AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಸಿನೆಮಾ ನಟನ ಹೆಸರು ಬಳಸಿಕೊಂಡು ಸೈಟ್​​ ಕೊಡಿಸುವುದಾಗಿ ವಂಚನೆ; ದಂಪತಿ ವಿರುದ್ದ ಎಫ್​​ಐಆರ್​​ ದಾಖಲು

ಖ್ಯಾತ ಸಿನಿಮಾ ನಟನ ಆಪ್ತ ಅಂತ ಹೇಳಿಕೊಂಡು ಸೈಟ್ ಕೊಡಿಸುವುದಾಗಿ ಸಾಕಷ್ಟು ಜನರಿಗೆ ದಂಪತಿ ಕೋಟ್ಯಂತರ ರೂ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಪೌರಕಾರ್ಮಿಕರು ಸೇರಿ ಹಲವರಿಗೆ ಸೈಟ್ ನೀಡದೆ ಹಣ ವಸೂಲಿ ಆರೋಪ ಕೇಳಿಬಂದಿದೆ. ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ಸಿನೆಮಾ ನಟನ ಹೆಸರು ಬಳಸಿಕೊಂಡು ಸೈಟ್​​ ಕೊಡಿಸುವುದಾಗಿ ವಂಚನೆ; ದಂಪತಿ ವಿರುದ್ದ ಎಫ್​​ಐಆರ್​​ ದಾಖಲು
ವಂಚಿಸಿದ ದಂಪತಿ
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 13, 2025 | 3:36 PM

Share

ನೆಲಮಂಗಲ, ನವೆಂಬರ್​ 13: ಸಿನೆಮಾ ನಟನ ಹೆಸರು ಬಳಸಿಕೊಂಡು ಸೈಟ್​​ (Land Scam) ಕೊಡಿಸುವುದಾಗಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ ವಂಚಿಸಿರುವಂತಹ ಘಟನೆ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ. ನಟ ದುನಿಯಾ ವಿಜಯ್​ ಹೆಸರು ಬಳಸಿಕೊಂಡು ಸುಕನ್ಯಾ ಮತ್ತು ನರಸಿಂಹ ಎಂಬುವವರು ವಂಚಿಸಿರುವುದಾಗಿ ಮಹಿಳೆ ಗಂಗಮ್ಮ ಅವರು ಆರೋಪಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ವಂಚಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಅಮಾಯಕರಿಗೆ ಉಂಡೆ ನಾಮ

ನರಸಿಂಹ ಲಕ್ಷ್ಮೀ ಪ್ರಸಾದ್​​ ಫೈನಾನ್ಸ್​ ನಡೆಸುತ್ತಿದ್ದರು. ತಮ್ಮ ವ್ಯವಹಾರಕ್ಕೆ ಸಿನೆಮಾ ನಟನ ಹೆಸರು ಬಳಸಿಕೊಂಡಿದ್ದರು. ರಿಯಲ್ ಎಸ್ಟೇಟ್ ಉದ್ಯಮಿಯಾಗಲು ಹೊರಟವರು ಅಮಾಯಕರಿಗೆ ಉಂಡೆ ನಾಮ ಹಾಕಿದ್ದಾರೆ. ಇವರ ಮಾತನ್ನು ನಂಬಿ ಸಾಕಷ್ಟು ಜನರು ಹಣ ಕಳೆದುಕೊಂಡಿದ್ದಾರೆ. ಕೋಟ್ಯಂತರ ರೂ  ವಂಚನೆ ಮಾಡಿದವರ ವಿರುದ್ದ ಸದ್ಯ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: ನಟ ಉಪೇಂದ್ರ ದಂಪತಿ ಮೊಬೈಲ್​ ಹ್ಯಾಕ್​ ಕೇಸ್​: ಆರೋಪಿ ಅರೆಸ್ಟ್​; ಶಾಕಿಂಗ್​ ವಿಚಾರ ಬಿಚ್ಚಿಟ್ಟ ಖಾಕಿ

ನಟ ದುನಿಯಾ ವಿಜಿ ಜೊತೆ ಫೊಟೊತೆಗೆಸಿಕೊಂಡವರ ಹೆಸರು ನರಸಿಂಹ. ಇವರು ಸೋಲದೇವನಹಳ್ಳಿ ಪೊಲೀಸ್ ಠಾಣಾವ್ಯಾಪ್ತಿಯ ಚಿಕ್ಕಸಂದ್ರದ ನಿವಾಸಿಯಾಗಿದ್ದು, ತನ್ನ ಪತ್ನಿ ಸುಕನ್ಯಾ ಜೊತೆ ಲಕ್ಷ್ಮೀ ಫೈನಾನ್ ನಡೆಸುತ್ತಿದ್ದರು. ಗಂಗಮ್ಮ ಎಂಬುವವರು ಹಣ ಉಳಿತಾಯ ಮಾಡುವ ಸಲುವಾಗಿ ಮಹಿಳೆಯರನ್ನು ಒಟ್ಟುಗೂಡಿಸಿ ತಿಂಗಳಿಗೆ 300 ರೂ ಹಣ ಕಟ್ಟುವ ವ್ಯವಹಾರ ಮಾಡಿಕೊಂಡಿದ್ದರು. ಈ ಮಹಿಳಾ ಗ್ಯಾಂಗ್​​ಗೆ​ಸೈಟ್ ಮೇಲೆ ಹಣ ಇನ್ವೆಸ್ಟ ಮಾಡುವಂತೆ ಸುಕನ್ಯಾ ಪುಸಲಾಯಿಸಿದ್ದರು.

Duniya Vijay

ದುನಿಯಾ ವಿಜಯರೊಂದಿಗೆ ನರಸಿಂಹ

ಇತ್ತ ನರಸಿಂಹ ನನಗೆ ದುನಿಯಾವಿಜಿ ತುಂಬಾ ಆಪ್ತರು ಅಂತೆಲ್ಲಾ ಕಥೆ ಕಟ್ಟಿ ಫೋಟೋ ತೋರಿಸಿದ್ದರು. ಇದನ್ನ ನಂಬಿದ ಕೆಲವರು ದೊಡ್ಡ ವ್ಯಕ್ತಿ ಇರಬೇಕು ಅಂತ ಹೇಳಿ ದೊಡ್ಡಬಳ್ಳಾಪುರದಲ್ಲಿ ಲೇಔಟ್ ಮಾಡಲಾಗಿದೆ ಅಂತ ಹೇಳಿ ಹಣ ಪಡೆದಿದ್ದರು. ಸದ್ಯ 5 ರಿಂದ 6 ಜನರಿಗೆ ಮೋಸ ಮಾಡಲಾಗಿದೆ.

ಇದನ್ನೂ ಓದಿ: Bengaluru: ನಕಲಿ ಬಿಲ್​ ಸೃಷ್ಟಿಸಿ ಸಿಎಂ ಪರಿಹಾರ ನಿಧಿ ಪಡೆಯುತ್ತಿದ್ದ ಆರೋಪಿ ಅಂದರ್​

ಒಟ್ಟಿನಲ್ಲಿ ಸಿನಿಮಾ ನಟನ ಹೆಸರು ಹೇಳಿಕೊಂಡು ಕೋಟ್ಯಂತರ ರೂ ಮೋಸ ಮಾಡಿರುವ ದಂಪತಿ ವಿರುದ್ದ ಸೋಲದೇವನಹಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:35 pm, Thu, 13 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ