AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಫ್ಲೈಓವರ್ ಸೇರಿದಂತೆ ಟೋಲ್​​​ಗಳ ಸುಂಕವನ್ನು ಹೆಚ್ಚಳ ಮಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು ಫ್ಲೈಓರ್ ಸೇರಿದಂತೆ ಟೋಲ್ ಸುಂಕವನ್ನು NHIA ಶೇ 25 ರಷ್ಟು ಹೆಚ್ಚಳ ಮಾಡಿದ್ದು ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ಐದು ರೂಪಾಯಿ ಟೋಲ್​​ ಸುಂಕ ಹೆಚ್ಚಳವಾಗಿದೆ.

ಬೆಂಗಳೂರು ಫ್ಲೈಓವರ್ ಸೇರಿದಂತೆ ಟೋಲ್​​​ಗಳ ಸುಂಕವನ್ನು ಹೆಚ್ಚಳ ಮಾಡಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 01, 2022 | 6:07 PM

Share

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು ಫ್ಲೈಓವರ್ ಸೇರಿದಂತೆ ಟೋಲ್ ಸುಂಕವನ್ನು NHIA ಶೇ 25 ರಷ್ಟು ಹೆಚ್ಚಳ ಮಾಡಿದ್ದು ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ಐದು ರೂಪಾಯಿ ಟೋಲ್​​ ಸುಂಕ ಹೆಚ್ಚಳವಾಗಿದೆ. ನಿನ್ನೆಯವರೆಗೂ (ಜೂನ್​ 30) 20 ರೂಪಾಯಿ ಟೋಲ್ ನೀಡಿ ಫ್ಲೈಓವರ್ ಬಳಸುತ್ತಿದ್ದ ವಾಹನ ಸವಾರರು ಈಗ 25 ರೂ ನೀಡುತ್ತಿದ್ದಾರೆ. ಇದರಿಂದ ದ್ವಿಚಕ್ರ ವಾಹನ ಸವಾರರು ಫುಲ್​​ ಗರಂ ಆಗಿದ್ದಾರೆ. ದ್ವಿಚಕ್ರ ವಾಹನ ಸವಾರರು ಜುಲೈ 1 ರಿಂದ ಫ್ಲೈಓವರ್ ಬಳಸಿದರೆ 25 ರೂ ಸಿಂಗಲ್ ಟಿಕೆಟ್ ಪಡೆಯಬೇಕು. 35 ರೂಪಾಯಿ‌‌ ನೀಡಿದರೆ 12 ಗಂಟೆಯ ವರೆಗೆ ಫ್ಲೈಓವರ್ ಬಳಸಬಹುದಾಗಿದೆ.

ಇದನ್ನು ಓದಿ: Petrol Price Today: ಬೆಂಗಳೂರು, ಮುಂಬೈ ಸೇರಿ ವಿವಿಧೆಡೆ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ವಾಣಿಜ್ಯ ಸಂಬಂಧಿತ ವಾಹನಗಳಿಗೂ ಟ್ಯಾಕ್ಸ್ ಹೊರೆ ಬಿದ್ದಿದ್ದು, ಕಾರು (ಸಿಂಗಲ್ ಪಾಸ್​) 60 ರೂಪಾಯಿ ನೀಡಬೇಕು. ವಾಣಿಜ್ಯ ಬಳಕೆಯ ವಾಹನ (ಸಿಂಗಲ್ ಪಾಸ್​) 85 ರೂ, ಟ್ರಕ್​, ಬಸ್​(ಸಿಂಗಲ್ ಪಾಸ್​) 170 ರೂಪಾಯಿ, ಭಾರಿ ವಾಹನಗಳಿಗೆ 335 ರೂಪಾಯಿ ನೀಡಿ ಕೇವಲ ಸಿಂಗಲ್‌ ಪಾಸ್ ಪಡೆಯಬಹುದಾಗಿದೆ. ಒಂದು ದಿನದ ಪಾಸ್​​ಗೆ ದ್ವಿಚಕ್ರವಾಹನ 35, ಕಾರು 90,‌ ವಾಣಿಜ್ಯ ವಾಹನ 125, ಟ್ರಕ್,‌ ಬಸ್‌ 250, ಭಾರೀ ವಾಹನ 505 ರೂ ನೀಡಬೇಕಾಗಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ‌ ನಿರ್ಧಾರಕ್ಕೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Published On - 5:12 pm, Fri, 1 July 22

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್