ ಮುಚ್ಚಿಹಾಕಲು ಬೀದಿಗಿಳಿದು ನಾಟಕ ಮಾಡುತ್ತಿದ್ದಾರೆ. ಪ್ರಕರಣದ ಸಮಗ್ರ ತನಿಖೆ ಆಗಬೇಕು, ಮೂಲ ಷೇರುದಾರರಿಗೆ ಆದಾಯ ಹಂಚಿಕೆ ಆಗಬೇಕು. ಭ್ರಷ್ಟಾಚಾರ ಮುಚ್ಚಿ ಹಾಕಲು ಈ ಷಡ್ಯಂತ್ರ ಮಾಡಿದ್ದಾರೆ ಎಂದು ರವಿ ಹೇಳಿದ್ದಾರೆ.

ಇದನ್ನು ಓದಿ: ಇಡಿ ವಿಚಾರಣೆಗೆ ಇಂದು ರಾಹುಲ್ ಗಾಂಧಿ ಹಾಜರು, ಕಾಂಗ್ರೆಸ್​ ಪ್ರತಿಭಟನೆಗೆ ದೆಹಲಿ ಪೊಲೀಸರಿಂದ ಅನುಮತಿ ನಿರಾಕರಣೆ

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Mon, 13 June 22

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ