AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಜ್ ಚೋಪ್ರಾ ಕ್ಲಾಸಿಕ್ 2025: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ, ಪಾರ್ಕಿಂಗ್ ನಿಷೇಧ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜುಲೈ 5 ರಂದು ನಡೆಯುವ ನೀರಜ್ ಚೋಪ್ರಾ ಕ್ಲಾಸಿಕ್ 2025ಗೆ ಸಂಬಂಧಿಸಿದಂತೆ, ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಜೆ 4 ರಿಂದ ರಾತ್ರಿ 10 ರವರೆಗೆ ಸಂಚಾರ ಬದಲಾವಣೆಗಳನ್ನು ಮಾಡಲಾಗಿದೆ. ಕೆಲವು ರಸ್ತೆಗಳಲ್ಲಿ ಗೂಡ್ಸ್ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ ಮತ್ತು ಪಾರ್ಕಿಂಗ್ ಸೌಲಭ್ಯಗಳ ಮಾಹಿತಿಯನ್ನು ನೀಡಲಾಗಿದೆ. ಸಾರ್ವಜನಿಕರು ಮೆಟ್ರೋ ಅಥವಾ ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ.

ನೀರಜ್ ಚೋಪ್ರಾ ಕ್ಲಾಸಿಕ್ 2025: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ, ಪಾರ್ಕಿಂಗ್ ನಿಷೇಧ
ನೀರಜ್​ ಚೋಪ್ರಾ ಕ್ಲಾಸಿಕ್​ 2025 ವಾಹನ ಸಂಚಾರ ಮಾರ್ಪಾಡು
ವಿವೇಕ ಬಿರಾದಾರ
|

Updated on:Jul 04, 2025 | 4:08 PM

Share

ಬೆಂಗಳೂರು, ಜುಲೈ 04: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಶನಿವಾರ (ಜುಲೈ. 05) ರಂದು “ಜಾವಲಿನ್ ಥ್ರೋ ಸ್ಪರ್ಧೆ- ನೀರಜ್ ಚೋಪ್ರಾ ಕ್ಲಾಸಿಕ್ 2025” (Neeraj Chopra Classic 2025) ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಜಾವಲಿನ್ ಥ್ರೋ ಆಟಗಾರ ನೀರಜ್ ಚೋಪ್ರಾ (Neeraj Chopra) ಹಾಗೂ ಇತರೆ ಅಂತರಾಷ್ಟ್ರೀಯ ಜಾವಲಿನ್ ಥ್ರೋ ಆಟಗಾರರು ಭಾಗಹಿಸುತ್ತಾರೆ. ಈ ಕಾರ್ಯಕ್ರಮದಲ್ಲಿ ಗಣ್ಯರು ಸೇರಿದಂತೆ ಸುಮಾರು 15 ರಿಂದ 16 ಸಾವಿರ ಮಂದಿ ಸಾರ್ವಜನಿಕರು ಭಾಗವಹಿಸುತ್ತಾರೆ.

ಹೀಗಾಗಿ, ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಜೆ 4ರಿಂದ ರಾತ್ರಿ 10ರ ತನಕ ಬೆಂಗಳೂರು ಸಂಚಾರಿ ಪೊಲೀಸರು ಸಂಚಾರ ಮಾರ್ಪಾಡು ಮಾಡಿದ್ದಾರೆ. ಈ ವೇಳೆ ಕ್ರೀಡಾಂಗಣದ ಸುತ್ತ ರಸ್ತೆಯಲ್ಲಿ ಗೂಡ್ಸ್ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ
Image
ಮುಚ್ಚುವ ಆತಂಕದಲ್ಲಿ ಜೀನ್ಸ್ ಉದ್ಯಮ: ಬೀದಿಗೆ ಬೀಳಲಿದೆ 2 ಲಕ್ಷ ಜನರ ಬದುಕು
Image
ಬೆಂಗಳೂರು: ಅಪಾರ್ಟ್‌ಮೆಂಟ್​ನಲ್ಲಿ ಸಿಕ್ಕ ಅಸ್ಥಿಪಂಜರ ಪ್ರಕರಣಕ್ಕೆ ಟ್ವಿಸ್ಟ್
Image
ಮತ್ತೊಂದು ಭ್ರಷ್ಟಾಚಾರ ಆರೋಪ: ಹಣ ಪಡೆದು ಮನೆ ಇದ್ದವರಿಗೇ ಮನೆ ಹಂಚಿಕೆ!
Image
ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್‌ ಕೇಸ್​: ಸ್ಪೋಟಕ ಮಾಹಿತಿ ಬಹಿರಂಗ

ವಾಹನಗಳಿಗೆ ಪಾರ್ಕಿಂಗ್ ಸ್ಥಳಗಳು

  • ಸೆಂಟ್ ಜೋಸೆಫ್ ಕಾಲೇಜ್ (ಕಾರ್ಯಕ್ರಮದ ವೀಕ್ಷಣೆಗೆ ಬರುವ ಮತ್ತು ಪಾಸ್ ಹೊಂದಿರುವ ವಾಹನಗಳಿಗೆ ಪಾರ್ಕಿಂಗ್)
  • ಯುಬಿಸಿಟಿ ಮಾಲ್ ಪಾರ್ಕಿಂಗ್ (ಪೇ ಅಂಡ್ ಪಾರ್ಕಿಂಗ್)
  • ಕಿಂಗ್ ವೇ/ ಲೇನ್ (ಪೇ ಅಂಡ್ ಪಾರ್ಕಿಂಗ್).

ಪಾರ್ಕಿಂಗ್ ನಿಷೇಧಿಸಿರುವ ರಸ್ತೆಗಳು :

  • ಕೆಬಿ ರಸ್ತೆ
  • ವಿಠಲ್ ಮಲ್ಯ ರಸ್ತೆ
  • ಆ‌ರ್.ಆ‌ರ್.ಎಂ.ಆರ್ ರಸ್ತೆ
  • ಕೆಜಿ ರಸ್ತೆ
  • ದೇವಾಂಗ ರಸ್ತೆ
  • ಎನ್.ಆರ್. ರಸ್ತೆ
  • ನೃಪತುಂಗ ರಸ್ತೆ
  • ಶೇಷಾದ್ರಿ ರಸ್ತೆ
  • ಅಂಬೇಡ್ಕ‌ರ್ ವೀದಿ (ಎರಡು ಬದಿ)

ಪರ್ಯಾಯ ಮಾರ್ಗ

ಹೆಚ್.ಎಲ್.ಡಿ ಜಂಕ್ಷನ್ ನಿಂದ ಕೆಬಿ ರಸ್ತೆಯ ಮುಖಾಂತರ ಕ್ರೀನ್ಸ್ ಜಂಕ್ಷನ್ ಮತ್ತಯ ಶಾಂತಿನಗರ ಕಡೆ ಸಂಚರಿಸುವ ಗೂಡ್ಸ್ ವಾಹನಗಳು ಹೆಚ್.ಎಲ್.ಡಿ ಜಂಕ್ಷನ್ ಬಳಿ ಬಲತಿರುವು ಪಡೆದು ಹಡ್ನನ್ ಜಂಕ್ಷನ್ ದೇವಾಂಗ್ ಜಂಕ್ಷನ್ ಎಡತಿರುವು ಮಿಷನ್ ರಸ್ತೆ-ಫೈ ಓವರ್-ರೆಸಿಡೆನ್ಸಿ ರಸ್ತೆ ಮೂಲಕ ಸಾಗುವುದು.

ರಿಚ್ಮಂಡ್​ ಜಂಕ್ಷನ್​ನಿಂದ ಮೈಸೂರು ಬ್ಯಾಂಕ್ ಕಡೆ ಸಂಚರಿಸುವ ಗೂಡ್ಸ್ ವಾಹನಗಳು ಶಾಂತಿನಗರ-ಮಿಷನ್ ಮಿಷನ್ ರಸ್ತೆ-ಸುಬ್ಬಯ್ಯ ಸರ್ಕಲ್-ಲಾಲ್‌ಬಾಗ್ ಪೂರ್ಣಿಮಾ ಜಂಕ್ಷನ್​ನಲ್ಲಿ ಬಲತಿರುವು ಪಡೆದು ಶಿವಾಜಿ ಜಂಕ್ಷನ್-ಬಲತಿರುವು-ಪುರಭವನದ ಬಳಿ ಎಡ ತಿರುವು ಪಡೆದು ಮೈಸೂರು ರಸ್ತೆ ಅಥವಾ ಎನ್.ಆರ್ ಜಂಕ್ಷನ್-ಪೊಲೀಸ್ ಠಾಣೆ ಜಂಕ್ಷನ್-ಕೆಜಿ ರಸ್ತೆ ಮುಖಾಂತರ ಮೈಸೂರು ಬ್ಯಾಂಕ್ ತಲುಪಬಹು.

ಟ್ವಿಟರ್​ ಪೋಸ್ಟ್​

ಇದನ್ನೂ ಓದಿ: ಬೆಂಗಳೂರಿಗರಿಗೆ ಗುಡ್ ನ್ಯೂಸ್: ಶೀಘ್ರವೇ ಹೆಬ್ಬಾಳ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ

ಭಾರತದಲ್ಲಿ ಮೊದಲ ಬಾರಿಗೆ ಅಂತರರಾಷ್ಟ್ರೀಯ ಜಾವೆಲಿನ್ ಥ್ರೋ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಇದಕ್ಕೆ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಅನುಮೋದನೆ ನೀಡಿದೆ. ಹೀಗಾಗಿ ಈ ಸ್ಪರ್ಧೆ ತೀವ್ರ ಕುತೂಹಲ ಕೆರಳಿಸಿದ್ದು, ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ 12 ಆಟಗಾರರು ಭಾಗವಹಿಸುತ್ತಿದ್ದಾರೆ.

ಯಾರ್ಯಾರು ಭಾಗವಹಿಸುತ್ತಿದ್ದಾರೆ?

ಇನ್ನು ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ, ಎರಡು ಬಾರಿಯ ವಿಶ್ವ ಚಾಂಪಿಯನ್ ಗ್ರೆನಡಾದ ಆಂಡರ್ಸನ್ ಪೀಟರ್ಸ್, 2016 ರ ಒಲಿಂಪಿಕ್ ಚಿನ್ನದ ಪದಕ ವಿಜೇತ ಜರ್ಮನಿಯ ಥಾಮಸ್ ರೋಹ್ಲರ್, 2015 ರ ವಿಶ್ವ ಚಾಂಪಿಯನ್ ಕೀನ್ಯಾದ ಜೂಲಿಯಸ್ ಯೆಗೊ, ಅಮೆರಿಕದ ಕರ್ಟಿಸ್ ಥಾಂಪ್ಸನ್, ಏಷ್ಯನ್ ಗೇಮ್ಸ್ ಕಂಚಿನ ಪದಕ ವಿಜೇತ ಜಪಾನ್‌ನ ಜೆಂಕಿ ಡೀನ್, ಶ್ರೀಲಂಕಾದ ರುಮೇಶ್ ಪತಿರಾಜ್ ಮತ್ತು ಬ್ರೆಜಿಲ್‌ನ ಲೂಯಿಜ್ ಮೌರಿಸಿಯೊ ಡಾ ಸಿಲ್ವಾ ಭಾಗವಹಿಸುತ್ತಿದ್ದಾರೆ. ನೀರಜ್ ಚೋಪ್ರಾ ಅವರಲ್ಲದೆ, ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಸಚಿನ್ ಯಾದವ್, ಕಿಶೋರ್ ಜೆನಾ, ರೋಹಿತ್ ಯಾದವ್ ಮತ್ತು ಸಾಹಿಲ್ ಸಿಲ್ವಾಲ್ ಭಾರತದಿಂದ ಭಾಗವಹಿಸುತ್ತಿದ್ದಾರೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Fri, 4 July 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ