AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಲ್ಲೂ ಸದ್ದು ಮಾಡಿದ ಬಾಡಿಗೆ ಮನೆ ಗೋಳು: ಇಂದಿರಾನಗರದಲ್ಲಿ ಮನೆ ಬೇಕೆಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪೋಸ್ಟರ್​ ಪ್ರದರ್ಶನ

ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್(CSK) ನಡುವೆ ನಡೆದ ಪಂದ್ಯ ವೀಕ್ಷಿಸಲು ಬಂದಿದ್ದ ಯುವಕರು ತಮಗೆ ಇಂದಿರಾನಗರದಲ್ಲಿ ಬಾಡಿಗೆ ಮನೆ ಬೇಕು ಎಂದು ಬೋರ್ಡ್ ಹಿಡಿದು ನಿಂತಿದ್ದ ಫೋಸ್ಟರ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಐಪಿಎಲ್​ನಲ್ಲೂ ಸದ್ದು ಮಾಡಿದ ಬಾಡಿಗೆ ಮನೆ ಗೋಳು: ಇಂದಿರಾನಗರದಲ್ಲಿ ಮನೆ ಬೇಕೆಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪೋಸ್ಟರ್​ ಪ್ರದರ್ಶನ
ವೈರಲ್ ಫೋಸ್ಟ್
ಆಯೇಷಾ ಬಾನು
ಆಯೇಷಾ ಬಾನು| Edited By: ರಶ್ಮಿ ಕಲ್ಲಕಟ್ಟ|

Updated on:Apr 18, 2023 | 4:53 PM

Share

ಬೆಂಗಳೂರು: ಕನಸಿನ ನಗರಿ ಬೆಂಗಳೂರಿನಲ್ಲಿ ನಮಗೆ ಸರಿಹೊಂದುವ ಬಾಡಿಗೆ ಮನೆ(Rent House In Bengaluru) ಹುಡುಕುವುದು ಕತ್ತಲಲ್ಲಿ ಸೂಜಿ ಹುಡುಕುವಷ್ಟು ಕಷ್ಟವಾಗಿದೆ. ಅದರಲ್ಲೂ ಇಂದಿರಾನಗರದಲ್ಲಿ(Indiranagar) ಬಾಡಿಗೆ ಮನೆಗಳಿಗಾಗಿ ಯುವಕರು ಪರದಾಡುವಂತಹ ಪರಿಸ್ಥಿತಿ ಇದೆ. ಹೀಗಾಗಿ ಆಗಾಗ ಬೆಂಗಳೂರಿನಲ್ಲಿ ಮನೆ ಬೇಕು ಎಂಬ ಬಗ್ಗೆ ತಮಾಷೆಯ ಫೋಸ್ಟ್​ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಆದ್ರೆ ಈ ಬಾರಿ ಒಂದು ಹೆಜ್ಜೆ ಮುಂದಿಟ್ಟು ಐಪಿಎಲ್​ನಲ್ಲೂ ಬಾಡಿಗೆ ಮನೆಯ ಬಗ್ಗೆ ಚರ್ಚೆ ಜೋರಾಗಿದೆ.

ಸಾಮಾನ್ಯವಾಗಿ ಐಪಿಎಲ್​ನಲ್ಲಿ ಪಂದ್ಯ ಆಡುವ ಆಟಗಾರರು, ಪಂದ್ಯ ವೀಕ್ಷಿಸಲು ಬರುವ ಅಭಿಮಾನಿಗಳು ವೈರಲ್ ಆಗುತ್ತಾರೆ. ಕೆಲವೊಮ್ಮೆ ಅಭಿಮಾನಿಗಳು ವರ್ತಿಸುವ ರೀತಿಯ ವಿಡಿಯೋಗಳು ಭಾರೀ ಸದ್ದು ಮಾಡುತ್ತವೆ. ಆದ್ರೆ ನಿನ್ನೆ(ಏಪ್ರಿಲ್ 17) ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್(CSK) ನಡುವೆ ನಡೆದ ಪಂದ್ಯ ವೀಕ್ಷಿಸಲು ಬಂದಿದ್ದ ಯುವಕರು ತಮಗೆ ಇಂದಿರಾನಗರದಲ್ಲಿ ಬಾಡಿಗೆ ಮನೆ ಬೇಕು ಎಂದು ಬೋರ್ಡ್ ಹಿಡಿದು ನಿಂತಿದ್ದ ಫೋಸ್ಟರ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಕಿಡ್ನಿ ಮಾರಾಟಕ್ಕಿದೆ -ಇಂದಿರಾನಗರದಲ್ಲಿ ಬಾಡಿಗೆ ಮನೆಗೆ ಡೆಪಾಸಿಟ್ ಇಡಲು ಹಣ ಬೇಕು, ವಿಚಿತ್ರ ಪೋಸ್ಟರ್​ ವೈರಲ್

IPL ವೀಕ್ಷಿಸಲು ಬಂದ ಪ್ರೇಕ್ಷಕರೊಬ್ಬರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಂಗಳೂರಿನ ಇಂದಿರಾನಗರದಲ್ಲಿ 2 ಬಿಹೆಚ್​ಕೆ ಮನೆ ಬೇಕಿದೆ ಎಂದು ಬೋರ್ಡ್ ಹಿಡಿದು ನಿಂತಿರುವ ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗ್ತಿದೆ. ಹಾಗೂ ಈ ಬಗ್ಗೆ ಚರ್ಚೆಗಳು ಶುರುವಾಗಿವೆ. ಅನೇಕರು ಈ ಬಗ್ಗೆ ಕಮೆಂಟ್ ಮಾಡುತ್ತಿದ್ದಾರೆ. ಈ ಪೋಸ್ಟ್​ಗೆ ಪ್ರತಿಕ್ರಿಯೆ ನೀಡಿದ ಟ್ವಿಟರ್​ ಬಳಕೆದಾರರೊಬ್ಬರು, ಇಂದಿರಾನಗರದಲ್ಲಿ ಮನೆ ಹುಡುಕಲು ಇಂದಿರಾನಗರದ ಗೂಂಡಾ ಅಂದರೆ ರಾಹುಲ್ ದ್ರಾವಿಡ್ ಅವರೇ ಸಹಾಯ ಮಾಡಬಹುದು ಎಂದು ಹಾಸ್ಯ ಮಾಡಿದ್ದಾರೆ.

ಮಹಾಮಾರಿ ಕೊರೊನಾದ ನಂತರ ಬೆಂಗಳೂರು ಸಹಜ ಸ್ಥಿತಿಗೆ ಮರಳಿದ್ದು ನಗರದಲ್ಲಿ ಮನೆ ಹುಡುಕುವುದು ಕಷ್ಟಕರವಾಗಿದೆ. ಅದರಲ್ಲೂ ಬ್ಯಾಚುಲರ್ಸ್​ಗಳ ಗೋಳು ಹೇಳತೀರದು. ಮದುವೆ ಆದವರಿಗೆ ಅಥವಾ ಫ್ಯಾಮಿಲಿಗೆ ಬೇಗನೆ ಮನೆ ಸಿಗುತ್ತದೆ. ಆದರೆ ಸಿಂಗಲ್​ ಹುಡುಗರಿಗೆ ಮನೆ ನೀಡಲು ಮಾಲೀಕರು ತಕರಾರು ತೆಗೆಯುತ್ತಾರೆ.

ಬೆಂಗಳೂರಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:34 pm, Tue, 18 April 23

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ