AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಸಿನೆಮಾ ನಟನ ಹೆಸರು ಬಳಸಿಕೊಂಡು ಸೈಟ್​​ ಕೊಡಿಸುವುದಾಗಿ ವಂಚನೆ; ದಂಪತಿ ವಿರುದ್ದ ಎಫ್​​ಐಆರ್​​ ದಾಖಲು

ಖ್ಯಾತ ಸಿನಿಮಾ ನಟನ ಆಪ್ತ ಅಂತ ಹೇಳಿಕೊಂಡು ಸೈಟ್ ಕೊಡಿಸುವುದಾಗಿ ಸಾಕಷ್ಟು ಜನರಿಗೆ ದಂಪತಿ ಕೋಟ್ಯಂತರ ರೂ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಪೌರಕಾರ್ಮಿಕರು ಸೇರಿ ಹಲವರಿಗೆ ಸೈಟ್ ನೀಡದೆ ಹಣ ವಸೂಲಿ ಆರೋಪ ಕೇಳಿಬಂದಿದೆ. ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ಸಿನೆಮಾ ನಟನ ಹೆಸರು ಬಳಸಿಕೊಂಡು ಸೈಟ್​​ ಕೊಡಿಸುವುದಾಗಿ ವಂಚನೆ; ದಂಪತಿ ವಿರುದ್ದ ಎಫ್​​ಐಆರ್​​ ದಾಖಲು
ವಂಚಿಸಿದ ದಂಪತಿ
ಮಂಜುನಾಥ ಕೆಬಿ
| Edited By: |

Updated on:Nov 13, 2025 | 3:36 PM

Share

ನೆಲಮಂಗಲ, ನವೆಂಬರ್​ 13: ಸಿನೆಮಾ ನಟನ ಹೆಸರು ಬಳಸಿಕೊಂಡು ಸೈಟ್​​ (Land Scam) ಕೊಡಿಸುವುದಾಗಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ ವಂಚಿಸಿರುವಂತಹ ಘಟನೆ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ. ನಟ ದುನಿಯಾ ವಿಜಯ್​ ಹೆಸರು ಬಳಸಿಕೊಂಡು ಸುಕನ್ಯಾ ಮತ್ತು ನರಸಿಂಹ ಎಂಬುವವರು ವಂಚಿಸಿರುವುದಾಗಿ ಮಹಿಳೆ ಗಂಗಮ್ಮ ಅವರು ಆರೋಪಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ವಂಚಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಅಮಾಯಕರಿಗೆ ಉಂಡೆ ನಾಮ

ನರಸಿಂಹ ಲಕ್ಷ್ಮೀ ಪ್ರಸಾದ್​​ ಫೈನಾನ್ಸ್​ ನಡೆಸುತ್ತಿದ್ದರು. ತಮ್ಮ ವ್ಯವಹಾರಕ್ಕೆ ಸಿನೆಮಾ ನಟನ ಹೆಸರು ಬಳಸಿಕೊಂಡಿದ್ದರು. ರಿಯಲ್ ಎಸ್ಟೇಟ್ ಉದ್ಯಮಿಯಾಗಲು ಹೊರಟವರು ಅಮಾಯಕರಿಗೆ ಉಂಡೆ ನಾಮ ಹಾಕಿದ್ದಾರೆ. ಇವರ ಮಾತನ್ನು ನಂಬಿ ಸಾಕಷ್ಟು ಜನರು ಹಣ ಕಳೆದುಕೊಂಡಿದ್ದಾರೆ. ಕೋಟ್ಯಂತರ ರೂ  ವಂಚನೆ ಮಾಡಿದವರ ವಿರುದ್ದ ಸದ್ಯ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: ನಟ ಉಪೇಂದ್ರ ದಂಪತಿ ಮೊಬೈಲ್​ ಹ್ಯಾಕ್​ ಕೇಸ್​: ಆರೋಪಿ ಅರೆಸ್ಟ್​; ಶಾಕಿಂಗ್​ ವಿಚಾರ ಬಿಚ್ಚಿಟ್ಟ ಖಾಕಿ

ನಟ ದುನಿಯಾ ವಿಜಿ ಜೊತೆ ಫೊಟೊತೆಗೆಸಿಕೊಂಡವರ ಹೆಸರು ನರಸಿಂಹ. ಇವರು ಸೋಲದೇವನಹಳ್ಳಿ ಪೊಲೀಸ್ ಠಾಣಾವ್ಯಾಪ್ತಿಯ ಚಿಕ್ಕಸಂದ್ರದ ನಿವಾಸಿಯಾಗಿದ್ದು, ತನ್ನ ಪತ್ನಿ ಸುಕನ್ಯಾ ಜೊತೆ ಲಕ್ಷ್ಮೀ ಫೈನಾನ್ ನಡೆಸುತ್ತಿದ್ದರು. ಗಂಗಮ್ಮ ಎಂಬುವವರು ಹಣ ಉಳಿತಾಯ ಮಾಡುವ ಸಲುವಾಗಿ ಮಹಿಳೆಯರನ್ನು ಒಟ್ಟುಗೂಡಿಸಿ ತಿಂಗಳಿಗೆ 300 ರೂ ಹಣ ಕಟ್ಟುವ ವ್ಯವಹಾರ ಮಾಡಿಕೊಂಡಿದ್ದರು. ಈ ಮಹಿಳಾ ಗ್ಯಾಂಗ್​​ಗೆ​ಸೈಟ್ ಮೇಲೆ ಹಣ ಇನ್ವೆಸ್ಟ ಮಾಡುವಂತೆ ಸುಕನ್ಯಾ ಪುಸಲಾಯಿಸಿದ್ದರು.

Duniya Vijay

ದುನಿಯಾ ವಿಜಯರೊಂದಿಗೆ ನರಸಿಂಹ

ಇತ್ತ ನರಸಿಂಹ ನನಗೆ ದುನಿಯಾವಿಜಿ ತುಂಬಾ ಆಪ್ತರು ಅಂತೆಲ್ಲಾ ಕಥೆ ಕಟ್ಟಿ ಫೋಟೋ ತೋರಿಸಿದ್ದರು. ಇದನ್ನ ನಂಬಿದ ಕೆಲವರು ದೊಡ್ಡ ವ್ಯಕ್ತಿ ಇರಬೇಕು ಅಂತ ಹೇಳಿ ದೊಡ್ಡಬಳ್ಳಾಪುರದಲ್ಲಿ ಲೇಔಟ್ ಮಾಡಲಾಗಿದೆ ಅಂತ ಹೇಳಿ ಹಣ ಪಡೆದಿದ್ದರು. ಸದ್ಯ 5 ರಿಂದ 6 ಜನರಿಗೆ ಮೋಸ ಮಾಡಲಾಗಿದೆ.

ಇದನ್ನೂ ಓದಿ: Bengaluru: ನಕಲಿ ಬಿಲ್​ ಸೃಷ್ಟಿಸಿ ಸಿಎಂ ಪರಿಹಾರ ನಿಧಿ ಪಡೆಯುತ್ತಿದ್ದ ಆರೋಪಿ ಅಂದರ್​

ಒಟ್ಟಿನಲ್ಲಿ ಸಿನಿಮಾ ನಟನ ಹೆಸರು ಹೇಳಿಕೊಂಡು ಕೋಟ್ಯಂತರ ರೂ ಮೋಸ ಮಾಡಿರುವ ದಂಪತಿ ವಿರುದ್ದ ಸೋಲದೇವನಹಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:35 pm, Thu, 13 November 25

Follow Us
Manjunath KB
Manjunath KB
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ