AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid-19 Cluster | ಬೆಂಗಳೂರಿನ ಸಂಭ್ರಮ ಕಾಲೇಜ್ ಕ್ಯಾಂಪಸ್​ನಲ್ಲಿ 10 ವಿದ್ಯಾರ್ಥಿಗಳಿಗೆ ಕೊರೊನಾ

ಕೊರೊನಾ ಕೇಸ್​ಗಳು ದೃಢವಾದ ಬೆನ್ನಲ್ಲೇ ಎಚ್ಚೆತ್ತಿರುವ ಕಾಲೇಜಿನ ಆಡಳಿತ ಮಂಡಳಿ, ಪರೀಕ್ಷೆ ಬರೆಯುವವರನ್ನು ಬಿಟ್ಟು ಮತ್ಯಾರಿಗೂ ಕ್ಯಾಂಪಸ್​ ಒಳಗೆ ತೆರಳಲು ಅವಕಾಶ ನೀಡುತ್ತಿಲ್ಲ.

Covid-19 Cluster | ಬೆಂಗಳೂರಿನ ಸಂಭ್ರಮ ಕಾಲೇಜ್ ಕ್ಯಾಂಪಸ್​ನಲ್ಲಿ 10 ವಿದ್ಯಾರ್ಥಿಗಳಿಗೆ ಕೊರೊನಾ
ಸಂಗ್ರಹ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Skanda

Updated on:Feb 27, 2021 | 2:40 PM

ಬೆಂಗಳೂರು: ಕೊರೊನಾ ಸೋಂಕಿನ ಅಬ್ಬರ ನಿಧಾನವಾಗಿ ಕಡಿಮೆ ಆಗುತ್ತಿದೆ ಎನ್ನುವಾಗಲೇ ಮತ್ತೆ ಕೊವಿಡ್​-19 ಕೇಸ್​ಗಳು ಏರುಗತಿಯಲ್ಲಿ ಸಾಗುತ್ತಿವೆ. ಇಂದು ಯಲಹಂಕದ ಅಟ್ಟೂರು​ ಭಾಗದಲ್ಲಿರುವ ಸಂಭ್ರಮ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಸೈನ್ಸಸ್ ಕ್ಯಾಂಪಸ್​ನಲ್ಲಿ 10 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ದೃಢವಾಗಿದ್ದು, ಇದನ್ನು ಕೊವಿಡ್ ಕ್ಲಸ್ಟರ್​ ಎಂದು ಗುರುತಿಸಲಾಗಿದೆ. ಸಂಭ್ರಮ ಇಂಜಿನಿಯರಿಂಗ್​ ಕಾಲೇಜ್​ ಕೂಡ ಇದೇ ಕ್ಯಾಂಪಸ್​ನಲ್ಲಿದ್ದು, ಇಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಇದು ಸಾಕಷ್ಟು ಆತಂಕ ಮೂಡಿಸಿದೆ. ಕೊರೊನಾ ಪಾಸಿಟಿವ್​ ಬಂದ ವಿದ್ಯಾರ್ಥಿಗಳು ಪಿಜಿಯಲ್ಲಿ ಉಳಿದುಕೊಳ್ಳುವವರಾಗಿದ್ದಾರೆ. ಕೊರೊನಾ ಕೇಸ್​ಗಳು ದೃಢವಾದ ಬೆನ್ನಲ್ಲೇ ಎಚ್ಚೆತ್ತಿರುವ ಕಾಲೇಜಿನ ಆಡಳಿತ ಮಂಡಳಿ, ಪರೀಕ್ಷೆ ಬರೆಯುವವರನ್ನು ಬಿಟ್ಟು ಮತ್ಯಾರಿಗೂ ಕ್ಯಾಂಪಸ್​ ಒಳಗೆ ತೆರಳಲು ಅವಕಾಶ ನೀಡುತ್ತಿಲ್ಲ. ಕೊರೊನಾ ಪಾಸಿಟಿವ್​ ಬಂದ ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದವರನ್ನು ನಾವು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದ್ದೇವೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಯಲಹಂಕಾ ನ್ಯೂ ಟೌನ್​ ಅಪಾರ್ಟ್​ಮೆಂಟ್​ನಲ್ಲಿ ಸಾಕಷ್ಟು ಕೊರೊನಾ ಕೇಸ್​ಗಳು ವರದಿ ಆಗಿದ್ದವು. ಈಗ ಅಲ್ಲಿ ಯಾವುದೇ ಹೊಸ ಕೇಸ್​ಗಳು ವರದಿ ಆಗಿಲ್ಲ. ಇದು ಅಧಿಕಾರಿಗಳಿಗೆ ನೆಮ್ಮದಿ ತಂದಿದೆ.

ಸಣ್ಣ ಪ್ರದೇಶದಲ್ಲಿ ಹೆಚ್ಚು ಜನರು ಉಳಿದುಕೊಳ್ಳುವಂತಹ ಹೊಸ್ಟೇಲ್​ಗಳು, ಪಿಜಿ, ಅಪಾರ್ಟ್​ಮೆಂಟ್​ಗಳಲ್ಲಿ ಕೊರೊನಾ ಪ್ರಕರಣ ಹೆಚ್ಚುವ ಭಯ ಕಾಡಿದೆ. ಈಗ ಶಾಲಾ-ಕಾಲೇಜುಗಳು ಮತ್ತೆ ಆರಂಭವಾಗಿದ್ದು, ಅಲ್ಲಿಯೂ ಕೇಸ್​ಗಳು ಹೆಚ್ಚುವ ಸಾಧ್ಯತೆ ಇದೆ ಎನ್ನುವುದು ಆರೋಗ್ಯ ಅಧಿಕಾರಿಗಳ ಅಭಿಪ್ರಾಯ. ಇನ್ನು, ಜಿಮ್​, ಪಾರ್ಕ್​ ಮತ್ತು ಲಿಫ್ಟ್​ ಸೇರಿ ಅನೇಕ ಪ್ರದೇಶಗಳನ್ನು ಸ್ಯಾನಿಟೈಸ್​ ಮಾಡುವ ಅಗತ್ಯವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಹಾರಾಷ್ಟ್ರ, ಕೇರಳ ಭಾಗದಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚುತ್ತಿದೆ. ಆದರೆ, ಸದ್ಯ ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಆದಾಗ್ಯೂ, ಕೊರೊನಾ ಹೆಚ್ಚದಂತೆ ನೋಡಿಕೊಳ್ಳಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದು ಆರೋಗ್ಯದ ಅಧಿಕಾರಿಗಳ ಮಾತು.

ಇದನ್ನೂ ಓದಿ: ಆಂಧ್ರ ದಿಕ್ಕಿನಿಂದಲೂ ಬರುತ್ತಿದೆ ಕೊರೊನಾ ಮಹಾಮಾರಿ! ಬಳ್ಳಾರಿಯ ಸತ್ಯನಾರಾಯಣಪೇಟೆ ಅಪಾಟ್ಮೆಂಟ್​ನಲ್ಲಿ 7 ಜನರಿಗೆ ಕೊರೊನಾ ದೃಢ!

ಬೆಂಗಳೂರಿನ ಅಪಾರ್ಟ್‌ಮೆಂಟ್​ನಲ್ಲಿ ಹೆಚ್ಚುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಆನೇಕಲ್‌ನಲ್ಲಿಯೂ ಕಾಲಿಟ್ಟಿದೆ!

Published On - 2:33 pm, Sat, 27 February 21

ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್