AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mallikarjun Kharge: ‘ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು’; ಮಲ್ಲಿಕಾರ್ಜುನ ಖರ್ಗೆ ಭವಿಷ್ಯ

"ತಪ್ಪಿನಿಂದಾಗಿ ಎನ್‌ಡಿಎ ಸರ್ಕಾರ ರಚನೆಯಾಗಿದೆ, ಮೋದಿಯವರಿಗೆ ಜನಾದೇಶವಿಲ್ಲ" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

Mallikarjun Kharge: ‘ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು’; ಮಲ್ಲಿಕಾರ್ಜುನ ಖರ್ಗೆ ಭವಿಷ್ಯ
ಮಲ್ಲಿಕಾರ್ಜುನ ಖರ್ಗೆ
ಸುಷ್ಮಾ ಚಕ್ರೆ
|

Updated on: Jun 15, 2024 | 3:50 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರವು ತಪ್ಪಾಗಿ ರಚನೆಯಾಗಿದ್ದು, ಶೀಘ್ರದಲ್ಲೇ ಅದು ಪತನವಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಇಂದು ಹೇಳಿದ್ದಾರೆ. ನರೇಂದ್ರ ಮೋದಿಯವರ ಬಹುಮತವಿಲ್ಲದ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಖರ್ಗೆ ಭವಿಷ್ಯ ನುಡಿದಿದ್ದಾರೆ.

ಪ್ರಮಾದದಿಂದ ಎನ್‌ಡಿಎ ಸರಕಾರ ರಚನೆಯಾಗಿದ್ದು, ಅದು ಯಾವಾಗ ಬೇಕಾದರೂ ಪತನವಾಗಬಹುದು ಎಂದು ಖರ್ಗೆ ಹೇಳಿದ್ದಾರೆ. ಬಿಜೆಪಿ ತನ್ನ ಮೈತ್ರಿ ಪಕ್ಷಗಳನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ ಎಂಬ ಊಹಾಪೋಹದ ಕೆಲವು ದಿನಗಳ ನಂತರ ಅವರ ಈ ಹೇಳಿಕೆ ಹೊರಬಿದ್ದಿದೆ.

ಇದನ್ನೂ ಓದಿ: Mallikarjun Kharge: ಇದು ಮೋದಿಯ ನೈತಿಕ, ರಾಜಕೀಯ ಸೋಲು; ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಠಿ

“ತಪ್ಪಾಗಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಮೋದಿಜಿಗೆ ಜನಾದೇಶವಿಲ್ಲ. ಇದು ಅಲ್ಪಸಂಖ್ಯಾತ ಸರ್ಕಾರ. ಈ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು” ಎಂದು ಖರ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

543 ಸದಸ್ಯ ಬಲದ ಲೋಕಸಭೆಯಲ್ಲಿ ಎನ್‌ಡಿಎ 293 ಸ್ಥಾನಗಳನ್ನು ಗೆದ್ದಿದೆ. ಹಿಂದಿನ ಎರಡು ಅವಧಿಗಳಲ್ಲಿ ಉತ್ತಮ ಬಹುಮತವನ್ನು ಹೊಂದಿದ್ದ ಬಿಜೆಪಿಯು ಈ ಬಾರಿ ಕೇವಲ 240 ಸ್ಥಾನಗಳನ್ನು ಪಡೆದುಕೊಂಡಿತು. ಸರ್ಕಾರ ರಚಿಸಲು ಬೇಕಾದ 272 ಮಾರ್ಕ್‌ಗಿಂತ ಕಡಿಮೆ ಇದ್ದುದರಿಂದ ಸಮ್ಮಿಶ್ರ ಸರ್ಕಾರವನ್ನು ರಚಿಸಿದೆ.

ಇದನ್ನೂ ಓದಿ: ನಾಚಿಕೆಯ ಸಂಗತಿ; ಪಿಎಂ ಮೋದಿಯ ಪಾದ ಮುಟ್ಟಿದ್ದಕ್ಕೆ ನಿತೀಶ್ ಕುಮಾರ್ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ

ದಾಖಲೆಯ ಮೂರನೇ ಅವಧಿಗೆ ಬಿಜೆಪಿಗೆ ಸರ್ಕಾರ ರಚಿಸಲು ಸಹಾಯ ಮಾಡಿದ 4 ಮಿತ್ರಪಕ್ಷಗಳೆಂದರೆ ಎನ್ ಚಂದ್ರಬಾಬು ನಾಯ್ಡು ಅವರ ಟಿಡಿಪಿ, ಇದು 16 ಸ್ಥಾನಗಳನ್ನು ಗೆದ್ದಿದೆ. ನಿತೀಶ್ ಕುಮಾರ್ ಅವರ ಜೆಡಿಯು (12), ಏಕನಾಥ್ ಶಿಂಧೆ ಅವರ ಶಿವಸೇನೆ (7) ಮತ್ತು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ-ರಾಮ್ ವಿಲಾಸ್ (5).

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!