AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ​ ಪೊಲೀಸ್​ನಿಂದ ಲೈಂಗಿಕ ಕಿರುಕುಳ ಆರೋಪ: ರಕ್ಷಣೆಕೋರಿ ಮನವಿ ಮಾಡಿದ ಮಂಗಳಮುಖಿಯರು

ಫೇಕ್​ ಪೊಲೀಸ್​ ರಾಮಾಂಜಿನಯ್ಯ ಎಂಬುವವರಿಂದ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ನಂಬರ್​ ಪ್ಲೇಟ್​ ಇಲ್ಲದ ಬೈಕ್​ ತಂದು ನಾನು ಬಂದಾಗ ಮಾಮೂಲಿ ಕೊಡಬೇಕು. ಇಲ್ಲದಿದ್ದರೆ ತೊಂದರೆ ಕೊಡ್ತೇನೆಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ರಕ್ಷಣೆ ನೀಡುವಂತೆ ಮಾದನಾಯಕನಹಳ್ಳಿ ಪೊಲೀಸರಿಗೆ ಮಂಗಳಮುಖಿಯರು ಮನವಿ ಮಾಡಿದ್ದಾರೆ. 

ನಕಲಿ​ ಪೊಲೀಸ್​ನಿಂದ ಲೈಂಗಿಕ ಕಿರುಕುಳ ಆರೋಪ: ರಕ್ಷಣೆಕೋರಿ ಮನವಿ ಮಾಡಿದ ಮಂಗಳಮುಖಿಯರು
ಫೇಕ್​ ಪೊಲೀಸ್​ ರಾಮಾಂಜಿನಯ್ಯ
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ| Edited By: |

Updated on: Apr 08, 2024 | 4:16 PM

Share

ನೆಲಮಂಗಲ, ಏಪ್ರಿಲ್​ 08: ಪೊಲೀಸ್​ ಎಂದು ಹೇಳಿಕೊಂಡು ಮಂಗಳಮುಖಿಯರಿಗೆ (transgender) ಕಿರುಕುಳ ನೀಡಿರುವುದಾಗಿ ಆರೋಪ ಕೇಳಿಬಂದಿದೆ. ಮಾದನಾಯಕನಹಳ್ಳಿಯಲ್ಲಿ ಘಟನೆ ನಡೆದಿದ್ದು, ಫೇಕ್​ ಪೊಲೀಸ್​ ರಾಮಾಂಜಿನಯ್ಯ ಎಂಬುವವರಿಂದ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ನಂಬರ್​ ಪ್ಲೇಟ್​ ಇಲ್ಲದ ಬೈಕ್​ ತಂದು ನಾನು ಬಂದಾಗ ಮಾಮೂಲಿ ಕೊಡಬೇಕು. ಇಲ್ಲದಿದ್ದರೆ ತೊಂದರೆ ಕೊಡ್ತೇನೆಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ರಕ್ಷಣೆ ನೀಡುವಂತೆ ಮಾದನಾಯಕನಹಳ್ಳಿ ಪೊಲೀಸರಿಗೆ ಮಂಗಳಮುಖಿಯರು ಮನವಿ ಮಾಡಿದ್ದಾರೆ.

ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

ಉತ್ತರ ಕನ್ನಡ: ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಬಿಜ್ಜೂರಿನಲ್ಲಿ ಕಳ್ಳರು ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿರುವಂತಹ ಘಟನೆ ನಡೆದಿದೆ. ಉದಯ್​ಗೌಡ ಎಂಬುವರ ಮನೆಯಲ್ಲಿ ಚಿನ್ನ ಕಳ್ಳತನವಾಗಿದೆ. ಮನೆಯಲ್ಲಿದ್ದ 34 ಗ್ರಾಂ ಚಿನ್ನವನ್ನು ಖದೀಮರು ಎಗರಿಸಿದ್ದಾರೆ. ಗೋಕರ್ಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಮೃತಪಟ್ಟ ವ್ಯಕ್ತಿ ಮತ್ತೆ ಜೀವಂತ! ರಾಮನಗರ ಜಿಲ್ಲೆಯಲ್ಲೊಂದು ಅಚ್ಚರಿ ಘಟನೆ

ಶಿರಸಿ ನಗರದಲ್ಲಿ ಬಾರೀ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗಿಗೆ ಕನ್ನಿಕಾ ಪ್ರಿಟಿಂಗ್ ಪ್ಲೆಕ್ಸ್ ಸುಟ್ಟು ಕರಕಲಾಗಿದೆ. ಸುಮಾರು 15 ಲಕ್ಷ ರೂ ಗೂ ಹೆಚ್ಚಿನ ಹಾನಿ ಆಗಿದೆ. ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಶಿರಸಿ ನಗರದ ಸೀತಾರಾಮ ಎಂಬುವವರಿಗೆ ಸೇರಿದ ಪ್ರಿಟಿಂಗ್ ಪ್ಲೆಕ್ಸ್ ಇದಾಗಿದೆ. ಬೆಂಕಿ ಕಾಣಿಸಿಕೊಂಡ ಬಗ್ಗೆ ಇದುವರೆಗೂ ಕಾರಣ ತಿಳಿದು ಬಂದಿಲ್ಲ.

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕ ಅರೆಸ್ಟ್​

ಉಡುಪಿ: ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವಂಜಾರಕಟ್ಟೆ ನಿವಾಸಿ ರಾಜೇಂದ್ರ ಆಚಾರ್‌ (58) ಬಂಧಿತ. 14 ಮಂದಿ ಅಪ್ರಾಪ್ತ ವಿದ್ಯಾರ್ಥಿನಿಯರ ದೂರಿನ ಹಿನ್ನೆಲೆ ಅರೆಸ್ಟ್‌ ಮಾಡಲಾಗಿದೆ.

ಇದನ್ನೂ ಓದಿ: ಕಾರವಾರ: ಹಜ್ ಯಾತ್ರೆಗೆ ತೆರಳಿದ್ದ ಮುಂಡಗೋಡದ ಒಂದೇ ಕುಟುಂಬದ ಮೂವರು ಸಾವು

ಬಂಧಿತ ರಾಜೇಂದ್ರ ಆಚಾರ್ ಇಚ್ಚೋಡಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕರೂ ಆಗಿದ್ದಾರೆ. ಈ ಹಿಂದೆಯೂ ಹಲವು ಬಾರಿ ಆರೋಪ ಕೇಳಿ ಬಂದಿತ್ತು. ಮಕ್ಕಳ ಕಲ್ಯಾಣ ಸಮಿತಿಯ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!