AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ನಿರ್ಲಕ್ಷ್ಯ; ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿತ

ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಗರವಾಸಿಗಳು ಬಲಿಯಾಗುವುದು ಮಾತ್ರ ನಿಲ್ಲುತ್ತಿಲ್ಲ. ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚದೆ ಬಿಟ್ಟಿದ್ದರಿಂದ ಈ ಹಿಂದೆ ಅನೇಕ ಸಾವು-ನೋವುಗಳು ಸಂಭವಿಸಿದ್ದವು. ಇದೀಗ ರಸ್ತೆಗೆ ಬಾಗಿದ ಮರಗಳ ಕೊಂದೆಗಳನ್ನು ತೆರವು ಮಾಡದ ಪರಿಣಾಮ ವಾಹನ ಸವಾರರು ಭೀತಿಯಿಂದ ಹೋಗುವಂತಾಗಿದೆ.

ಬಿಬಿಎಂಪಿ ನಿರ್ಲಕ್ಷ್ಯ; ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿತ
ಬೆಂಗಳೂರಿನಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿತ
Shivaprasad B
| Edited By: |

Updated on: Mar 22, 2024 | 8:02 AM

Share

ಬೆಂಗಳೂರು, ಮಾ.22: ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿದ ಘಟನೆ ಬೆಂಗಳೂರು (Bengaluru) ನಗರದಲ್ಲಿ ನಡೆದಿದೆ. ಮರದ ಕೊಂಬೆ ರಸ್ತೆಗೆ ಬೀಳುವಂತಿದ್ದರು ತೆರವು ಮಾಡದ ಆರೋಪ ಪ್ರಕರಣ ಸಂಬಂಧ ಖಾಸಗಿ ಶಾಲೆ ಮತ್ತು ಬಿಬಿಎಂಪಿ (BBMP) ವಿರುದ್ಧ ಆಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಗರಬಾವಿ ನಿವಾಸಿ ಚಂದನ್ ಬೆನ್ನು ಮೂಳೆ ಮುರಿತಕ್ಕೊಳಗಾದ ಬೈಕ್ ಸವಾರ. ರಿಚ್ಮಂಡ್ ರಸ್ತೆಯ ಫೈನಾನ್ಸ್ ಕಂಪನಿವೊಂದರಲ್ಲಿ ಕೆಲಸ ಮಾಡುತ್ತಿದ್ದ ಚಂದನ್ ಮಾರ್ಚ್ 7 ರಂದು ಬೆಳಗ್ಗೆ ಕಚೇರಿಗೆ ಹೋಗುತ್ತಿದ್ದರು. ಈ ವೇಳೆ ರಸ್ತೆಗೆ ಚಾಚುಕೊಂಡಿದ್ದ ಮರದ ಕೊಂಬೆ ಚಂದನ್ ಮೇಲೆ ಮುರಿದು ಬಿದ್ದಿದೆ.

ಇದನ್ನೂ ಓದಿ: ರೆಂಬೆ ಕಡಿಯಲು ಅನುಮತಿ ಪಡೆದು ಇಡೀ ಮರವನ್ನೇ ಕಡಿದ ಬಿಬಿಎಂಪಿ ಸಿಬ್ಬಂದಿ

ಕೊಂಬೆ ಮೈ ಮೇಲೆ ಬೀಳುತ್ತಿದ್ದಂತೆ ರಸ್ತೆ ಮೇಲೆ ಬಿದ್ದ ಚಂದನ್​ನ ಕುತ್ತಿಗೆ ಗಾಯವಾಗಿದೆ. ಅಲ್ಲದೆ, ಬೆನ್ನು ಮೂಳೆ ಮುರಿದಿದೆ. ಏಳೆಂಟು ನಿಮಿಷಗಳ ಕಾಲ ರಸ್ತೆಯಲ್ಲಿ ನರಳಾಡಿದ್ದ ಚಂದನ್​ನನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 14 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಂದನ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದಾರೆ. ಈ ನಡುವೆ ಆಶೋಕನಗರ ಪೊಲೀಸರಿಗೆ ಚಂದನ್​ ದೂರು ನೀಡಿದ್ದಾರೆ.

ಖಾಸಗಿ ಶಾಲೆ, ಬಿಬಿಎಂಪಿ ವಿರುದ್ಧ ಎಫ್ಐಆರ್

ಮರದ ಕೊಂಬೆ ರಸ್ತೆಗೆ ಬೀಳುವಂತಿದ್ದರೂ ಅದನ್ನು ತೆರವು ಮಾಡದೆ ನಿರ್ಲಕ್ಷ್ಯ ಮಾಡಿದ್ದಾರೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಖಾಸಗಿ ಶಾಲೆ ಹಾಗೂ ಬಿಬಿಎಂಪಿ ವಿರುದ್ಧ ಪ್ರಕರಣ ದಾಖಲುಸಿಕೊಂಡ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?