AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವನಕ್ಷತ್ರ ಉತ್ತಮ ಕಾರ್ಯಕ್ರಮ: ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ

15 ವರ್ಷಗಳ ನಿರಂತರ ಪರಿಶ್ರಮದಿಂದ ಟಿವಿ9 ಚಾನೆಲ್ ಉತ್ತಮ ರೀತಿಯಲ್ಲಿ ರೂಪುಗೊಂಡಿದೆ ಎಂದು ನಿವೃತ್ತ ಲೋಕಾಯುಕ್ತ, ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.

ನವನಕ್ಷತ್ರ ಉತ್ತಮ ಕಾರ್ಯಕ್ರಮ: ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ
ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
TV9 Web
| Edited By: |

Updated on: Jan 05, 2022 | 6:57 PM

Share

ಬೆಂಗಳೂರು: ಟಿವಿ9 ಆಯೋಜಿಸಿದ್ದ ನವನಕ್ಷತ್ರ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಸಂಸ್ಥೆಯ ನ್ಯಾಯಮೂರ್ತಿಯಾಗಿದ್ದ ಸಂತೋಷ್ ಹೆಗಡೆ ಪಾಲ್ಗೊಂಡಿದ್ದರು. ನನಗೆ ಹಲವು ವರ್ಷಗಳಿಂದ ಟಿವಿ9 ಸಂಪರ್ಕವಿದೆ. ಲೋಕಾಯುಕ್ತನಾಗಿ ಬೆಂಗಳೂರಿಗೆ ಬಂದ ನಂತರ ಸಂಬಂಧ ವೃದ್ಧಿಸಿತು ಇದು ಬಹಳ ಉತ್ತಮ ಚಾನೆಲ್. ಕನ್ನಡಿಗರ ಹೆಮ್ಮಯ ಚಾನೆಲ್. 15 ವರ್ಷಗಳ ನಿರಂತರ ಪರಿಶ್ರಮದಿಂದ ಉತ್ತಮ ರೀತಿಯಲ್ಲಿ ರೂಪುಗೊಂಡಿದೆ. ‘ನವನಕ್ಷತ್ರ’ ಸುಂದರ ಕಾರ್ಯಕ್ರಮ. ಇಂತ ಉತ್ತಮ ಕಾರ್ಯಕ್ರಮ ರೂಪಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕರ್ನಾಟಕದ ಸಾಕ್ಷಿಪ್ರಜ್ಞೆ ಟಿವಿ9: ಸಿಎಂ ಬಸವರಾಜ ಬೊಮ್ಮಾಯಿ ಟಿವಿ9 ಸುದ್ದಿವಾಹಿನಿಯು ಕರ್ನಾಟಕದ ಸಾಕ್ಷಿಪ್ರಜ್ಞೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಟಿವಿ9 ಆಯೋಜಿಸಿದ್ದ ‘ನವನಕ್ಷತ್ರ’ ಕರ್ನಾಟಕದ ಸಾಧಕರಿಗೆ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಳೆದ 15 ವರ್ಷಗಳಲ್ಲಿ ಟಿವಿ9 ಕರ್ನಾಟಕ ಸಾಕ್ಷಿಪ್ರಜ್ಞೆಯಾಗಿ ಹೊರಹೊಮ್ಮಿದೆ. ಕರ್ನಾಟಕದಲ್ಲಿ ಏನಾದರೂ ನಡೆಯುತ್ತಿದ್ದರೆ, ನಡೆಯಬೇಕಿದ್ದರೆ ಅದನ್ನು ಟಿವಿ9 ಮೂಲಕ ಬಿಂಬಿಸಿದಾಗ ಪರಿಣಾಮಕಾರಿಯಾಗಿ ಆಗುತ್ತದೆ’ ಎಂಬ ಮಾತು ಜನಜನಿತವಾಗಿದೆ ಎಂದರು.

ಇದು ಜನರ ಮನಸ್ಸಿಗೆ ಹತ್ತಿರ ಇರುವ ಚಾನೆಲ್. ಕರ್ನಾಟಕದಲ್ಲಿ ಮನೆಮನೆಗೂ ಪರಿಚಿತವಾಗಿದೆ. ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಟಿವಿ9 ಹಲವು ಗಣ್ಯರು, ತಜ್ಞರು, ನಾಯಕರು, ವಿಜ್ಞಾನಿಗಳು, ಆಡಳಿತಗಾರರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿರುವವರನ್ನು ಕನ್ನಡಿಗರಿಗೆ ಪರಿಚಯ ಮಾಡಿಕೊಟ್ಟಿದೆ. ಕನ್ನಡಿಗರಿಗೆ, ಕರ್ನಾಟಕಕ್ಕೆ ಸಂಕಷ್ಟವಾದಾಗ ಟಿವಿ9 ಸರ್ಕಾರದ ಜೊತೆಗೆ ನಿಂತು, ಹೆಗಲಿಗೆ ಹೆಗಲು ಕೊಟ್ಟು ಜನರನ್ನು ರಕ್ಷಿಸುವ ಕೆಲಸ ಮಾಡಿದೆ. ಎಲ್ಲಿ ಸಾಧನೆಯಿದೆ, ಎಲ್ಲಿ ಆಪತ್ತಿದೆ, ಎಲ್ಲಿ ಒಳ್ಳೇ ಪ್ರಯತ್ನ ಇದೆಯೇ ಅಲ್ಲೆಲ್ಲಾ ಟಿವಿ9 ಇದೆ ಎಂದರು.

ಇದನ್ನೂ ಓದಿ: ಕೊವಿಡ್ ಬಗ್ಗೆ ಟಿವಿ9 ಜನರನ್ನು ಹೆದರಿಸಲಿಲ್ಲ, ಜಾಗೃತಿ ಮೂಡಿಸಿತು: ನವನಕ್ಷತ್ರ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಸುಧಾಕರ ಇದನ್ನೂ ಓದಿ: ಕರ್ನಾಟಕದ ಸಾಕ್ಷಿಪ್ರಜ್ಞೆ ಟಿವಿ9 ಮಾರ್ಗದರ್ಶನ ಸದಾ ಬಯಸುವೆ: ನವನಕ್ಷತ್ರ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ