AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧ, ವಿಕಾಸಸೌಧದಲ್ಲಿ ಇಫ್ತಾರ್ ಕೂಟ ನಡೆಸದಂತೆ ರಾಷ್ಟ್ರ ರಕ್ಷಣಾ ಪಡೆ ಕಾರ್ಯಕರ್ತರಿಂದ ಪ್ರತಿಭಟನೆ

ಇಫ್ತಿಯಾರ್ ಕೂಟವನ್ನ ವಿಧಾನಸೌಧದಲ್ಲಿ ಮಾಡಬಾರದು. ಕಾಂಗ್ರೆಸ್​ನವರು ಹುಟ್ಟು ಹಾಕಿರುವ ಈ ಕೆಟ್ಟ ಸಂಸ್ಕೃತಿಯನ್ನು ಕಿತ್ತು ಹಾಕಬೇಕು. ವಿಧಾನಸೌಧದಲ್ಲಿ ಹಾಲಾಲ್ ಆಹಾರ ಸೇವನೆ ಮಾಡಲು ಅವಕಾಶ ನೀಡಬಾರದು ಎಂದು ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದಾರೆ.

ವಿಧಾನಸೌಧ, ವಿಕಾಸಸೌಧದಲ್ಲಿ ಇಫ್ತಾರ್ ಕೂಟ ನಡೆಸದಂತೆ ರಾಷ್ಟ್ರ ರಕ್ಷಣಾ ಪಡೆ ಕಾರ್ಯಕರ್ತರಿಂದ ಪ್ರತಿಭಟನೆ
ವಿಧಾನಸೌಧ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Apr 23, 2022 | 4:22 PM

Share

ಬೆಂಗಳೂರು: ವಿಧಾನಸೌಧ, ವಿಕಾಸಸೌಧದಲ್ಲಿ ಇಫ್ತಾರ್ ಕೂಟ (Iftar Gathering) ನಡೆಸದಂತೆ ಹಿಂದೂಪರ ಹೋರಾಟಗಾರ ಪ್ರಶಾಂತ್ ಸಂಬರಗಿ ನೇತೃತ್ವದಲ್ಲಿ ರಾಷ್ಟ್ರ ರಕ್ಷಣಾ ಪಡೆ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗುತ್ತಿದೆ. ಫ್ರೀಡಂಪಾರ್ಕ್‌ನಿಂದ ಪ್ರತಿಭಟನಾ ರ್ಯಾಲಿ ಆರಂಭವಾಗಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದಾಗ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಫ್ತಿಯಾರ್ ಕೂಟವನ್ನ ವಿಧಾನಸೌಧದಲ್ಲಿ ಮಾಡಬಾರದು. ಕಾಂಗ್ರೆಸ್​ನವರು ಹುಟ್ಟು ಹಾಕಿರುವ ಈ ಕೆಟ್ಟ ಸಂಸ್ಕೃತಿಯನ್ನು ಕಿತ್ತು ಹಾಕಬೇಕು. ವಿಧಾನಸೌಧದಲ್ಲಿ ಹಾಲಾಲ್ ಆಹಾರ ಸೇವನೆ ಮಾಡಲು ಅವಕಾಶ ನೀಡಬಾರದು ಎಂದು ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದಾರೆ. ಒಂದು ಧರ್ಮದ ಜಾತಿ ಹಬ್ಬಕ್ಕೆ ವಿಧಾನ ಸೌಧದಲ್ಲಿ ಅವಕಾಶ ನೀಡಬಾರದು. ಮೊದಲನೇ ಹಂತದಲ್ಲಿ ಇವತ್ತು ಎಚ್ಚರಿಕೆಯ ಹೋರಾಟ ಮಾಡುತ್ತಿದ್ದೆವೆ. ಒಂದು ಧರ್ಮದ ಹಬ್ಬಕ್ಕೆ ಊಟ ಹಾಕೋದಾದ್ರೆ ಎಲ್ಲರಿಗೂ ಎಲ್ಲಾ ಹಬ್ಬಕ್ಕೆ ಊಟ ಹಾಕಲಿ. ವಿಧಾನಸೌಧದಲ್ಲಿ ತಿಂಗಳುಗಟ್ಟಲೆ ಹಬ್ಬ ಮಾಡಲಿ. ಬೇರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಫ್ತಿಯಾರ್ ಕೂಟ ನಿಲ್ಲಿಸಿದೆ. ಕಾಂಗ್ರೆಸ್​ನವರು ಕರೆದು ತೊಡೆಮೇಲೆ ಕೂರಿಸಿಕೊಂಡು ಇಫ್ತಿಯಾರ್ ಕೂಟ ಮಾಡಿಕೊಂಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಕೆಲ ಸಂಘಟನೆಗಳು ಸ್ನೇಹ ಸಮ್ಮಿಲನ ಮಾಡಿಕೊಂಡಿದ್ದಾರೆ. ಭರತ್ ಶೆಟ್ಟಿ, ಸಂತೋಷ್ ಶೆಟ್ಟಿ ಎಂಬುವವರು ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ನಮಗೂ ಆಹ್ವಾನ ಇತ್ತು. ನಾವು ಎಂಟು ಶರತ್ತುಗಳನ್ನ ಹಾಕಿದ್ವು , ಆ ಶರತ್ತುಗಳಿಗೆ ಅವರು ಒಪ್ಪದ ಕಾರಣ ನಾವು ಹಾಜರಿರಲಿಲ್ಲ. ಸ್ನೇಹಕೂಟ ಅನ್ನೋದು ಕೇವಲ ನಾಟಕ. ಅನೇಕ ವರ್ಷಗಳ ಹಿಂದೂ ಮುಸ್ಲಿಂ ಭಾಂಧವರಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸರ್ಕಾರಕ್ಕೆ 3 ಗಂಟೆಯವರೆಗೂ ಗಡುವು ನೀಡುತ್ತೆವೆ. ವಿಧಾನಸೌಧ ಹಾಗೂ ವಿಕಾಸ ಸೌಧದಲ್ಲಿ ಇಫ್ತಿಯಾರ್ ಮಾಡಲ್ಲ ಎಂದು ಸರ್ಕಾರ ಕೂಡಲೇ ಆದೇಶ ಮಾಡಬೇಕು ಎಂದು ಪುನೀತ್ ಕೆರೆಹಳ್ಳಿ ಹೇಳಿಕೆ ನೀಡಿದ್ದಾರೆ. ಇಲ್ಲವಾದಲ್ಲಿ ಮಧ್ಯಾಹ್ನ ಮೂರು ಗಂಟೆಯ ನಂತರ ಪ್ರತಿಭಟನೆ ತೀವ್ರ ಸ್ವರೂಪ ಪಡೆಯಲಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಹೆಣ್ಣುಮಕ್ಕಳು ಶಿಕ್ಷಣ ಪಡೆಯಬೇಕು, ಅದು ಬಿಟ್ಟು ಹಿಜಾಬ್​ ಹೆಸರಲ್ಲಿ ಬಿಟ್ಟಿ ಪ್ರಚಾರ ಪಡೆಯಬಾರದು: ಆಲಿಯಾ ಟ್ವೀಟ್​ಗೆ ಶೋಭಾ ಕರಂದ್ಲಾಜೆ ತಿರುಗೇಟು

Published On - 4:07 pm, Sat, 23 April 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?