ರೈಲ್ವೇ ಪ್ರಯಾಣಿಕರಿಗೆ ಗುಡ್​​ನ್ಯೂಸ್​​: ಬೆಂಗಳೂರು, ಮುಂಬೈ ಎಕ್ಸ್​​ಪ್ರೆಸ್​​ ಟ್ರೈನ್​​ಗೆ ಹಸಿರು ನಿಶಾನೆ

ಬೆಂಗಳೂರು-ಮುಂಬೈ ನಡುವಿನ ಹೊಸ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಾಗಿದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಲೋಕಮಾನ್ಯ ತಿಲಕ್ ಟರ್ಮಿನಲ್‌ವರೆಗೆ ಸಂಚರಿಸುವ ಈ ರೈಲು, ವಾರಕ್ಕೆ ಎರಡು ದಿನ ಸೇವೆಯನ್ನು ಒದಗಿಸಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಪುಣೆ ನಗರಗಳ ಮಾರ್ಗವಾಗಿ ರೈಲು ಸಂಚರಿಸಲಿದ್ದು, ಇದು 17 ಬೋಗಿಗಳನ್ನು ಒಳಗೊಂಡಿದೆ.

ರೈಲ್ವೇ ಪ್ರಯಾಣಿಕರಿಗೆ ಗುಡ್​​ನ್ಯೂಸ್​​: ಬೆಂಗಳೂರು, ಮುಂಬೈ ಎಕ್ಸ್​​ಪ್ರೆಸ್​​ ಟ್ರೈನ್​​ಗೆ ಹಸಿರು ನಿಶಾನೆ
ಬೆಂಗಳೂರು, ಮುಂಬೈ ಎಕ್ಸ್ಪ್ರೆಸ್ ಟ್ರೈನ್​​ಗೆ ಹಸಿರು ನಿಶಾನೆ
Image Credit source: Tv9 Kannada
Edited By:

Updated on: May 17, 2026 | 11:40 AM

ಬೆಂಗಳೂರು, ಮೇ 17: ಬೆಂಗಳೂರು-ಮುಂಬೈ ನಡುವೆ ಸಂಚಾರ ಮಾಡಲಿರುವ ಹೊಸ ಎಕ್ಸ್​​ಪ್ರೆಸ್​​ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಎಸ್ಎಂವಿಟಿ ರೈಲ್ವೇ ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ವರ್ಚುವಲ್​​ ಮೂಲಕ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಸಂಸದರಾದ ಪಿಸಿ ಮೋಹನ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಬೆಂಗಳೂರು ಟು ಮುಂಬೈಗೆ ಸಂಚರಿಸುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಪ್ರಯಾಣಿಕರ ಅನುಕೂಲದ ದೃಷ್ಟಿಯಿಂದ ಇಲಾಖೆ ಈ ಹೊಸ ರೈಲನ್ನು ಘೋಷಿಸಿತ್ತು.

ವಾರದಲ್ಲಿ ಎರಡು ದಿನ ಸಂಚಾರ

ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್​​ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಲ್​​ ನಡುವೆ
ವಾರಕ್ಕೆ ಎರಡು ದಿನ ಬೆಂಗಳೂರು ಟು ಮುಂಬೈ ನಡುವೆ ಈ ಎಕ್ಸ್​​ಪ್ರೆಸ್​​ ರೈಲು ಸಂಚಾರ ‌ಮಾಡಲಿದೆ. ಶನಿವಾರ ಮತ್ತು ಮಂಗಳವಾರದಂದು ಬೆಂಗಳೂರಿನಿಂದ ಮುಂಬೈಗೆ, ಭಾನುವಾರ ಮತ್ತು ಬುಧವಾರ ಮುಂಬೈನಿಂದ ಬೆಂಗಳೂರಿಗೆ ಓಡಾಟ ನಡೆಸಲಿದೆ. ಬೆಂಗಳೂರು, ಉತ್ತರ ಕರ್ನಾಟಕದ ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಮಹಾರಾಷ್ಟ್ರದ ಪುಣೆ, ಮುಂಬೈ ನಗರಗಳ ನಡುವೆ ಸಂಪರ್ಕ ಕಲ್ಪಿಸಲಿದೆ. ಈ ರೈಲು 17 ಕೋಚ್​​ಗಳನ್ನು ಹೊಂದಿದ್ದು, ಒಂದು ಎಸಿ 2-ಟೈರ್, ನಾಲ್ಕು ಎಸಿ 3-ಟೈರ್, ಆರು ಸ್ಲೀಪರ್ ಮತ್ತು ನಾಲ್ಕು ಸಾಮಾನ್ಯ ದರ್ಜೆಯ ಬೋಗಿಗಳನ್ನು ಒಳಗೊಂಡಿದೆ.

ಇದನ್ನೂ ಓದಿ: ದರ ಏರಿಕೆ ಬಿಸಿ​​; ಸರ್ಕಾರದ ಮೊರೆ ಹೋದ ಆಟೋ ಚಾಲಕರು

ಕಾರ್ಯಕ್ರಮಕ್ಕೆ ಮೆಟ್ರೋದಲ್ಲಿ ಬಂದ ಸೋಮಣ್ಣ

ಪೆಟ್ರೋಲ್ ಮಿತ ಬಳಕೆ, ಚಿನ್ನ ಖರೀದಿಸದಂತೆ ಮೋದಿ ಕರೆ ಹಿನ್ನೆಲೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿ ಬಂದಿದ್ದಾರೆ. ಎಂ.ಜಿ.ರಸ್ತೆ ನಿಲ್ದಾಣದಿಂದ ಸ್ವಾಮಿ ವಿವೇಕಾನಂದ ನಿಲ್ದಾಣದವರೆಗೆ ಮೆಟ್ರೋ ಪ್ರಯಾಣ ಮಾಡಿದ ಸಚಿವರು, ಅಲ್ಲಿಂದ SMVT ರೈಲು ನಿಲ್ದಾಣದವರೆಗೆ ಎಲೆಕ್ಟ್ರಿಕ್ ಬೈಕ್​ನಲ್ಲಿ ಪ್ರಯಾಣಿಸಿ ಗಮನ ದೆಳೆದಿದ್ದಾರೆ. ಈ ವೇಳೆ ವಿ.ಸೋಮಣ್ಣಗೆ ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ.ಮೋಹನ್ ಜೊತೆಯಾಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:39 am, Sun, 17 May 26

ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us