ನೆಲಮಂಗಲ: ಚೀಟಿ ಹೆಸರಲ್ಲಿ ದಂಪತಿ ಸೇರಿ ಕುಟುಂಬಸ್ಥರಿಂದ ಕೋಟ್ಯಾಂತರ ರೂಪಾಯಿ ವಂಚನೆ: ದೂರು ದಾಖಲು

ಚೀಟಿ ಹೆಸರಲ್ಲಿ ದಂಪತಿ ಸೇರಿ ಕುಟುಂಬಸ್ಥರಿಂದ ಕೋಟ್ಯಾಂತರ ಹಣ ಮೋಸ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆರೆಗುಡ್ಡದಹಳ್ಳಿಯಲ್ಲಿ ನಡೆದಿದೆ. ವಿಶ್ವನಾಥ್ ಹಾಗೂ ವನಿತಾ ವಂಚಿಸಿದ ದಂಪತಿಗಳು. ಇದೀಗ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೆಲಮಂಗಲ: ಚೀಟಿ ಹೆಸರಲ್ಲಿ ದಂಪತಿ ಸೇರಿ ಕುಟುಂಬಸ್ಥರಿಂದ ಕೋಟ್ಯಾಂತರ ರೂಪಾಯಿ ವಂಚನೆ: ದೂರು ದಾಖಲು
ಪ್ರಾತಿನಿಧಿಕ ಚಿತ್ರ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 03, 2023 | 7:32 PM

ಬೆಂಗಳೂರು ಉತ್ತರ, ಸೆ.03: ಮೋಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಇರುತ್ತಾರೆ ಎಂಬ ಮಾತಿಗೆ ತಕ್ಕ ಉದಾಹರಣೆ ಇಲ್ಲಿದೆ. ಹೌದು, ಚೀಟಿ ಹೆಸರಲ್ಲಿ ದಂಪತಿ ಸೇರಿ ಕುಟುಂಬಸ್ಥರಿಂದ ಕೋಟ್ಯಾಂತರ ಹಣ ಮೋಸ ಮಾಡಿದ ಘಟನೆ ಬೆಂಗಳೂರು ಉತ್ತರ (Bengaluru North) ತಾಲೂಕಿನ ಕೆರೆಗುಡ್ಡದಹಳ್ಳಿಯಲ್ಲಿ ನಡೆದಿದೆ. ವಿಶ್ವನಾಥ್ ಹಾಗೂ ವನಿತಾ ವಂಚಿಸಿದ ದಂಪತಿಗಳು. ಇವರು ಸ್ವಂತ ಐಶಾರಾಮಿ ಮನೆ, ವಾಣಿಜ್ಯ ಮಳಿಗೆ ತೋರಿಸಿ ಚೀಟಿ ಹಾಕಿಸಿಕೊಂಡು ಬರೋಬ್ಬರಿ 6 ಕೋಟಿಗೂ ಹೆಚ್ಚಿನ ಹಣ ವಂಚನೆ ಮಾಡಿದ್ದಾರೆ. ಇದೀಗ ಚೀಟಿ ಹಾಕಿದ ಜನರು ಅವರ ಮನೆ ಬಳಿ ಬಂದು ಗೋಳಾಟ ನಡೆಸಿದ್ದಾರೆ.

ದೊಡ್ಡ ಅಧಿಕಾರಿಗಳನ್ನೆ ಟಾರ್ಗೆಟ್ ಮಾಡಿದ್ದ ದಂಪತಿ

ಇನ್ನು ಇವರು ವಕೀಲರು, ಡಾಕ್ಟರ್, ಉದ್ಯಮಿಗಳನ್ನು ಸೇರಿದಂತೆ ದೊಡ್ಡ ಅಧಿಕಾರಿಗಳನ್ನೇ ಟಾರ್ಗೆಟ್​ ಮಾಡಿದ ದಂಪತಿ. ಅವರಿಂದ ಚೀಟಿ ಹಾಕಿಸಿಕೊಂಡು ಇದೀಗ ತಿಂಗಳಿಂದ ಮನೆಗೆ ಬೀಗ ಜಡಿದು ಪರಾರಿಯಾಗಿದ್ದಾರೆ. ಕುಟುಂಬದ ವಿಶ್ವನಾಥ್, ವನಿತಾ, ಮಂಜುನಾಥ್‌, ಮುನಿಸ್ವಾಮಿ, ಲಕ್ಷ್ಮಿ ನಾರಾಯಣ, ವೆಂಕಟರಮಣಪ್ಪ, ವಸಂತರಾಜ್ ಮತ್ತು ಬಾಲಾಜಿ ಸೇರಿದಂತೆ ಒಟ್ಟು 8ಜನ ಕುಟುಂಬಸ್ಥರ ಮೇಲೆ ಇದೀಗ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:Chit Cheat: ವರಮಹಾಲಕ್ಷ್ಮಿ ಹಬ್ಬಕ್ಕೆ ಷಾಕ್! ಚೀಟಿ ಹೆಸರಿನಲ್ಲಿ 3 ಕೋಟಿ ಪಂಗನಾಮ, ಹಣ ಕಳೆದುಕೊಂಡು ಚಿಂತಾಮಣಿ ಪೊಲೀಸರ ಮೊರೆ ಹೋದ 40 ಮಹಿಳೆಯರು

ನೀರು ಪೂರೈಕೆ ಮತ್ತು ವಿದ್ಯುತ್ ಗಾಗಿ ಅಗ್ರಹಿಸಿ ರಸ್ತೆ ತಡೆದು ರೈತರ ಪ್ರತಿಭಟನೆ

ಶಿವಮೊಗ್ಗ: ನೀರು ಪೂರೈಕೆ ಮತ್ತು ವಿದ್ಯುತ್​ಗಾಗಿ ಅಗ್ರಹಿಸಿ ರಸ್ತೆ ತಡೆದು ರೈತರು ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಗಾಮಾ ಕ್ರಾಸ್ ಬಳಿ ನಡೆದಿದೆ. ಹೌದು, ಅಂಜನಾಪುರ ಡ್ಯಾಂ ನಿಂದ ನಾಲೆಗೆ ನೀರು ಬಿಡುಗಡೆ ಮತ್ತು ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ, ಸಾಗರ-ಶಿಕಾರಿಪುರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ತಾಲೂಕಿನ ಅತ್ಯಂತ ವಾಡಿಕೆಯಂತೆ ಮಳೆ ಬಾರದ ಹಿನ್ನೆಲೆ ಮೆಕ್ಕೆಜೋಳ ಭತ್ತದ ನಾಟಿ ಮಾಡಿರುವ ರೈತರ ಜಮೀನುಗಳಿಗೆ ನೀರಿನ ಕೊರತೆ ಎದಿರಾಗಿದೆ. ಹೀಗಾಗಿ ಕಂಗಲಾಗಿರುವ ಗ್ರಾಮದ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us