AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವನಕ್ಷತ್ರ ಉತ್ತಮ ಕಾರ್ಯಕ್ರಮ: ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ

15 ವರ್ಷಗಳ ನಿರಂತರ ಪರಿಶ್ರಮದಿಂದ ಟಿವಿ9 ಚಾನೆಲ್ ಉತ್ತಮ ರೀತಿಯಲ್ಲಿ ರೂಪುಗೊಂಡಿದೆ ಎಂದು ನಿವೃತ್ತ ಲೋಕಾಯುಕ್ತ, ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.

ನವನಕ್ಷತ್ರ ಉತ್ತಮ ಕಾರ್ಯಕ್ರಮ: ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ
ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
TV9 Web
| Edited By: |

Updated on: Jan 05, 2022 | 6:57 PM

Share

ಬೆಂಗಳೂರು: ಟಿವಿ9 ಆಯೋಜಿಸಿದ್ದ ನವನಕ್ಷತ್ರ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಸಂಸ್ಥೆಯ ನ್ಯಾಯಮೂರ್ತಿಯಾಗಿದ್ದ ಸಂತೋಷ್ ಹೆಗಡೆ ಪಾಲ್ಗೊಂಡಿದ್ದರು. ನನಗೆ ಹಲವು ವರ್ಷಗಳಿಂದ ಟಿವಿ9 ಸಂಪರ್ಕವಿದೆ. ಲೋಕಾಯುಕ್ತನಾಗಿ ಬೆಂಗಳೂರಿಗೆ ಬಂದ ನಂತರ ಸಂಬಂಧ ವೃದ್ಧಿಸಿತು ಇದು ಬಹಳ ಉತ್ತಮ ಚಾನೆಲ್. ಕನ್ನಡಿಗರ ಹೆಮ್ಮಯ ಚಾನೆಲ್. 15 ವರ್ಷಗಳ ನಿರಂತರ ಪರಿಶ್ರಮದಿಂದ ಉತ್ತಮ ರೀತಿಯಲ್ಲಿ ರೂಪುಗೊಂಡಿದೆ. ‘ನವನಕ್ಷತ್ರ’ ಸುಂದರ ಕಾರ್ಯಕ್ರಮ. ಇಂತ ಉತ್ತಮ ಕಾರ್ಯಕ್ರಮ ರೂಪಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕರ್ನಾಟಕದ ಸಾಕ್ಷಿಪ್ರಜ್ಞೆ ಟಿವಿ9: ಸಿಎಂ ಬಸವರಾಜ ಬೊಮ್ಮಾಯಿ ಟಿವಿ9 ಸುದ್ದಿವಾಹಿನಿಯು ಕರ್ನಾಟಕದ ಸಾಕ್ಷಿಪ್ರಜ್ಞೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಟಿವಿ9 ಆಯೋಜಿಸಿದ್ದ ‘ನವನಕ್ಷತ್ರ’ ಕರ್ನಾಟಕದ ಸಾಧಕರಿಗೆ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಳೆದ 15 ವರ್ಷಗಳಲ್ಲಿ ಟಿವಿ9 ಕರ್ನಾಟಕ ಸಾಕ್ಷಿಪ್ರಜ್ಞೆಯಾಗಿ ಹೊರಹೊಮ್ಮಿದೆ. ಕರ್ನಾಟಕದಲ್ಲಿ ಏನಾದರೂ ನಡೆಯುತ್ತಿದ್ದರೆ, ನಡೆಯಬೇಕಿದ್ದರೆ ಅದನ್ನು ಟಿವಿ9 ಮೂಲಕ ಬಿಂಬಿಸಿದಾಗ ಪರಿಣಾಮಕಾರಿಯಾಗಿ ಆಗುತ್ತದೆ’ ಎಂಬ ಮಾತು ಜನಜನಿತವಾಗಿದೆ ಎಂದರು.

ಇದು ಜನರ ಮನಸ್ಸಿಗೆ ಹತ್ತಿರ ಇರುವ ಚಾನೆಲ್. ಕರ್ನಾಟಕದಲ್ಲಿ ಮನೆಮನೆಗೂ ಪರಿಚಿತವಾಗಿದೆ. ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಟಿವಿ9 ಹಲವು ಗಣ್ಯರು, ತಜ್ಞರು, ನಾಯಕರು, ವಿಜ್ಞಾನಿಗಳು, ಆಡಳಿತಗಾರರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿರುವವರನ್ನು ಕನ್ನಡಿಗರಿಗೆ ಪರಿಚಯ ಮಾಡಿಕೊಟ್ಟಿದೆ. ಕನ್ನಡಿಗರಿಗೆ, ಕರ್ನಾಟಕಕ್ಕೆ ಸಂಕಷ್ಟವಾದಾಗ ಟಿವಿ9 ಸರ್ಕಾರದ ಜೊತೆಗೆ ನಿಂತು, ಹೆಗಲಿಗೆ ಹೆಗಲು ಕೊಟ್ಟು ಜನರನ್ನು ರಕ್ಷಿಸುವ ಕೆಲಸ ಮಾಡಿದೆ. ಎಲ್ಲಿ ಸಾಧನೆಯಿದೆ, ಎಲ್ಲಿ ಆಪತ್ತಿದೆ, ಎಲ್ಲಿ ಒಳ್ಳೇ ಪ್ರಯತ್ನ ಇದೆಯೇ ಅಲ್ಲೆಲ್ಲಾ ಟಿವಿ9 ಇದೆ ಎಂದರು.

ಇದನ್ನೂ ಓದಿ: ಕೊವಿಡ್ ಬಗ್ಗೆ ಟಿವಿ9 ಜನರನ್ನು ಹೆದರಿಸಲಿಲ್ಲ, ಜಾಗೃತಿ ಮೂಡಿಸಿತು: ನವನಕ್ಷತ್ರ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಸುಧಾಕರ ಇದನ್ನೂ ಓದಿ: ಕರ್ನಾಟಕದ ಸಾಕ್ಷಿಪ್ರಜ್ಞೆ ಟಿವಿ9 ಮಾರ್ಗದರ್ಶನ ಸದಾ ಬಯಸುವೆ: ನವನಕ್ಷತ್ರ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್