AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ನಿರ್ಲಕ್ಷ್ಯ; ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿತ

ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಗರವಾಸಿಗಳು ಬಲಿಯಾಗುವುದು ಮಾತ್ರ ನಿಲ್ಲುತ್ತಿಲ್ಲ. ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚದೆ ಬಿಟ್ಟಿದ್ದರಿಂದ ಈ ಹಿಂದೆ ಅನೇಕ ಸಾವು-ನೋವುಗಳು ಸಂಭವಿಸಿದ್ದವು. ಇದೀಗ ರಸ್ತೆಗೆ ಬಾಗಿದ ಮರಗಳ ಕೊಂದೆಗಳನ್ನು ತೆರವು ಮಾಡದ ಪರಿಣಾಮ ವಾಹನ ಸವಾರರು ಭೀತಿಯಿಂದ ಹೋಗುವಂತಾಗಿದೆ.

ಬಿಬಿಎಂಪಿ ನಿರ್ಲಕ್ಷ್ಯ; ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿತ
ಬೆಂಗಳೂರಿನಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿತ
Shivaprasad B
| Edited By: Rakesh Nayak Manchi|

Updated on: Mar 22, 2024 | 8:02 AM

Share

ಬೆಂಗಳೂರು, ಮಾ.22: ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿದ ಘಟನೆ ಬೆಂಗಳೂರು (Bengaluru) ನಗರದಲ್ಲಿ ನಡೆದಿದೆ. ಮರದ ಕೊಂಬೆ ರಸ್ತೆಗೆ ಬೀಳುವಂತಿದ್ದರು ತೆರವು ಮಾಡದ ಆರೋಪ ಪ್ರಕರಣ ಸಂಬಂಧ ಖಾಸಗಿ ಶಾಲೆ ಮತ್ತು ಬಿಬಿಎಂಪಿ (BBMP) ವಿರುದ್ಧ ಆಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಗರಬಾವಿ ನಿವಾಸಿ ಚಂದನ್ ಬೆನ್ನು ಮೂಳೆ ಮುರಿತಕ್ಕೊಳಗಾದ ಬೈಕ್ ಸವಾರ. ರಿಚ್ಮಂಡ್ ರಸ್ತೆಯ ಫೈನಾನ್ಸ್ ಕಂಪನಿವೊಂದರಲ್ಲಿ ಕೆಲಸ ಮಾಡುತ್ತಿದ್ದ ಚಂದನ್ ಮಾರ್ಚ್ 7 ರಂದು ಬೆಳಗ್ಗೆ ಕಚೇರಿಗೆ ಹೋಗುತ್ತಿದ್ದರು. ಈ ವೇಳೆ ರಸ್ತೆಗೆ ಚಾಚುಕೊಂಡಿದ್ದ ಮರದ ಕೊಂಬೆ ಚಂದನ್ ಮೇಲೆ ಮುರಿದು ಬಿದ್ದಿದೆ.

ಇದನ್ನೂ ಓದಿ: ರೆಂಬೆ ಕಡಿಯಲು ಅನುಮತಿ ಪಡೆದು ಇಡೀ ಮರವನ್ನೇ ಕಡಿದ ಬಿಬಿಎಂಪಿ ಸಿಬ್ಬಂದಿ

ಕೊಂಬೆ ಮೈ ಮೇಲೆ ಬೀಳುತ್ತಿದ್ದಂತೆ ರಸ್ತೆ ಮೇಲೆ ಬಿದ್ದ ಚಂದನ್​ನ ಕುತ್ತಿಗೆ ಗಾಯವಾಗಿದೆ. ಅಲ್ಲದೆ, ಬೆನ್ನು ಮೂಳೆ ಮುರಿದಿದೆ. ಏಳೆಂಟು ನಿಮಿಷಗಳ ಕಾಲ ರಸ್ತೆಯಲ್ಲಿ ನರಳಾಡಿದ್ದ ಚಂದನ್​ನನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 14 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಂದನ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದಾರೆ. ಈ ನಡುವೆ ಆಶೋಕನಗರ ಪೊಲೀಸರಿಗೆ ಚಂದನ್​ ದೂರು ನೀಡಿದ್ದಾರೆ.

ಖಾಸಗಿ ಶಾಲೆ, ಬಿಬಿಎಂಪಿ ವಿರುದ್ಧ ಎಫ್ಐಆರ್

ಮರದ ಕೊಂಬೆ ರಸ್ತೆಗೆ ಬೀಳುವಂತಿದ್ದರೂ ಅದನ್ನು ತೆರವು ಮಾಡದೆ ನಿರ್ಲಕ್ಷ್ಯ ಮಾಡಿದ್ದಾರೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಖಾಸಗಿ ಶಾಲೆ ಹಾಗೂ ಬಿಬಿಎಂಪಿ ವಿರುದ್ಧ ಪ್ರಕರಣ ದಾಖಲುಸಿಕೊಂಡ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivaprasad B
Shivaprasad B
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ