AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಾಂತರ ರೂ ಮೌಲ್ಯದ ಹಸುಗಳ ಕಳ್ಳತನ: ಒಂದು ಹಸುವಿನ ಕತ್ತು ಕೊಯ್ದ ಕೀಚಕರು

ವಿಜಯಲಕ್ಷ್ಮಿ ಎಂಬುವವರು ಮಗನ ಆಸೆಯಂತೆ ಗಿರ್ ಹಸುಗಳನ್ನು ತಂದಿದ್ದರು. ತಮ್ಮ ಮನೆ ಮಕ್ಕಳಂತೆ ಮುದ್ದಾಗಿ ಸಾಕಿದ್ದರು. ಆದರೆ ಹೈನುಗಾರಿಕೆ ಮಾಡುವ ಆಸೆಯಲ್ಲಿದ್ದ ಅವರಿಗೆ ಖತರ್ನಾಕ್ ಕಳ್ಳರು ಶಾಕ್ ಕೊಟ್ಟಿದ್ದಾರೆ. ನಾಲ್ಕರ ಪೈಕಿ ಮೂರು ಹಸುಗಳನ್ನು ಕದ್ದು ಪರಾರಿಯಾಗಿದ್ದಾರೆ. ಒಂದು ಹಸು ಖದೀಮರಿಂದ ತಪ್ಪಿಸಿಕೊಂಡು ಬಂದಿದೆ.

ಲಕ್ಷಾಂತರ ರೂ ಮೌಲ್ಯದ ಹಸುಗಳ ಕಳ್ಳತನ: ಒಂದು ಹಸುವಿನ ಕತ್ತು ಕೊಯ್ದ ಕೀಚಕರು
ಗಿರ್ ಹಸು
ಗಂಗಾಧರ​ ಬ. ಸಾಬೋಜಿ
|

Updated on: Dec 08, 2025 | 4:00 PM

Share

ನೆಲಮಂಗಲ, ಡಿಸೆಂಬರ್​​ 08: ಲಕ್ಷಾಂತರ ರೂ. ಮೌಲ್ಯದ ಮೂರು ಗಿರ್​​ ಹಸುಗಳನ್ನು (Gyr cattle) ಖದೀಮರು ಕಳ್ಳತನ (theft) ಮಾಡಿ ಪರಾರಿಯಾಗಿರುವಂತಹ ಘಟನೆ ನೆಲಮಂಗಲ ತಾಲೂಕಿನ ದಾಸನಪುರ ಹೋಬಳಿ ಗೌಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳ್ಳತನ ಮಾಡಿದಷ್ಟೇ ಅಲ್ಲದೆ, ಒಂದು ಹಸುವಿನ ಕತ್ತು ಕೋಯ್ದು ವಿಕೃತಿ ಮೆರೆದಿದ್ದಾರೆ. ಅಚ್ಚರಿಯ ಸಂಗತಿ ಎಂದರೆ ಖದೀಮರ ಕೈಯಿಂದ ಅದೊಂದು ಹಸು ತಪ್ಪಿಸಿಕೊಂಡು ಬಂದಿದೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಿರ್​​ ಹಸುಗಳನ್ನು ಕದ್ದು ಪರಾರಿಯಾದ ಖತರ್ನಾಕ್ ಕಳ್ಳರು​​

ನೆಲಮಂಗಲ ತಾಲೂಕಿನ ಗೌಡಹಳ್ಳಿ ಗ್ರಾಮದ ವಿಜಯಲಕ್ಷ್ಮಿ ಎಂಬುವವರು ತಮ್ಮ ಮಗ ಹೈನುಗಾರಿಕೆ ಮಾಡುವ ಆಸೆ ಹೊಂದಿದ್ದರಿಂದ ಗುಜರಾತ್​​ನಿಂದ ಗಿರ್ ಹಸುಗಳನ್ನು ತರಿಸಿದ್ದರು. ಎರಡು ವರ್ಷಗಳಿಂದ ಗಿರ್ ಹಸುಗಳ ಜೊತೆ ಒಡನಾಟ ಹೊಂದಿದ್ದರು. ಆದರೆ ಖತರ್ನಾಕ್ ಕಳ್ಳರು ಈ ಹಸುಗಳನ್ನು ಕದ್ದು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿದ್ದ ಹಸುವನ್ನು ಕದ್ದೊಯ್ದು ಕೊಂದ ಆರೋಪಿಗಳು ಅರೆಸ್ಟ್​

ಎರಡು ದಿನಗಳ ಹಿಂದೆ ಶೆಡ್​​ನಲ್ಲಿದ್ದ ನಾಲ್ಕು ಗಿರ್ ಹಸುಗಳನ್ನು ಕಳ್ಳತನ ಮಾಡಿದ್ದಾರೆ. ಈ ವೇಳೆ ಒಂದು ಹಸು ಗಲಾಟೆ ಮಾಡಿದ್ದು, ಹಸುವಿನ ಕತ್ತು ಕೊಯ್ದಿದ್ದಾರೆ. ಅಲ್ಲದೆ, ಆ ಹಸು ಅವರಿಂದ ತಪ್ಪಿಸಿಕೊಂಡು ಓಡಿ ಬಂದಿದೆ. ಬಳಿಕ ಮಾಲೀಕರು ಬಾಕಿ ಹಸುಗಳಿಗಾಗಿ ಹುಡುಕಾಡಿದ್ದು, ಎಲ್ಲಿಯೂ ಪತ್ತೆಯಾಗದ ಹಿನ್ನಲೆ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರುಗಳ ಮೇಲೆ ಕ್ರೌರ್ಯ ಹೆಚ್ಚಳ: ರಾಮನಗರದಲ್ಲಿ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು

ಕೇವಲ ಇದೊಂದೆ ಪ್ರಕರಣವಲ್ಲ ಮಾದನಾಯಕನಹಳ್ಳಿ, ನೆಲಮಂಗಲ ಭಾಗದಲ್ಲಿ ಈ ರೀತಿಯಾಗಿ ಹಸುಗಳ ಕಳ್ಳತನ ಪ್ರಕರಣಗಳು ಮೇಲಿಂದ ಮೇಲೆ ಸಂಭವಿಸುತ್ತಿವೆ. ಹೀಗಾಗಿ ಪೊಲೀಸರು ಆರೋಪಿಗಳಿಗೆ ತಕ್ಕ ಪಾಠ ಕಲಿಸಬೇಕಿದೆ.

ವರದಿ: ಮಂಜುನಾಥ್ ಟಿವಿನೈನ್ ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ