AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ನಿರ್ಲಕ್ಷ್ಯ; ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿತ

ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಗರವಾಸಿಗಳು ಬಲಿಯಾಗುವುದು ಮಾತ್ರ ನಿಲ್ಲುತ್ತಿಲ್ಲ. ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚದೆ ಬಿಟ್ಟಿದ್ದರಿಂದ ಈ ಹಿಂದೆ ಅನೇಕ ಸಾವು-ನೋವುಗಳು ಸಂಭವಿಸಿದ್ದವು. ಇದೀಗ ರಸ್ತೆಗೆ ಬಾಗಿದ ಮರಗಳ ಕೊಂದೆಗಳನ್ನು ತೆರವು ಮಾಡದ ಪರಿಣಾಮ ವಾಹನ ಸವಾರರು ಭೀತಿಯಿಂದ ಹೋಗುವಂತಾಗಿದೆ.

ಬಿಬಿಎಂಪಿ ನಿರ್ಲಕ್ಷ್ಯ; ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿತ
ಬೆಂಗಳೂರಿನಲ್ಲಿ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿತ
Shivaprasad B
| Edited By: |

Updated on: Mar 22, 2024 | 8:02 AM

Share

ಬೆಂಗಳೂರು, ಮಾ.22: ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿದ ಘಟನೆ ಬೆಂಗಳೂರು (Bengaluru) ನಗರದಲ್ಲಿ ನಡೆದಿದೆ. ಮರದ ಕೊಂಬೆ ರಸ್ತೆಗೆ ಬೀಳುವಂತಿದ್ದರು ತೆರವು ಮಾಡದ ಆರೋಪ ಪ್ರಕರಣ ಸಂಬಂಧ ಖಾಸಗಿ ಶಾಲೆ ಮತ್ತು ಬಿಬಿಎಂಪಿ (BBMP) ವಿರುದ್ಧ ಆಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಗರಬಾವಿ ನಿವಾಸಿ ಚಂದನ್ ಬೆನ್ನು ಮೂಳೆ ಮುರಿತಕ್ಕೊಳಗಾದ ಬೈಕ್ ಸವಾರ. ರಿಚ್ಮಂಡ್ ರಸ್ತೆಯ ಫೈನಾನ್ಸ್ ಕಂಪನಿವೊಂದರಲ್ಲಿ ಕೆಲಸ ಮಾಡುತ್ತಿದ್ದ ಚಂದನ್ ಮಾರ್ಚ್ 7 ರಂದು ಬೆಳಗ್ಗೆ ಕಚೇರಿಗೆ ಹೋಗುತ್ತಿದ್ದರು. ಈ ವೇಳೆ ರಸ್ತೆಗೆ ಚಾಚುಕೊಂಡಿದ್ದ ಮರದ ಕೊಂಬೆ ಚಂದನ್ ಮೇಲೆ ಮುರಿದು ಬಿದ್ದಿದೆ.

ಇದನ್ನೂ ಓದಿ: ರೆಂಬೆ ಕಡಿಯಲು ಅನುಮತಿ ಪಡೆದು ಇಡೀ ಮರವನ್ನೇ ಕಡಿದ ಬಿಬಿಎಂಪಿ ಸಿಬ್ಬಂದಿ

ಕೊಂಬೆ ಮೈ ಮೇಲೆ ಬೀಳುತ್ತಿದ್ದಂತೆ ರಸ್ತೆ ಮೇಲೆ ಬಿದ್ದ ಚಂದನ್​ನ ಕುತ್ತಿಗೆ ಗಾಯವಾಗಿದೆ. ಅಲ್ಲದೆ, ಬೆನ್ನು ಮೂಳೆ ಮುರಿದಿದೆ. ಏಳೆಂಟು ನಿಮಿಷಗಳ ಕಾಲ ರಸ್ತೆಯಲ್ಲಿ ನರಳಾಡಿದ್ದ ಚಂದನ್​ನನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 14 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಂದನ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದಾರೆ. ಈ ನಡುವೆ ಆಶೋಕನಗರ ಪೊಲೀಸರಿಗೆ ಚಂದನ್​ ದೂರು ನೀಡಿದ್ದಾರೆ.

ಖಾಸಗಿ ಶಾಲೆ, ಬಿಬಿಎಂಪಿ ವಿರುದ್ಧ ಎಫ್ಐಆರ್

ಮರದ ಕೊಂಬೆ ರಸ್ತೆಗೆ ಬೀಳುವಂತಿದ್ದರೂ ಅದನ್ನು ತೆರವು ಮಾಡದೆ ನಿರ್ಲಕ್ಷ್ಯ ಮಾಡಿದ್ದಾರೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಖಾಸಗಿ ಶಾಲೆ ಹಾಗೂ ಬಿಬಿಎಂಪಿ ವಿರುದ್ಧ ಪ್ರಕರಣ ದಾಖಲುಸಿಕೊಂಡ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್