AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಲ್ಲೂ ಸದ್ದು ಮಾಡಿದ ಬಾಡಿಗೆ ಮನೆ ಗೋಳು: ಇಂದಿರಾನಗರದಲ್ಲಿ ಮನೆ ಬೇಕೆಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪೋಸ್ಟರ್​ ಪ್ರದರ್ಶನ

ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್(CSK) ನಡುವೆ ನಡೆದ ಪಂದ್ಯ ವೀಕ್ಷಿಸಲು ಬಂದಿದ್ದ ಯುವಕರು ತಮಗೆ ಇಂದಿರಾನಗರದಲ್ಲಿ ಬಾಡಿಗೆ ಮನೆ ಬೇಕು ಎಂದು ಬೋರ್ಡ್ ಹಿಡಿದು ನಿಂತಿದ್ದ ಫೋಸ್ಟರ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಐಪಿಎಲ್​ನಲ್ಲೂ ಸದ್ದು ಮಾಡಿದ ಬಾಡಿಗೆ ಮನೆ ಗೋಳು: ಇಂದಿರಾನಗರದಲ್ಲಿ ಮನೆ ಬೇಕೆಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪೋಸ್ಟರ್​ ಪ್ರದರ್ಶನ
ವೈರಲ್ ಫೋಸ್ಟ್
ಆಯೇಷಾ ಬಾನು
| Updated By: ರಶ್ಮಿ ಕಲ್ಲಕಟ್ಟ|

Updated on:Apr 18, 2023 | 4:53 PM

Share

ಬೆಂಗಳೂರು: ಕನಸಿನ ನಗರಿ ಬೆಂಗಳೂರಿನಲ್ಲಿ ನಮಗೆ ಸರಿಹೊಂದುವ ಬಾಡಿಗೆ ಮನೆ(Rent House In Bengaluru) ಹುಡುಕುವುದು ಕತ್ತಲಲ್ಲಿ ಸೂಜಿ ಹುಡುಕುವಷ್ಟು ಕಷ್ಟವಾಗಿದೆ. ಅದರಲ್ಲೂ ಇಂದಿರಾನಗರದಲ್ಲಿ(Indiranagar) ಬಾಡಿಗೆ ಮನೆಗಳಿಗಾಗಿ ಯುವಕರು ಪರದಾಡುವಂತಹ ಪರಿಸ್ಥಿತಿ ಇದೆ. ಹೀಗಾಗಿ ಆಗಾಗ ಬೆಂಗಳೂರಿನಲ್ಲಿ ಮನೆ ಬೇಕು ಎಂಬ ಬಗ್ಗೆ ತಮಾಷೆಯ ಫೋಸ್ಟ್​ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಆದ್ರೆ ಈ ಬಾರಿ ಒಂದು ಹೆಜ್ಜೆ ಮುಂದಿಟ್ಟು ಐಪಿಎಲ್​ನಲ್ಲೂ ಬಾಡಿಗೆ ಮನೆಯ ಬಗ್ಗೆ ಚರ್ಚೆ ಜೋರಾಗಿದೆ.

ಸಾಮಾನ್ಯವಾಗಿ ಐಪಿಎಲ್​ನಲ್ಲಿ ಪಂದ್ಯ ಆಡುವ ಆಟಗಾರರು, ಪಂದ್ಯ ವೀಕ್ಷಿಸಲು ಬರುವ ಅಭಿಮಾನಿಗಳು ವೈರಲ್ ಆಗುತ್ತಾರೆ. ಕೆಲವೊಮ್ಮೆ ಅಭಿಮಾನಿಗಳು ವರ್ತಿಸುವ ರೀತಿಯ ವಿಡಿಯೋಗಳು ಭಾರೀ ಸದ್ದು ಮಾಡುತ್ತವೆ. ಆದ್ರೆ ನಿನ್ನೆ(ಏಪ್ರಿಲ್ 17) ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್(CSK) ನಡುವೆ ನಡೆದ ಪಂದ್ಯ ವೀಕ್ಷಿಸಲು ಬಂದಿದ್ದ ಯುವಕರು ತಮಗೆ ಇಂದಿರಾನಗರದಲ್ಲಿ ಬಾಡಿಗೆ ಮನೆ ಬೇಕು ಎಂದು ಬೋರ್ಡ್ ಹಿಡಿದು ನಿಂತಿದ್ದ ಫೋಸ್ಟರ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಕಿಡ್ನಿ ಮಾರಾಟಕ್ಕಿದೆ -ಇಂದಿರಾನಗರದಲ್ಲಿ ಬಾಡಿಗೆ ಮನೆಗೆ ಡೆಪಾಸಿಟ್ ಇಡಲು ಹಣ ಬೇಕು, ವಿಚಿತ್ರ ಪೋಸ್ಟರ್​ ವೈರಲ್

IPL ವೀಕ್ಷಿಸಲು ಬಂದ ಪ್ರೇಕ್ಷಕರೊಬ್ಬರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಂಗಳೂರಿನ ಇಂದಿರಾನಗರದಲ್ಲಿ 2 ಬಿಹೆಚ್​ಕೆ ಮನೆ ಬೇಕಿದೆ ಎಂದು ಬೋರ್ಡ್ ಹಿಡಿದು ನಿಂತಿರುವ ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗ್ತಿದೆ. ಹಾಗೂ ಈ ಬಗ್ಗೆ ಚರ್ಚೆಗಳು ಶುರುವಾಗಿವೆ. ಅನೇಕರು ಈ ಬಗ್ಗೆ ಕಮೆಂಟ್ ಮಾಡುತ್ತಿದ್ದಾರೆ. ಈ ಪೋಸ್ಟ್​ಗೆ ಪ್ರತಿಕ್ರಿಯೆ ನೀಡಿದ ಟ್ವಿಟರ್​ ಬಳಕೆದಾರರೊಬ್ಬರು, ಇಂದಿರಾನಗರದಲ್ಲಿ ಮನೆ ಹುಡುಕಲು ಇಂದಿರಾನಗರದ ಗೂಂಡಾ ಅಂದರೆ ರಾಹುಲ್ ದ್ರಾವಿಡ್ ಅವರೇ ಸಹಾಯ ಮಾಡಬಹುದು ಎಂದು ಹಾಸ್ಯ ಮಾಡಿದ್ದಾರೆ.

ಮಹಾಮಾರಿ ಕೊರೊನಾದ ನಂತರ ಬೆಂಗಳೂರು ಸಹಜ ಸ್ಥಿತಿಗೆ ಮರಳಿದ್ದು ನಗರದಲ್ಲಿ ಮನೆ ಹುಡುಕುವುದು ಕಷ್ಟಕರವಾಗಿದೆ. ಅದರಲ್ಲೂ ಬ್ಯಾಚುಲರ್ಸ್​ಗಳ ಗೋಳು ಹೇಳತೀರದು. ಮದುವೆ ಆದವರಿಗೆ ಅಥವಾ ಫ್ಯಾಮಿಲಿಗೆ ಬೇಗನೆ ಮನೆ ಸಿಗುತ್ತದೆ. ಆದರೆ ಸಿಂಗಲ್​ ಹುಡುಗರಿಗೆ ಮನೆ ನೀಡಲು ಮಾಲೀಕರು ತಕರಾರು ತೆಗೆಯುತ್ತಾರೆ.

ಬೆಂಗಳೂರಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:34 pm, Tue, 18 April 23

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?