AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಬಸ್​ಪೇಟೆ ಬಳಿ ಆ್ಯಂಬುಲೆನ್ಸ್ ಅಪಘಾತ: ಐದು ಗಾಯಾಳುಗಳ ಪೈಕಿ ಇಬ್ಬರು ರೋಗಿಗಳ ಸಾವು

ಅಪಘಾತದಲ್ಲಿ ರೋಗಿ ಅಸಿನಾ‌ಗೆ ಸುಟ್ಟ ಗಾಯಗಳಾಗಿದ್ದವು. ಅಸೀನಾ ಸಂಬಂಧಿ ಸಾದಿಕ್‌ಗೆ ಗಂಭೀರ ಗಾಯಗಳಾಗಿದ್ದವು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಇಬ್ಬರೂ ಕೊನೆಯುಸಿರೆಳೆದಿದ್ದಾರೆ. ಮೃತ ದೇಹಗಳನ್ನ ತುಮಕೂರಿನ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ದಾಬಸ್​ಪೇಟೆ ಬಳಿ ಆ್ಯಂಬುಲೆನ್ಸ್ ಅಪಘಾತ: ಐದು ಗಾಯಾಳುಗಳ ಪೈಕಿ ಇಬ್ಬರು ರೋಗಿಗಳ ಸಾವು
ದಾಬಸ್​ಪೇಟೆ ಬಳಿ ಲಾರಿ ಡಿಕ್ಕಿಯಾಗಿ ಆ್ಯಂಬುಲೆನ್ಸ್​ನಲ್ಲಿದ್ದ ಐವರ ಪೈಕಿ ಇಬ್ಬರ ಸಾವು
ಸಾಧು ಶ್ರೀನಾಥ್​
|

Updated on: May 01, 2021 | 8:51 AM

Share

ನೆಲಮಂಗಲ: ಶುಕ್ರವಾರ ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ದಾಬಸ್ ಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಆ್ಯಂಬುಲೆನ್ಸ್​ನಲ್ಲಿದ್ದ ಐವರ ಸ್ಥಿತಿ ಗಂಭೀರವಾಗಿತ್ತು. ಗಾಯಾಳು ಪೈಕಿ ಇಬ್ಬರು ರೋಗಿಗಳು ಸಾವಿಗೀಡಾಗಿದ್ದಾರೆ. ರೋಗಿ ಅಸೀನಾ (40) ಮತ್ತು ಸಾದಿಕ್ (23) ಮೃತಪಟ್ಟವರು.

ಅಪಘಾತದಲ್ಲಿ ರೋಗಿ ಅಸಿನಾ‌ಗೆ ಸುಟ್ಟ ಗಾಯಗಳಾಗಿದ್ದವು. ಅಸೀನಾ ಸಂಬಂಧಿ ಸಾದಿಕ್‌ಗೆ ಗಂಭೀರ ಗಾಯಗಳಾಗಿದ್ದವು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಇಬ್ಬರೂ ಕೊನೆಯುಸಿರೆಳೆದಿದ್ದಾರೆ. ಮೃತ ದೇಹಗಳನ್ನ ತುಮಕೂರಿನ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ನಿನ್ನೆ ಸಂಜೆ ಅಪಘಾತವಾದ ಬಳಿಕ ಗಾಯಾಳುಗಳಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯ ಬಳಿಕ ನೆಲಮಂಗಲ ಸಾರ್ವಜನಿಕ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಗಂಭೀರವಾಗಿ ಗಾಯಗೊಂಡ ಮಹಿಳೆಯರಿಬ್ಬರು, ಕಾಲು ಮುರಿದ ಗಾಯಾಳು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.

ಲಾರಿ ತುಮಕೂರಿನಿಂದ ಬೆಂಗಳೂರಿಗೆ ಬರುವಾಗ ಅಪಘಾತ ಸಂಭವಿಸಿತ್ತು. ಅಪಘಾತದ ಬಳಿಕ ಲಾರಿ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಅಪಘಾತ ಬಳಿಕ ಆ್ಯಂಬುಲೆನ್ಸ್​​ಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸ್ಥಳೀಯ ನಿವಾಸಿಗಳು ಬೆಂಕಿಯನ್ನ ನಂದಿಸಿದ್ದರು.

ಆ್ಯಂಬುಲೆನ್ಸ್​​ನಲ್ಲಿದ್ದ ಅಸೀನಾ (50), ಶಬೀನಾ (45) ಇಬ್ಬರಿಗೂ ಸುಟ್ಟ ಗಾಯಗಳಾಗಿದ್ದವು. ಸಲ್ಮಾನ್ (20) ಮತ್ತು ಆಂಬುಲೆನ್ಸ್ ಚಾಲಕ ಸಾದಿಖ್ (20) ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

(nelamangala dabaspet road accident lorry rams in to ambulance seriously injured 2 persons died)

ಇದನ್ನೂ ಓದಿ: ನೆಲಮಂಗಲದಲ್ಲಿ ಎರಡು ಪ್ರತ್ಯೇಕ ಭೀಕರ ಅಪಘಾತ.. ಕಾರಿನ ಚಾಲಕ ದುರ್ಮರಣ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್