AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mallikarjun Kharge: ‘ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು’; ಮಲ್ಲಿಕಾರ್ಜುನ ಖರ್ಗೆ ಭವಿಷ್ಯ

"ತಪ್ಪಿನಿಂದಾಗಿ ಎನ್‌ಡಿಎ ಸರ್ಕಾರ ರಚನೆಯಾಗಿದೆ, ಮೋದಿಯವರಿಗೆ ಜನಾದೇಶವಿಲ್ಲ" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

Mallikarjun Kharge: ‘ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು’; ಮಲ್ಲಿಕಾರ್ಜುನ ಖರ್ಗೆ ಭವಿಷ್ಯ
ಮಲ್ಲಿಕಾರ್ಜುನ ಖರ್ಗೆ
ಸುಷ್ಮಾ ಚಕ್ರೆ
|

Updated on: Jun 15, 2024 | 3:50 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರವು ತಪ್ಪಾಗಿ ರಚನೆಯಾಗಿದ್ದು, ಶೀಘ್ರದಲ್ಲೇ ಅದು ಪತನವಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಇಂದು ಹೇಳಿದ್ದಾರೆ. ನರೇಂದ್ರ ಮೋದಿಯವರ ಬಹುಮತವಿಲ್ಲದ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಖರ್ಗೆ ಭವಿಷ್ಯ ನುಡಿದಿದ್ದಾರೆ.

ಪ್ರಮಾದದಿಂದ ಎನ್‌ಡಿಎ ಸರಕಾರ ರಚನೆಯಾಗಿದ್ದು, ಅದು ಯಾವಾಗ ಬೇಕಾದರೂ ಪತನವಾಗಬಹುದು ಎಂದು ಖರ್ಗೆ ಹೇಳಿದ್ದಾರೆ. ಬಿಜೆಪಿ ತನ್ನ ಮೈತ್ರಿ ಪಕ್ಷಗಳನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ ಎಂಬ ಊಹಾಪೋಹದ ಕೆಲವು ದಿನಗಳ ನಂತರ ಅವರ ಈ ಹೇಳಿಕೆ ಹೊರಬಿದ್ದಿದೆ.

ಇದನ್ನೂ ಓದಿ: Mallikarjun Kharge: ಇದು ಮೋದಿಯ ನೈತಿಕ, ರಾಜಕೀಯ ಸೋಲು; ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಠಿ

“ತಪ್ಪಾಗಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಮೋದಿಜಿಗೆ ಜನಾದೇಶವಿಲ್ಲ. ಇದು ಅಲ್ಪಸಂಖ್ಯಾತ ಸರ್ಕಾರ. ಈ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು” ಎಂದು ಖರ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

543 ಸದಸ್ಯ ಬಲದ ಲೋಕಸಭೆಯಲ್ಲಿ ಎನ್‌ಡಿಎ 293 ಸ್ಥಾನಗಳನ್ನು ಗೆದ್ದಿದೆ. ಹಿಂದಿನ ಎರಡು ಅವಧಿಗಳಲ್ಲಿ ಉತ್ತಮ ಬಹುಮತವನ್ನು ಹೊಂದಿದ್ದ ಬಿಜೆಪಿಯು ಈ ಬಾರಿ ಕೇವಲ 240 ಸ್ಥಾನಗಳನ್ನು ಪಡೆದುಕೊಂಡಿತು. ಸರ್ಕಾರ ರಚಿಸಲು ಬೇಕಾದ 272 ಮಾರ್ಕ್‌ಗಿಂತ ಕಡಿಮೆ ಇದ್ದುದರಿಂದ ಸಮ್ಮಿಶ್ರ ಸರ್ಕಾರವನ್ನು ರಚಿಸಿದೆ.

ಇದನ್ನೂ ಓದಿ: ನಾಚಿಕೆಯ ಸಂಗತಿ; ಪಿಎಂ ಮೋದಿಯ ಪಾದ ಮುಟ್ಟಿದ್ದಕ್ಕೆ ನಿತೀಶ್ ಕುಮಾರ್ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ

ದಾಖಲೆಯ ಮೂರನೇ ಅವಧಿಗೆ ಬಿಜೆಪಿಗೆ ಸರ್ಕಾರ ರಚಿಸಲು ಸಹಾಯ ಮಾಡಿದ 4 ಮಿತ್ರಪಕ್ಷಗಳೆಂದರೆ ಎನ್ ಚಂದ್ರಬಾಬು ನಾಯ್ಡು ಅವರ ಟಿಡಿಪಿ, ಇದು 16 ಸ್ಥಾನಗಳನ್ನು ಗೆದ್ದಿದೆ. ನಿತೀಶ್ ಕುಮಾರ್ ಅವರ ಜೆಡಿಯು (12), ಏಕನಾಥ್ ಶಿಂಧೆ ಅವರ ಶಿವಸೇನೆ (7) ಮತ್ತು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ-ರಾಮ್ ವಿಲಾಸ್ (5).

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ