AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಫ್ಲೈಓವರ್ ಸೇರಿದಂತೆ ಟೋಲ್​​​ಗಳ ಸುಂಕವನ್ನು ಹೆಚ್ಚಳ ಮಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು ಫ್ಲೈಓರ್ ಸೇರಿದಂತೆ ಟೋಲ್ ಸುಂಕವನ್ನು NHIA ಶೇ 25 ರಷ್ಟು ಹೆಚ್ಚಳ ಮಾಡಿದ್ದು ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ಐದು ರೂಪಾಯಿ ಟೋಲ್​​ ಸುಂಕ ಹೆಚ್ಚಳವಾಗಿದೆ.

ಬೆಂಗಳೂರು ಫ್ಲೈಓವರ್ ಸೇರಿದಂತೆ ಟೋಲ್​​​ಗಳ ಸುಂಕವನ್ನು ಹೆಚ್ಚಳ ಮಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಪ್ರಾತಿನಿಧಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Jul 01, 2022 | 6:07 PM

Share

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು ಫ್ಲೈಓವರ್ ಸೇರಿದಂತೆ ಟೋಲ್ ಸುಂಕವನ್ನು NHIA ಶೇ 25 ರಷ್ಟು ಹೆಚ್ಚಳ ಮಾಡಿದ್ದು ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ಐದು ರೂಪಾಯಿ ಟೋಲ್​​ ಸುಂಕ ಹೆಚ್ಚಳವಾಗಿದೆ. ನಿನ್ನೆಯವರೆಗೂ (ಜೂನ್​ 30) 20 ರೂಪಾಯಿ ಟೋಲ್ ನೀಡಿ ಫ್ಲೈಓವರ್ ಬಳಸುತ್ತಿದ್ದ ವಾಹನ ಸವಾರರು ಈಗ 25 ರೂ ನೀಡುತ್ತಿದ್ದಾರೆ. ಇದರಿಂದ ದ್ವಿಚಕ್ರ ವಾಹನ ಸವಾರರು ಫುಲ್​​ ಗರಂ ಆಗಿದ್ದಾರೆ. ದ್ವಿಚಕ್ರ ವಾಹನ ಸವಾರರು ಜುಲೈ 1 ರಿಂದ ಫ್ಲೈಓವರ್ ಬಳಸಿದರೆ 25 ರೂ ಸಿಂಗಲ್ ಟಿಕೆಟ್ ಪಡೆಯಬೇಕು. 35 ರೂಪಾಯಿ‌‌ ನೀಡಿದರೆ 12 ಗಂಟೆಯ ವರೆಗೆ ಫ್ಲೈಓವರ್ ಬಳಸಬಹುದಾಗಿದೆ.

ಇದನ್ನು ಓದಿ: Petrol Price Today: ಬೆಂಗಳೂರು, ಮುಂಬೈ ಸೇರಿ ವಿವಿಧೆಡೆ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ವಾಣಿಜ್ಯ ಸಂಬಂಧಿತ ವಾಹನಗಳಿಗೂ ಟ್ಯಾಕ್ಸ್ ಹೊರೆ ಬಿದ್ದಿದ್ದು, ಕಾರು (ಸಿಂಗಲ್ ಪಾಸ್​) 60 ರೂಪಾಯಿ ನೀಡಬೇಕು. ವಾಣಿಜ್ಯ ಬಳಕೆಯ ವಾಹನ (ಸಿಂಗಲ್ ಪಾಸ್​) 85 ರೂ, ಟ್ರಕ್​, ಬಸ್​(ಸಿಂಗಲ್ ಪಾಸ್​) 170 ರೂಪಾಯಿ, ಭಾರಿ ವಾಹನಗಳಿಗೆ 335 ರೂಪಾಯಿ ನೀಡಿ ಕೇವಲ ಸಿಂಗಲ್‌ ಪಾಸ್ ಪಡೆಯಬಹುದಾಗಿದೆ. ಒಂದು ದಿನದ ಪಾಸ್​​ಗೆ ದ್ವಿಚಕ್ರವಾಹನ 35, ಕಾರು 90,‌ ವಾಣಿಜ್ಯ ವಾಹನ 125, ಟ್ರಕ್,‌ ಬಸ್‌ 250, ಭಾರೀ ವಾಹನ 505 ರೂ ನೀಡಬೇಕಾಗಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ‌ ನಿರ್ಧಾರಕ್ಕೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Published On - 5:12 pm, Fri, 1 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ